ಕ್ರೀಡೆ

ಮತ್ತೊಮ್ಮೆ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ

ಜ್ಯೂರಿಚ್: ಟೋಕಿಯೋ ಒಲಿಂಪಿಕ್ ಚಿನ್ನದ ಪದಕ ವಿಜೇತ ಭಾರತದ ಜಾವೆಲಿನ್ ಕ್ರೀಡೆಯ ದಿಗ್ಗಜ ನೀರಜ್ ಚೋಪ್ರಾ ಗುರುವಾರ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ಫೈನಲ್ಸ್‌ನಲ್ಲಿ ಭಾಗಿಯಾಗಿ ಪ್ರಶಸ್ತಿ ಗೆದ್ದಿರುವ ಮೊದಲ ಭಾರತೀಯ ಎನಿಸಿಕೊಂಡರು.

ಚೋಪ್ರಾ ಅವರು ಫೌಲ್‌ನೊಂದಿಗೆ ಆಟ ಪ್ರಾರಂಭಿಸಿದ್ದರು. ಆದರೆ ತಮ್ಮ ಎರಡನೇ ಪ್ರಯತ್ನದಲ್ಲಿ 88.44 ಮೀ ದೂರ ಜಾವೆಲಿನ್ ಎಸೆದು ಅಗ್ರಸ್ಥಾನಕ್ಕೆ ಜಿಗಿದರು. ಇದು ಅವರ ವೃತ್ತಿಜೀವನದ ಅತ್ಯಂತ ದೊಡ್ಡ ಗೆಲುವುಗಳಲ್ಲಿ ಒಂದು. ತಮ್ಮ ಮುಂದಿನ ನಾಲ್ಕು ಎಸೆತಗಳಲ್ಲಿ 88.00ಮೀ, 86.11ಮೀ, 87.00ಮೀ ಮತ್ತು 83.60ಮೀ ಎಸೆದು ಚಾಂಪಿಯನ್​ ಆಗಿ ಹೊರ ಹೊಮ್ಮಿದರು.

ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ಅವರು ತಮ್ಮ ನಾಲ್ಕನೇ ಪ್ರಯತ್ನದಲ್ಲಿ 86.94 ಮೀ ಎಸೆತದೊಂದಿಗೆ ಎರಡನೇ ಸ್ಥಾನ ಪಡೆದರು. ಜರ್ಮನಿಯ ಜೂಲಿಯನ್ ವೆಬರ್ ಅತ್ಯುತ್ತಮ 83.73 ಮೀಟರ್‌ಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು.

ನೀರಜ್ ಚೋಪ್ರಾ ಅವರೀಗ ಒಲಿಂಪಿಕ್ ಚಿನ್ನದ ಪದಕ, ವಿಶ್ವ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ಮತ್ತು ಇದೀಗ ಡೈಮಂಡ್ ಲೀಗ್ ಚಾಂಪಿಯನ್ ಆಗಿ ಶ್ರೇಷ್ಠ ಸಾಧಕನಾಗಿದ್ದಾರೆ

 

.

andolanait

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

4 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

20 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

21 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

22 hours ago