Categories: ಕ್ರೀಡೆ

ಮೈಸೂರಿನ ಯುವ ಆಲ್‌ರೌಂಡರ್‌ ಮನ್ವಂತ್‌ ಕುಮಾರ್‌ ಡೆಲ್ಲಿ ತಂಡಕ್ಕೆ ಆಯ್ಕೆ

ಮೈಸೂರು: ಈ ಬಾರಿಯ ಐಪಿಎಲ್‌ ಕ್ರಿಕೆಟ್‌ ಟೂರ್ನಿಯು ಬಹಳ ವಿಶೇಷ ಎನಿಸಲಿದೆ. ಕರ್ನಾಟಕದ 13 ಆಟಗಾರರು ಹರಾಜಿನಲ್ಲಿ ಬಿಡ್‌ ಆಗಿದ್ದು, ಅದರಲ್ಲೂ ಮೈಸೂರಿನ ಯುವ ಪ್ರತಿಭೆ ಮನ್ವಂತ್‌ ಕುಮಾರ್‌ ಡೆಲ್ಲಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆದ ಐಪಿಎಲ್‌ ಮೆಗಾ ಹರಾಜಿನಲ್ಲಿ ಮೂಲ ಬೆಲೆ ರೂ 30 ಲಕ್ಷಕ್ಕೆ ಮನ್ವಂತ್‌ ಕುಮಾರ್‌ ಡೆಲ್ಲಿ ಪಾಲಾದರು.

ಮೊದಲ ಹರಾಜು ಪ್ರಕ್ರಿಯೆಯ ಸುತ್ತಿನಲ್ಲಿ ನನಗೆ ಅವಕಾಶ ಸಿಕ್ಕಿರಲಿಲ್ಲ. ನಾನು ಆಯ್ಕೆ ಆಗುವುದಿಲ್ಲ ಅಂದುಕೊಂಡಿದ್ದೆ, ಆದರೆ ಡೆಲ್ಲಿ ತಂಡ ಬಿಡ್‌ ಮಾಡಿರುವುದು ಅಚ್ಚರಿ ತಂದಿದೆ ಎಂದು ಮನ್ವಂತ್‌ ಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ.

20 ವರ್ಷ ತುಂಬಿರುವ ಮನ್ವಂತ್‌ ಆಲ್‌ರೌಂಡರ್‌ ಆಟಗಾರರಾಗಿದ್ದಾರೆ. ಈಗಾಗಲೇ ಕರ್ನಾಟಕ ತಂಡದಲ್ಲಿ ಆಡಿರುವ ಅನುಭವವಿರುವ ಮನ್ವಂತ್‌ ಸದ್ಯ ಸಯ್ಯದ್‌ ಮುಸ್ತಾಕ್‌ ಅಲಿ ಟ್ರೋಫಿಯಲ್ಲಿ ಆಡುತ್ತಿದ್ದಾರೆ.

ಐಪಿಎಲ್‌ನಲ್ಲಿ ಡೆಲ್ಲಿ ತಂಡಕ್ಕೆ ಸೇರ್ಪಡೆಯಾಗಿರುವ ಸಂದರ್ಭದಲ್ಲಿ ಸಂತಸ ವ್ಯಕ್ತಪಡಿಸಿದ ಅವರು, ಐಪಿಎಲ್‌ ಪ್ಲಾಟ್‌ಫಾರ್ಮ್‌ ನನ್ನ ಕ್ರಿಕೆಟ್‌ ಬೆಳವಣಿಗೆಗೆ ಒಳ್ಳೆಯ ವೇದಿಕೆಯಾಗಲಿದೆ. ಒಂದು ವೇಳೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕರೆ ನನ್ನ ಪ್ರತಿಭೆಯನ್ನು ಸಾಬೀತು ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

12ನೇ ವಯಸ್ಸನಲ್ಲಿ ಮನ್ಸೂರ್‌ ಅಹಮ್ಮದ್‌ ನೇತೃತ್ವದ MUCSC ಕ್ಲಬ್‌ನಲ್ಲಿ ತನ್ನ ಕ್ರಿಕೆಟ್‌ ಜೀವನ ಆರಂಭಿಸಿದ ಮನ್ವಂತ್, ನಂತರ RBNCC ತಂಡ ಸೇರಿದರು. ಈ ವೇಳೆ ಅವರಿಗೆ ಎಂ.ಎಸ್.ರವೀಂದ್ರ, ಬಾಲಚಂದರ್‌ ಸೇರಿದಂತೆ ಮೊದಲಾದವರು ಕೋಚ್‌ ಮಾಡಿದರು.

19 ವರ್ಷ ಹಾಗೂ 23 ವರ್ಷ ಒಳಗಿನ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ. 2023ರ ಮಹಾರಾಜ್‌ ಟ್ರೋಫಿ ಟಿ-20 ಟೂರ್ನಿಯಲ್ಲಿ 23 ವಿಕೆಟ್‌ಗಳನ್ನು ಪಡೆಯುವ ಮೂಲಕ ಪರ್ಪಲ್‌ ಕ್ಯಾಪ್‌ ಗೌರವಕ್ಕೆ ಪಾತ್ರರಾದರು. 2024ರ ಆವೃತ್ತಿಯಲ್ಲೂ 16 ವಿಕೆಟ್‌ ಪಡೆದು ಗಮನ ಸೆಳೆಯುವ ಮೂಲಕ ಐಪಿಎಲ್‌ ಟೂರ್ನಿಯಲ್ಲಿ ಆಡುವ ಅವಕಾಶದ ಬಾಗಿಲು ತೆರೆದಿದೆ.

ಕ್ರಿಕೆಟ್‌ ಹಿನ್ನೆಲೆ ಇಲ್ಲದ ಕುಟುಂಬ ಇದಾಗಿದ್ದು, ತಂದೆ ಎಸ್.‌ಲಕ್ಷ್ಮಿಕುಮಾರ್‌ ವೃತ್ತಿಯಲ್ಲಿ ಚಾಲಕ, ತಾಯಿ ಶ್ರೀದೇವಿ ಕುಮಾರ್‌ ಗೃಹಿಣಿಯಾಗಿದ್ದಾರೆ. ಆದರೆ ಅಣ್ಣ ಕ್ರಿಕೆಟರ್‌ ಆಗಿದ್ದು, ಮನ್ವಂತ್‌ ಕುಮಾರ್‌ಗೆ ಅಣ್ಣನೇ ಕ್ರಿಕೆಟ್‌ ಆಡಲು ಪ್ರೇರಣೆ ಎಂದು ಹೇಳಲಾಗುತ್ತಿದೆ. ಈ ವೇಳೆ ಐಪಿಎಲ್‌ಗೆ ಮಗನ ಆಯ್ಕೆ ಖುಷಿ ತಂದಿದೆ ಎಂದು ಕುಟುಂಬದವರು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

3 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

3 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

6 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

6 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

7 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

7 hours ago