Categories: ಕ್ರೀಡೆ

ಮೈಸೂರಿನ ಯುವ ಆಲ್‌ರೌಂಡರ್‌ ಮನ್ವಂತ್‌ ಕುಮಾರ್‌ ಡೆಲ್ಲಿ ತಂಡಕ್ಕೆ ಆಯ್ಕೆ

ಮೈಸೂರು: ಈ ಬಾರಿಯ ಐಪಿಎಲ್‌ ಕ್ರಿಕೆಟ್‌ ಟೂರ್ನಿಯು ಬಹಳ ವಿಶೇಷ ಎನಿಸಲಿದೆ. ಕರ್ನಾಟಕದ 13 ಆಟಗಾರರು ಹರಾಜಿನಲ್ಲಿ ಬಿಡ್‌ ಆಗಿದ್ದು, ಅದರಲ್ಲೂ ಮೈಸೂರಿನ ಯುವ ಪ್ರತಿಭೆ ಮನ್ವಂತ್‌ ಕುಮಾರ್‌ ಡೆಲ್ಲಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆದ ಐಪಿಎಲ್‌ ಮೆಗಾ ಹರಾಜಿನಲ್ಲಿ ಮೂಲ ಬೆಲೆ ರೂ 30 ಲಕ್ಷಕ್ಕೆ ಮನ್ವಂತ್‌ ಕುಮಾರ್‌ ಡೆಲ್ಲಿ ಪಾಲಾದರು.

ಮೊದಲ ಹರಾಜು ಪ್ರಕ್ರಿಯೆಯ ಸುತ್ತಿನಲ್ಲಿ ನನಗೆ ಅವಕಾಶ ಸಿಕ್ಕಿರಲಿಲ್ಲ. ನಾನು ಆಯ್ಕೆ ಆಗುವುದಿಲ್ಲ ಅಂದುಕೊಂಡಿದ್ದೆ, ಆದರೆ ಡೆಲ್ಲಿ ತಂಡ ಬಿಡ್‌ ಮಾಡಿರುವುದು ಅಚ್ಚರಿ ತಂದಿದೆ ಎಂದು ಮನ್ವಂತ್‌ ಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ.

20 ವರ್ಷ ತುಂಬಿರುವ ಮನ್ವಂತ್‌ ಆಲ್‌ರೌಂಡರ್‌ ಆಟಗಾರರಾಗಿದ್ದಾರೆ. ಈಗಾಗಲೇ ಕರ್ನಾಟಕ ತಂಡದಲ್ಲಿ ಆಡಿರುವ ಅನುಭವವಿರುವ ಮನ್ವಂತ್‌ ಸದ್ಯ ಸಯ್ಯದ್‌ ಮುಸ್ತಾಕ್‌ ಅಲಿ ಟ್ರೋಫಿಯಲ್ಲಿ ಆಡುತ್ತಿದ್ದಾರೆ.

ಐಪಿಎಲ್‌ನಲ್ಲಿ ಡೆಲ್ಲಿ ತಂಡಕ್ಕೆ ಸೇರ್ಪಡೆಯಾಗಿರುವ ಸಂದರ್ಭದಲ್ಲಿ ಸಂತಸ ವ್ಯಕ್ತಪಡಿಸಿದ ಅವರು, ಐಪಿಎಲ್‌ ಪ್ಲಾಟ್‌ಫಾರ್ಮ್‌ ನನ್ನ ಕ್ರಿಕೆಟ್‌ ಬೆಳವಣಿಗೆಗೆ ಒಳ್ಳೆಯ ವೇದಿಕೆಯಾಗಲಿದೆ. ಒಂದು ವೇಳೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕರೆ ನನ್ನ ಪ್ರತಿಭೆಯನ್ನು ಸಾಬೀತು ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

12ನೇ ವಯಸ್ಸನಲ್ಲಿ ಮನ್ಸೂರ್‌ ಅಹಮ್ಮದ್‌ ನೇತೃತ್ವದ MUCSC ಕ್ಲಬ್‌ನಲ್ಲಿ ತನ್ನ ಕ್ರಿಕೆಟ್‌ ಜೀವನ ಆರಂಭಿಸಿದ ಮನ್ವಂತ್, ನಂತರ RBNCC ತಂಡ ಸೇರಿದರು. ಈ ವೇಳೆ ಅವರಿಗೆ ಎಂ.ಎಸ್.ರವೀಂದ್ರ, ಬಾಲಚಂದರ್‌ ಸೇರಿದಂತೆ ಮೊದಲಾದವರು ಕೋಚ್‌ ಮಾಡಿದರು.

19 ವರ್ಷ ಹಾಗೂ 23 ವರ್ಷ ಒಳಗಿನ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ. 2023ರ ಮಹಾರಾಜ್‌ ಟ್ರೋಫಿ ಟಿ-20 ಟೂರ್ನಿಯಲ್ಲಿ 23 ವಿಕೆಟ್‌ಗಳನ್ನು ಪಡೆಯುವ ಮೂಲಕ ಪರ್ಪಲ್‌ ಕ್ಯಾಪ್‌ ಗೌರವಕ್ಕೆ ಪಾತ್ರರಾದರು. 2024ರ ಆವೃತ್ತಿಯಲ್ಲೂ 16 ವಿಕೆಟ್‌ ಪಡೆದು ಗಮನ ಸೆಳೆಯುವ ಮೂಲಕ ಐಪಿಎಲ್‌ ಟೂರ್ನಿಯಲ್ಲಿ ಆಡುವ ಅವಕಾಶದ ಬಾಗಿಲು ತೆರೆದಿದೆ.

ಕ್ರಿಕೆಟ್‌ ಹಿನ್ನೆಲೆ ಇಲ್ಲದ ಕುಟುಂಬ ಇದಾಗಿದ್ದು, ತಂದೆ ಎಸ್.‌ಲಕ್ಷ್ಮಿಕುಮಾರ್‌ ವೃತ್ತಿಯಲ್ಲಿ ಚಾಲಕ, ತಾಯಿ ಶ್ರೀದೇವಿ ಕುಮಾರ್‌ ಗೃಹಿಣಿಯಾಗಿದ್ದಾರೆ. ಆದರೆ ಅಣ್ಣ ಕ್ರಿಕೆಟರ್‌ ಆಗಿದ್ದು, ಮನ್ವಂತ್‌ ಕುಮಾರ್‌ಗೆ ಅಣ್ಣನೇ ಕ್ರಿಕೆಟ್‌ ಆಡಲು ಪ್ರೇರಣೆ ಎಂದು ಹೇಳಲಾಗುತ್ತಿದೆ. ಈ ವೇಳೆ ಐಪಿಎಲ್‌ಗೆ ಮಗನ ಆಯ್ಕೆ ಖುಷಿ ತಂದಿದೆ ಎಂದು ಕುಟುಂಬದವರು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago