ಕ್ರೀಡೆ

ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಗೆದ್ದ ಮೈಸೂರು ವಾರಿಯರ್ಸ್

ಬೆಂಗಳೂರು :  ಮಹಾರಾಜ ಟ್ರೋಫಿ ಟಿ20 ಲೀಗ್‌ ನಲ್ಲಿ ಮೈಸೂರು ವಾರಿಯರ್ಸ್ ಮತ್ತೊಂದು ಗೆಲುವು ಸಾಧಿಸಿದೆ. ಪ್ರತಿಕೂಲ ಹವಾಮಾನದಿಂದಾಗಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಮೈಸೂರು ವಾರಿಯರ್ಸ್‌ ತಂಡವು 33 ರನ್ (ವಿಜೆಡಿ ವಿಧಾನ) ಗೆಲುವು ದಾಖಲಿಸಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮೈಸೂರು ವಾರಿಯರ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 185 ರನ್‌ ಕಲೆಹಾಕಿತು.

ಸಿಎ ಕಾರ್ತಿಕ್ (62) ಅರ್ಧ ಶತಕದಿಂದ ಬಲದಿಂದ ಮೈಸೂರು ಬೃಹತ್‌ ಮೊತ್ತ ಕಲೆಹಾಕಿತು. ಮತ್ತೊಂದೆಡೆ ಮನೋಜ್ ಭಾಂಡಗೆ (28) ಮತ್ತು ಜೆ ಸುಚಿತ್ (31) ತಂಡಕ್ಕೆ ಆಸರೆಯಾದರು. ಮೈಸೂರು ವಾರಿಯರ್ಸ್ 20 ಓವರ್‌ಗಳಲ್ಲಿ 185 ರನ್‌ ಕೆಲೆಹಾಕುವ ಮೂಲಕ ಬೆಂಗಳೂರಿಗೆ ಸ್ಪರ್ಧಾತ್ಮಕ ಮೊತ್ತವನ್ನು ನೀಡಿತು

ಬೆಂಗಳೂರು ಪರ ಶುಭಾಂಗ್ ಹೆಗ್ಡೆ (4/23) ಮತ್ತು ರಿಶಿ ಬೋಪಣ್ಣ (2/19) ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

ಮೈಸೂರು ನೀಡಿದ 185 ರನ್‌ ಬೆನ್ನತ್ತಿದ ಬೆಂಗಳೂರು ನಾಯಕ ಮಯಾಂಕ್ ಅಗರ್ವಾಲ್ (2) ಬೇಗನೆ ಕಳೆದುಕೊಂಡಿತು. ಸೂರಜ್ ಅಹುಜಾ ಕೇವಲ 20 ಎಸೆತಗಳಲ್ಲಿ 31 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಬೇರಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ.

ಬೆಂಗಳೂರು 11.1 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 85 ರನ್‌ಗಳಿ ಸಂಕಷ್ಟಕ್ಕೆ ಸಿಲುಕಿತ್ತು. ಇದೇ ವೇಳೆ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಮಳೆಯಿಂದಾಗಿ ಪಂದ್ಯ ರದ್ದಾಯಿತು, ವಿಜೆಡಿ ನಿಯಮದಡಿ ವಾರಿಯರ್ಸ್ 33 ರನ್‌ಗಳಿಂದ ಜಯ ಸಿಕ್ಕಿತು.

ಸಂಕ್ಷಿಪ್ತ ಸ್ಕೋರ್‌ :

ಮೈಸೂರು ವಾರಿಯರ್ಸ್: 20 ಓವರ್‌ಗಳಲ್ಲಿ 185/7  ಸಿಎ ಕಾರ್ತಿಕ್ 62(43), ಜಗದೀಶ ಸುಚಿತ್ 31*( 14), ಮನೋಜ್ ಭಾಂಡಗೆ 28(12) ಶುಭಾಂಗ್ ಹೆಗ್ಡೆ 4/23, ರಿಷಿ ಬೋಪಣ್ಣ 2/19, ಕುಮಾರ್ ಎಲ್ ಆರ್ 1/62

ಬೆಂಗಳೂರು ಬ್ಲಾಸ್ಟರ್ಸ್‌ : 11.1 ಓವರ್‌ಗಳಲ್ಲಿ 85/5, ಜಸ್ವಂತ್‌ ಆಚಾರ್ಯ 19(22), ಶುಭಾಂಗ್‌ ಹೆಗ್ಡೆ 13(8), ಸೂರಜ್‌ ಅಹುಜಾ 31(20), ಅಜಿತ್‌ ಕಾರ್ತಿಕ್‌ 2/16, ಜೆ ಸುಚಿತ್‌ 2/8, ಶ್ರೀಶಾ ಆಚಾರ್‌ 1/20

ಪಂದ್ಯ ಶ್ರೇಷ್ಠ : ಸಿಎ ಕಾರ್ತಿಕ್‌

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago