ಮೈಸೂರು: ಮಹಾರಾಜ ಟ್ರೋಫಿ (ಕೆಎಸ್ಸಿಎ) ಟಿ20 2024ರ ಪಂದ್ಯಾವಳಿಗೆ ಎಲ್ಲಾ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಇದೇ ಆಗಸ್ಟ್ 15 ರಿಂದ ಆರಂಭವಾಗಲಿರುವ ಮಹಾರಾಜ ಟ್ರೋಫಿ 2024ರ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಇಂದು (ಶುಕ್ರವಾರ, ಆ.1) ನಗರದ ಮಾನಸ ಗಂಗೋತ್ರಿಯಲ್ಲಿನ ಗ್ಲೇಡ್ಸ್ ಮೈದಾನದಲ್ಲಿ ಮೈಸೂರು ವಾರಿಯರ್ಸ್ ತಂಡ ತನ್ನ ಅಭ್ಯಾಸ ಆರಂಭಿಸಿದೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್ 15 ರಿಂದ ಸೆಪ್ಟೆಂಬರ್ 1 ವರೆಗೆ ಈ ಟೂರ್ನಿ ನಡೆಯಲಿದ್ದು, ಇದಕ್ಕಾಗಿ ಮೈಸೂರಿನಲ್ಲಿ ಸಮರಭ್ಯಾಸ ನಡೆಸುತ್ತಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರ ವರೆಗೆ ಅಭ್ಯಾಸ ನಡೆಸಿದ ವಾರಿಯರ್ಸ್ ತಂಡ ಹೆಡ್ ಕೋಚ್ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದ್ದಾರೆ. ಇನ್ನು ಅನುಭವಿ ಆಲ್ ರೌಂಡರ್ ಗೌತಮ್, ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ಕಾರಣಾಂತರಗಳಿಂದ ಅಭ್ಯಾಸಕ್ಕೆ ಆಗಮಿಸಿಲ್ಲ.
ಈ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡವು ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾನ್ಸರ್ನ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್, ಮತ್ತು ಶಿವಮೊಗ್ಗ ಲಯನ್ಸ್ ಸೇರಿದಂತೆ ಐದು ತಂಡಗಳ ವಿರುದ್ಧ ಆಡಲಿದೆ.
ಮೈಸೂರು ವಾರಿಯರ್ಸ್ ತಂಡದ ಅಟಗಾರರ ಹೆಸರುಗಳು ಹೀಗಿವೆ:
1. ಕಾರ್ತಿಕ್.ಸಿ ಅಜಿತ್
2. ಕಾರ್ತಿಕ್.ಎಸ್.ಯು
3. ಕರುಣ್ ನಾಯರ್
4. ಸಮಿತ್ ದ್ರಾವಿಡ್
5. ಹರ್ಷಿಲ್ ಧರ್ಮನಿ
6. ಮನೋಜ್ ಭಾಂಡಗೆ
7. ಜಗದೀಶ ಸುಚಿತ್
8. ಗೌತಮ ಕೃಷ್ಣಪ್ಪ
9. ವಿದ್ಯಾಧರ ಪಾಟೀಲ
10. ವೆಂಕಟೇಶ ಎಂ
11. ಗೌತಮ ಮಿಶ್ರಾ
12. ಧನುಷ್ಯ ಗೌಡ
13. ದೀಪಕ್ ದೇವಾಡಿಗ
14. ಸುಮಿತ್ ಕುಮಾರ್
15. ಸ್ಮಯನ್ ಶ್ರೀವಾಸ್ತವ
16. ಜಾಸ್ಪರ್ ಇ ಜಿ
17. ಸರ್ಫರಾಜ್ ಅಶ್ರಫ್
18. ಪ್ರಸಿದ್ಧ ಕೃಷ್ಣ
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…