ಕ್ರೀಡೆ

ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಗೆದ್ದ ಮೈಸೂರು ವಾರಿಯರ್ಸ್

ಬೆಂಗಳೂರು :  ಮಹಾರಾಜ ಟ್ರೋಫಿ ಟಿ20 ಲೀಗ್‌ ನಲ್ಲಿ ಮೈಸೂರು ವಾರಿಯರ್ಸ್ ಮತ್ತೊಂದು ಗೆಲುವು ಸಾಧಿಸಿದೆ. ಪ್ರತಿಕೂಲ ಹವಾಮಾನದಿಂದಾಗಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಮೈಸೂರು ವಾರಿಯರ್ಸ್‌ ತಂಡವು 33 ರನ್ (ವಿಜೆಡಿ ವಿಧಾನ) ಗೆಲುವು ದಾಖಲಿಸಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮೈಸೂರು ವಾರಿಯರ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 185 ರನ್‌ ಕಲೆಹಾಕಿತು.

ಸಿಎ ಕಾರ್ತಿಕ್ (62) ಅರ್ಧ ಶತಕದಿಂದ ಬಲದಿಂದ ಮೈಸೂರು ಬೃಹತ್‌ ಮೊತ್ತ ಕಲೆಹಾಕಿತು. ಮತ್ತೊಂದೆಡೆ ಮನೋಜ್ ಭಾಂಡಗೆ (28) ಮತ್ತು ಜೆ ಸುಚಿತ್ (31) ತಂಡಕ್ಕೆ ಆಸರೆಯಾದರು. ಮೈಸೂರು ವಾರಿಯರ್ಸ್ 20 ಓವರ್‌ಗಳಲ್ಲಿ 185 ರನ್‌ ಕೆಲೆಹಾಕುವ ಮೂಲಕ ಬೆಂಗಳೂರಿಗೆ ಸ್ಪರ್ಧಾತ್ಮಕ ಮೊತ್ತವನ್ನು ನೀಡಿತು

ಬೆಂಗಳೂರು ಪರ ಶುಭಾಂಗ್ ಹೆಗ್ಡೆ (4/23) ಮತ್ತು ರಿಶಿ ಬೋಪಣ್ಣ (2/19) ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

ಮೈಸೂರು ನೀಡಿದ 185 ರನ್‌ ಬೆನ್ನತ್ತಿದ ಬೆಂಗಳೂರು ನಾಯಕ ಮಯಾಂಕ್ ಅಗರ್ವಾಲ್ (2) ಬೇಗನೆ ಕಳೆದುಕೊಂಡಿತು. ಸೂರಜ್ ಅಹುಜಾ ಕೇವಲ 20 ಎಸೆತಗಳಲ್ಲಿ 31 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಬೇರಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ.

ಬೆಂಗಳೂರು 11.1 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 85 ರನ್‌ಗಳಿ ಸಂಕಷ್ಟಕ್ಕೆ ಸಿಲುಕಿತ್ತು. ಇದೇ ವೇಳೆ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಮಳೆಯಿಂದಾಗಿ ಪಂದ್ಯ ರದ್ದಾಯಿತು, ವಿಜೆಡಿ ನಿಯಮದಡಿ ವಾರಿಯರ್ಸ್ 33 ರನ್‌ಗಳಿಂದ ಜಯ ಸಿಕ್ಕಿತು.

ಸಂಕ್ಷಿಪ್ತ ಸ್ಕೋರ್‌ :

ಮೈಸೂರು ವಾರಿಯರ್ಸ್: 20 ಓವರ್‌ಗಳಲ್ಲಿ 185/7  ಸಿಎ ಕಾರ್ತಿಕ್ 62(43), ಜಗದೀಶ ಸುಚಿತ್ 31*( 14), ಮನೋಜ್ ಭಾಂಡಗೆ 28(12) ಶುಭಾಂಗ್ ಹೆಗ್ಡೆ 4/23, ರಿಷಿ ಬೋಪಣ್ಣ 2/19, ಕುಮಾರ್ ಎಲ್ ಆರ್ 1/62

ಬೆಂಗಳೂರು ಬ್ಲಾಸ್ಟರ್ಸ್‌ : 11.1 ಓವರ್‌ಗಳಲ್ಲಿ 85/5, ಜಸ್ವಂತ್‌ ಆಚಾರ್ಯ 19(22), ಶುಭಾಂಗ್‌ ಹೆಗ್ಡೆ 13(8), ಸೂರಜ್‌ ಅಹುಜಾ 31(20), ಅಜಿತ್‌ ಕಾರ್ತಿಕ್‌ 2/16, ಜೆ ಸುಚಿತ್‌ 2/8, ಶ್ರೀಶಾ ಆಚಾರ್‌ 1/20

ಪಂದ್ಯ ಶ್ರೇಷ್ಠ : ಸಿಎ ಕಾರ್ತಿಕ್‌

andolanait

Recent Posts

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

1 hour ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

2 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

3 hours ago

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

3 hours ago

ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರೋದು ನಿಜ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…

4 hours ago

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

5 hours ago