Categories: ಕ್ರೀಡೆ

ಮೈಸೂರಿನ ಯುವ ಆಲ್‌ರೌಂಡರ್‌ ಮನ್ವಂತ್‌ ಕುಮಾರ್‌ ಡೆಲ್ಲಿ ತಂಡಕ್ಕೆ ಆಯ್ಕೆ

ಮೈಸೂರು: ಈ ಬಾರಿಯ ಐಪಿಎಲ್‌ ಕ್ರಿಕೆಟ್‌ ಟೂರ್ನಿಯು ಬಹಳ ವಿಶೇಷ ಎನಿಸಲಿದೆ. ಕರ್ನಾಟಕದ 13 ಆಟಗಾರರು ಹರಾಜಿನಲ್ಲಿ ಬಿಡ್‌ ಆಗಿದ್ದು, ಅದರಲ್ಲೂ ಮೈಸೂರಿನ ಯುವ ಪ್ರತಿಭೆ ಮನ್ವಂತ್‌ ಕುಮಾರ್‌ ಡೆಲ್ಲಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆದ ಐಪಿಎಲ್‌ ಮೆಗಾ ಹರಾಜಿನಲ್ಲಿ ಮೂಲ ಬೆಲೆ ರೂ 30 ಲಕ್ಷಕ್ಕೆ ಮನ್ವಂತ್‌ ಕುಮಾರ್‌ ಡೆಲ್ಲಿ ಪಾಲಾದರು.

ಮೊದಲ ಹರಾಜು ಪ್ರಕ್ರಿಯೆಯ ಸುತ್ತಿನಲ್ಲಿ ನನಗೆ ಅವಕಾಶ ಸಿಕ್ಕಿರಲಿಲ್ಲ. ನಾನು ಆಯ್ಕೆ ಆಗುವುದಿಲ್ಲ ಅಂದುಕೊಂಡಿದ್ದೆ, ಆದರೆ ಡೆಲ್ಲಿ ತಂಡ ಬಿಡ್‌ ಮಾಡಿರುವುದು ಅಚ್ಚರಿ ತಂದಿದೆ ಎಂದು ಮನ್ವಂತ್‌ ಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ.

20 ವರ್ಷ ತುಂಬಿರುವ ಮನ್ವಂತ್‌ ಆಲ್‌ರೌಂಡರ್‌ ಆಟಗಾರರಾಗಿದ್ದಾರೆ. ಈಗಾಗಲೇ ಕರ್ನಾಟಕ ತಂಡದಲ್ಲಿ ಆಡಿರುವ ಅನುಭವವಿರುವ ಮನ್ವಂತ್‌ ಸದ್ಯ ಸಯ್ಯದ್‌ ಮುಸ್ತಾಕ್‌ ಅಲಿ ಟ್ರೋಫಿಯಲ್ಲಿ ಆಡುತ್ತಿದ್ದಾರೆ.

ಐಪಿಎಲ್‌ನಲ್ಲಿ ಡೆಲ್ಲಿ ತಂಡಕ್ಕೆ ಸೇರ್ಪಡೆಯಾಗಿರುವ ಸಂದರ್ಭದಲ್ಲಿ ಸಂತಸ ವ್ಯಕ್ತಪಡಿಸಿದ ಅವರು, ಐಪಿಎಲ್‌ ಪ್ಲಾಟ್‌ಫಾರ್ಮ್‌ ನನ್ನ ಕ್ರಿಕೆಟ್‌ ಬೆಳವಣಿಗೆಗೆ ಒಳ್ಳೆಯ ವೇದಿಕೆಯಾಗಲಿದೆ. ಒಂದು ವೇಳೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕರೆ ನನ್ನ ಪ್ರತಿಭೆಯನ್ನು ಸಾಬೀತು ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

12ನೇ ವಯಸ್ಸನಲ್ಲಿ ಮನ್ಸೂರ್‌ ಅಹಮ್ಮದ್‌ ನೇತೃತ್ವದ MUCSC ಕ್ಲಬ್‌ನಲ್ಲಿ ತನ್ನ ಕ್ರಿಕೆಟ್‌ ಜೀವನ ಆರಂಭಿಸಿದ ಮನ್ವಂತ್, ನಂತರ RBNCC ತಂಡ ಸೇರಿದರು. ಈ ವೇಳೆ ಅವರಿಗೆ ಎಂ.ಎಸ್.ರವೀಂದ್ರ, ಬಾಲಚಂದರ್‌ ಸೇರಿದಂತೆ ಮೊದಲಾದವರು ಕೋಚ್‌ ಮಾಡಿದರು.

19 ವರ್ಷ ಹಾಗೂ 23 ವರ್ಷ ಒಳಗಿನ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ. 2023ರ ಮಹಾರಾಜ್‌ ಟ್ರೋಫಿ ಟಿ-20 ಟೂರ್ನಿಯಲ್ಲಿ 23 ವಿಕೆಟ್‌ಗಳನ್ನು ಪಡೆಯುವ ಮೂಲಕ ಪರ್ಪಲ್‌ ಕ್ಯಾಪ್‌ ಗೌರವಕ್ಕೆ ಪಾತ್ರರಾದರು. 2024ರ ಆವೃತ್ತಿಯಲ್ಲೂ 16 ವಿಕೆಟ್‌ ಪಡೆದು ಗಮನ ಸೆಳೆಯುವ ಮೂಲಕ ಐಪಿಎಲ್‌ ಟೂರ್ನಿಯಲ್ಲಿ ಆಡುವ ಅವಕಾಶದ ಬಾಗಿಲು ತೆರೆದಿದೆ.

ಕ್ರಿಕೆಟ್‌ ಹಿನ್ನೆಲೆ ಇಲ್ಲದ ಕುಟುಂಬ ಇದಾಗಿದ್ದು, ತಂದೆ ಎಸ್.‌ಲಕ್ಷ್ಮಿಕುಮಾರ್‌ ವೃತ್ತಿಯಲ್ಲಿ ಚಾಲಕ, ತಾಯಿ ಶ್ರೀದೇವಿ ಕುಮಾರ್‌ ಗೃಹಿಣಿಯಾಗಿದ್ದಾರೆ. ಆದರೆ ಅಣ್ಣ ಕ್ರಿಕೆಟರ್‌ ಆಗಿದ್ದು, ಮನ್ವಂತ್‌ ಕುಮಾರ್‌ಗೆ ಅಣ್ಣನೇ ಕ್ರಿಕೆಟ್‌ ಆಡಲು ಪ್ರೇರಣೆ ಎಂದು ಹೇಳಲಾಗುತ್ತಿದೆ. ಈ ವೇಳೆ ಐಪಿಎಲ್‌ಗೆ ಮಗನ ಆಯ್ಕೆ ಖುಷಿ ತಂದಿದೆ ಎಂದು ಕುಟುಂಬದವರು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

4 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

4 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

4 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

6 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

6 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

6 hours ago