ಬೆಂಗಳೂರು : ಮಹಾರಾಜ ಟ್ರೋಫಿ ಟಿ20 ಲೀಗ್ ನಲ್ಲಿ ಮೈಸೂರು ವಾರಿಯರ್ಸ್ ಮತ್ತೊಂದು ಗೆಲುವು ಸಾಧಿಸಿದೆ. ಪ್ರತಿಕೂಲ ಹವಾಮಾನದಿಂದಾಗಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಮೈಸೂರು ವಾರಿಯರ್ಸ್ ತಂಡವು 33 ರನ್ (ವಿಜೆಡಿ ವಿಧಾನ) ಗೆಲುವು ದಾಖಲಿಸಿತು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮೈಸೂರು ವಾರಿಯರ್ಸ್ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 185 ರನ್ ಕಲೆಹಾಕಿತು.
ಸಿಎ ಕಾರ್ತಿಕ್ (62) ಅರ್ಧ ಶತಕದಿಂದ ಬಲದಿಂದ ಮೈಸೂರು ಬೃಹತ್ ಮೊತ್ತ ಕಲೆಹಾಕಿತು. ಮತ್ತೊಂದೆಡೆ ಮನೋಜ್ ಭಾಂಡಗೆ (28) ಮತ್ತು ಜೆ ಸುಚಿತ್ (31) ತಂಡಕ್ಕೆ ಆಸರೆಯಾದರು. ಮೈಸೂರು ವಾರಿಯರ್ಸ್ 20 ಓವರ್ಗಳಲ್ಲಿ 185 ರನ್ ಕೆಲೆಹಾಕುವ ಮೂಲಕ ಬೆಂಗಳೂರಿಗೆ ಸ್ಪರ್ಧಾತ್ಮಕ ಮೊತ್ತವನ್ನು ನೀಡಿತು
ಬೆಂಗಳೂರು ಪರ ಶುಭಾಂಗ್ ಹೆಗ್ಡೆ (4/23) ಮತ್ತು ರಿಶಿ ಬೋಪಣ್ಣ (2/19) ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಮೈಸೂರು ನೀಡಿದ 185 ರನ್ ಬೆನ್ನತ್ತಿದ ಬೆಂಗಳೂರು ನಾಯಕ ಮಯಾಂಕ್ ಅಗರ್ವಾಲ್ (2) ಬೇಗನೆ ಕಳೆದುಕೊಂಡಿತು. ಸೂರಜ್ ಅಹುಜಾ ಕೇವಲ 20 ಎಸೆತಗಳಲ್ಲಿ 31 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಬೇರಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ.
ಬೆಂಗಳೂರು 11.1 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 85 ರನ್ಗಳಿ ಸಂಕಷ್ಟಕ್ಕೆ ಸಿಲುಕಿತ್ತು. ಇದೇ ವೇಳೆ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಮಳೆಯಿಂದಾಗಿ ಪಂದ್ಯ ರದ್ದಾಯಿತು, ವಿಜೆಡಿ ನಿಯಮದಡಿ ವಾರಿಯರ್ಸ್ 33 ರನ್ಗಳಿಂದ ಜಯ ಸಿಕ್ಕಿತು.
ಸಂಕ್ಷಿಪ್ತ ಸ್ಕೋರ್ :
ಮೈಸೂರು ವಾರಿಯರ್ಸ್: 20 ಓವರ್ಗಳಲ್ಲಿ 185/7 ಸಿಎ ಕಾರ್ತಿಕ್ 62(43), ಜಗದೀಶ ಸುಚಿತ್ 31*( 14), ಮನೋಜ್ ಭಾಂಡಗೆ 28(12) ಶುಭಾಂಗ್ ಹೆಗ್ಡೆ 4/23, ರಿಷಿ ಬೋಪಣ್ಣ 2/19, ಕುಮಾರ್ ಎಲ್ ಆರ್ 1/62
ಬೆಂಗಳೂರು ಬ್ಲಾಸ್ಟರ್ಸ್ : 11.1 ಓವರ್ಗಳಲ್ಲಿ 85/5, ಜಸ್ವಂತ್ ಆಚಾರ್ಯ 19(22), ಶುಭಾಂಗ್ ಹೆಗ್ಡೆ 13(8), ಸೂರಜ್ ಅಹುಜಾ 31(20), ಅಜಿತ್ ಕಾರ್ತಿಕ್ 2/16, ಜೆ ಸುಚಿತ್ 2/8, ಶ್ರೀಶಾ ಆಚಾರ್ 1/20
ಪಂದ್ಯ ಶ್ರೇಷ್ಠ : ಸಿಎ ಕಾರ್ತಿಕ್
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…
ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…