ಮೈಸೂರು: ಇದೇ ಆಗಸ್ಟ್ 15 ರಿಂದ ಸೆಪ್ಟೆಂಬರ್ 1 ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಮೈಸೂರು ವಾರಿಯರ್ಸ್ ತಂಡ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು.
ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಮೈಸೂರು ವಾರಿಯರ್ಸ್ ತಂಡದ ಮಾಲೀಕರು ಮತ್ತು ಸೈಕಲ್ ಪ್ಯೂರ್ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕರಾದ ಅರ್ಜುನ್ ರಂಗಾ, ಮೈಸೂರು ವಾರಿಯರ್ಸ್ ತಂಡದ ಕರುಣ್ ನಾಯರ್, ಸುಚಿತ್ ಜೆ, ಗೌತಮ್ ಕೆ, ಮನೋಜ್ ಭಾಂಡಗೆ, ಪ್ರಸಿದ್ಧ್ ಕೃಷ್ಣ, ಸಿ ಎ ಕಾರ್ತಿಕ್, ವೆಂಕಟೇಶ್ ಎಂ, ವಿದ್ಯಾಧರ್ ಪಾಟೀಲ್ ಮತ್ತು ಧನುಷ್ ಗೌಡ ಸೇರಿದಂತೆ ತಂಡದ 13 ಆಟಗಾರು ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆದು ಮಹಾರಾಜ ಟ್ರೋಫಿ ಪಂದ್ಯಾವಳಿಗಾಗಿ ತರಬೇತಿಗೆ ಚಾಲನೆ ನೀಡಿದರು.
ದೇಗುಲದಲ್ಲಿ 6 ಅಡಿ ಎತ್ತರದ ಅಖಂಡ ಜ್ಯೋತಿಯನ್ನು ಬೆಳಗಿಸಿದ ಮೈಸೂರು ವಾರಿಯರ್ಸ್ ತಂಡ ದೇವಿಯ ಆಶೀರ್ವಾದವನ್ನು ಪಡೆದರು.
ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…