ಮೈಸೂರು: ಮಹಾರಾಜ ಟ್ರೋಫಿ (ಕೆಎಸ್ಸಿಎ) ಟಿ20 2024ರ ಪಂದ್ಯಾವಳಿಗೆ ಎಲ್ಲಾ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಇದೇ ಆಗಸ್ಟ್ 15 ರಿಂದ ಆರಂಭವಾಗಲಿರುವ ಮಹಾರಾಜ ಟ್ರೋಫಿ 2024ರ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಇಂದು (ಶುಕ್ರವಾರ, ಆ.1) ನಗರದ ಮಾನಸ ಗಂಗೋತ್ರಿಯಲ್ಲಿನ ಗ್ಲೇಡ್ಸ್ ಮೈದಾನದಲ್ಲಿ ಮೈಸೂರು ವಾರಿಯರ್ಸ್ ತಂಡ ತನ್ನ ಅಭ್ಯಾಸ ಆರಂಭಿಸಿದೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್ 15 ರಿಂದ ಸೆಪ್ಟೆಂಬರ್ 1 ವರೆಗೆ ಈ ಟೂರ್ನಿ ನಡೆಯಲಿದ್ದು, ಇದಕ್ಕಾಗಿ ಮೈಸೂರಿನಲ್ಲಿ ಸಮರಭ್ಯಾಸ ನಡೆಸುತ್ತಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರ ವರೆಗೆ ಅಭ್ಯಾಸ ನಡೆಸಿದ ವಾರಿಯರ್ಸ್ ತಂಡ ಹೆಡ್ ಕೋಚ್ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದ್ದಾರೆ. ಇನ್ನು ಅನುಭವಿ ಆಲ್ ರೌಂಡರ್ ಗೌತಮ್, ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ಕಾರಣಾಂತರಗಳಿಂದ ಅಭ್ಯಾಸಕ್ಕೆ ಆಗಮಿಸಿಲ್ಲ.
ಈ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡವು ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾನ್ಸರ್ನ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್, ಮತ್ತು ಶಿವಮೊಗ್ಗ ಲಯನ್ಸ್ ಸೇರಿದಂತೆ ಐದು ತಂಡಗಳ ವಿರುದ್ಧ ಆಡಲಿದೆ.
ಮೈಸೂರು ವಾರಿಯರ್ಸ್ ತಂಡದ ಅಟಗಾರರ ಹೆಸರುಗಳು ಹೀಗಿವೆ:
1. ಕಾರ್ತಿಕ್.ಸಿ ಅಜಿತ್
2. ಕಾರ್ತಿಕ್.ಎಸ್.ಯು
3. ಕರುಣ್ ನಾಯರ್
4. ಸಮಿತ್ ದ್ರಾವಿಡ್
5. ಹರ್ಷಿಲ್ ಧರ್ಮನಿ
6. ಮನೋಜ್ ಭಾಂಡಗೆ
7. ಜಗದೀಶ ಸುಚಿತ್
8. ಗೌತಮ ಕೃಷ್ಣಪ್ಪ
9. ವಿದ್ಯಾಧರ ಪಾಟೀಲ
10. ವೆಂಕಟೇಶ ಎಂ
11. ಗೌತಮ ಮಿಶ್ರಾ
12. ಧನುಷ್ಯ ಗೌಡ
13. ದೀಪಕ್ ದೇವಾಡಿಗ
14. ಸುಮಿತ್ ಕುಮಾರ್
15. ಸ್ಮಯನ್ ಶ್ರೀವಾಸ್ತವ
16. ಜಾಸ್ಪರ್ ಇ ಜಿ
17. ಸರ್ಫರಾಜ್ ಅಶ್ರಫ್
18. ಪ್ರಸಿದ್ಧ ಕೃಷ್ಣ
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…
ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…