Categories: ಕ್ರೀಡೆ

ಮೈಸೂರಿನ ಯುವ ಆಲ್‌ರೌಂಡರ್‌ ಮನ್ವಂತ್‌ ಕುಮಾರ್‌ ಡೆಲ್ಲಿ ತಂಡಕ್ಕೆ ಆಯ್ಕೆ

ಮೈಸೂರು: ಈ ಬಾರಿಯ ಐಪಿಎಲ್‌ ಕ್ರಿಕೆಟ್‌ ಟೂರ್ನಿಯು ಬಹಳ ವಿಶೇಷ ಎನಿಸಲಿದೆ. ಕರ್ನಾಟಕದ 13 ಆಟಗಾರರು ಹರಾಜಿನಲ್ಲಿ ಬಿಡ್‌ ಆಗಿದ್ದು, ಅದರಲ್ಲೂ ಮೈಸೂರಿನ ಯುವ ಪ್ರತಿಭೆ ಮನ್ವಂತ್‌ ಕುಮಾರ್‌ ಡೆಲ್ಲಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆದ ಐಪಿಎಲ್‌ ಮೆಗಾ ಹರಾಜಿನಲ್ಲಿ ಮೂಲ ಬೆಲೆ ರೂ 30 ಲಕ್ಷಕ್ಕೆ ಮನ್ವಂತ್‌ ಕುಮಾರ್‌ ಡೆಲ್ಲಿ ಪಾಲಾದರು.

ಮೊದಲ ಹರಾಜು ಪ್ರಕ್ರಿಯೆಯ ಸುತ್ತಿನಲ್ಲಿ ನನಗೆ ಅವಕಾಶ ಸಿಕ್ಕಿರಲಿಲ್ಲ. ನಾನು ಆಯ್ಕೆ ಆಗುವುದಿಲ್ಲ ಅಂದುಕೊಂಡಿದ್ದೆ, ಆದರೆ ಡೆಲ್ಲಿ ತಂಡ ಬಿಡ್‌ ಮಾಡಿರುವುದು ಅಚ್ಚರಿ ತಂದಿದೆ ಎಂದು ಮನ್ವಂತ್‌ ಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ.

20 ವರ್ಷ ತುಂಬಿರುವ ಮನ್ವಂತ್‌ ಆಲ್‌ರೌಂಡರ್‌ ಆಟಗಾರರಾಗಿದ್ದಾರೆ. ಈಗಾಗಲೇ ಕರ್ನಾಟಕ ತಂಡದಲ್ಲಿ ಆಡಿರುವ ಅನುಭವವಿರುವ ಮನ್ವಂತ್‌ ಸದ್ಯ ಸಯ್ಯದ್‌ ಮುಸ್ತಾಕ್‌ ಅಲಿ ಟ್ರೋಫಿಯಲ್ಲಿ ಆಡುತ್ತಿದ್ದಾರೆ.

ಐಪಿಎಲ್‌ನಲ್ಲಿ ಡೆಲ್ಲಿ ತಂಡಕ್ಕೆ ಸೇರ್ಪಡೆಯಾಗಿರುವ ಸಂದರ್ಭದಲ್ಲಿ ಸಂತಸ ವ್ಯಕ್ತಪಡಿಸಿದ ಅವರು, ಐಪಿಎಲ್‌ ಪ್ಲಾಟ್‌ಫಾರ್ಮ್‌ ನನ್ನ ಕ್ರಿಕೆಟ್‌ ಬೆಳವಣಿಗೆಗೆ ಒಳ್ಳೆಯ ವೇದಿಕೆಯಾಗಲಿದೆ. ಒಂದು ವೇಳೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕರೆ ನನ್ನ ಪ್ರತಿಭೆಯನ್ನು ಸಾಬೀತು ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

12ನೇ ವಯಸ್ಸನಲ್ಲಿ ಮನ್ಸೂರ್‌ ಅಹಮ್ಮದ್‌ ನೇತೃತ್ವದ MUCSC ಕ್ಲಬ್‌ನಲ್ಲಿ ತನ್ನ ಕ್ರಿಕೆಟ್‌ ಜೀವನ ಆರಂಭಿಸಿದ ಮನ್ವಂತ್, ನಂತರ RBNCC ತಂಡ ಸೇರಿದರು. ಈ ವೇಳೆ ಅವರಿಗೆ ಎಂ.ಎಸ್.ರವೀಂದ್ರ, ಬಾಲಚಂದರ್‌ ಸೇರಿದಂತೆ ಮೊದಲಾದವರು ಕೋಚ್‌ ಮಾಡಿದರು.

19 ವರ್ಷ ಹಾಗೂ 23 ವರ್ಷ ಒಳಗಿನ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ. 2023ರ ಮಹಾರಾಜ್‌ ಟ್ರೋಫಿ ಟಿ-20 ಟೂರ್ನಿಯಲ್ಲಿ 23 ವಿಕೆಟ್‌ಗಳನ್ನು ಪಡೆಯುವ ಮೂಲಕ ಪರ್ಪಲ್‌ ಕ್ಯಾಪ್‌ ಗೌರವಕ್ಕೆ ಪಾತ್ರರಾದರು. 2024ರ ಆವೃತ್ತಿಯಲ್ಲೂ 16 ವಿಕೆಟ್‌ ಪಡೆದು ಗಮನ ಸೆಳೆಯುವ ಮೂಲಕ ಐಪಿಎಲ್‌ ಟೂರ್ನಿಯಲ್ಲಿ ಆಡುವ ಅವಕಾಶದ ಬಾಗಿಲು ತೆರೆದಿದೆ.

ಕ್ರಿಕೆಟ್‌ ಹಿನ್ನೆಲೆ ಇಲ್ಲದ ಕುಟುಂಬ ಇದಾಗಿದ್ದು, ತಂದೆ ಎಸ್.‌ಲಕ್ಷ್ಮಿಕುಮಾರ್‌ ವೃತ್ತಿಯಲ್ಲಿ ಚಾಲಕ, ತಾಯಿ ಶ್ರೀದೇವಿ ಕುಮಾರ್‌ ಗೃಹಿಣಿಯಾಗಿದ್ದಾರೆ. ಆದರೆ ಅಣ್ಣ ಕ್ರಿಕೆಟರ್‌ ಆಗಿದ್ದು, ಮನ್ವಂತ್‌ ಕುಮಾರ್‌ಗೆ ಅಣ್ಣನೇ ಕ್ರಿಕೆಟ್‌ ಆಡಲು ಪ್ರೇರಣೆ ಎಂದು ಹೇಳಲಾಗುತ್ತಿದೆ. ಈ ವೇಳೆ ಐಪಿಎಲ್‌ಗೆ ಮಗನ ಆಯ್ಕೆ ಖುಷಿ ತಂದಿದೆ ಎಂದು ಕುಟುಂಬದವರು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

30 mins ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

34 mins ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

36 mins ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

44 mins ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

57 mins ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

1 hour ago