ಕ್ರೀಡೆ

ಚೊಚ್ಚಲ ಆವೃತ್ತಿಯಲ್ಲಿ ಚಿನ್ನಕ್ಕೆ ಮುತ್ತಿಟ್ಟ ನೀರಜ್‌ ಚೋಪ್ರಾ

ಬೆಂಗಳೂರು : ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ನಿರೀಕ್ಷೆಯಂತೆಯೇ ಪ್ರದರ್ಶನ ನೀಡಿದ ನೀರಜ್‌ ಚೋಪ್ರಾ ಚೊಚ್ಚಲ ಆವೃತ್ತಿಯಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ನೀರಜ್‌ ಅವರು ಈ ಸ್ಪರ್ಧೆಯಲ್ಲಿ 86.18 ಮೀಟರ್‌ ದೂರ ಜಾವೆಲಿನ್‌ ಎಸೆಯುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಇನ್ನೂ ಕೀನ್ಯಾದ ಜೂಲಿಯಸ್‌ ಯೆಗೊ 84.51 ಮೀಟರ್‌ ದೂರ ಎಸೆಯುವ ಮೂಲಕ ಬೆಳ್ಳಿ ಗೆದ್ದರೆ, ಶ್ರೀಲಂಕಾದ ರುಮೇಶ್‌ ಪತಿರಾಜ್‌ 84.34 ಮೀಟರ್‌ ದೂರ ಎಸೆಯುವ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಹಾಗೆಯೇ ನಾಲ್ಕನೇ ಸ್ಥಾನ ಪಡೆದ ಭಾರತದ ಸಚಿನ್‌ ಯಾದವ್‌ 83.23 ಮೀಟರ್‌ ಎಸೆದರು.

ಗಣ್ಯರಿಂದ ನೀರಾಜ್‌ಗೆ ಸನ್ಮಾನ 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರ ಜೊತೆಯಾಗಿ ಪಾಲ್ಗೊಂಡು, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರ ಕ್ರೀಡಾ ಪ್ರದರ್ಶನವನ್ನು ವೀಕ್ಷಿಸಿ, ವಿಜೇತರಿಗೆ ಪದಕ ಪ್ರದಾನ ಮಾಡಿ ಗೌರವಿಸಿದರು.

2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ. 1 ಜಾವಲಿನ್ ಪಟು ನೀರಜ್ ಚೋಪ್ರ ತಮ್ಮ ಹೆಸರಿನಲ್ಲಿ ಆರಂಭಿಸಿರುವ ಅಂತಾರಾಷ್ಟ್ರೀಯ ಜಾವಲಿನ್ ಕೂಟವು ಜಾವಲಿನ್ ಎಸೆತದಲ್ಲಿನ ದಿಗ್ಗಜರ ಕ್ರೀಡಾ ಸಾಮರ್ಥ್ಯ ಪ್ರದರ್ಶನದ ವೇದಿಕೆಯಾಗಿದ್ದು, ಮುಂದೆಯೂ ಇಂತಹ ಕ್ರೀಡಾಕೂಟದಲ್ಲಿ ರಾಜ್ಯದಲ್ಲಿ ಆಯೋಜನೆಗೊಂಡು ಯುವ ಜನರನ್ನು ಕ್ರೀಡೆಯತ್ತ ಆಕರ್ಷಿಸಲಿ ಎಂದು ಶುಭ ಕೋರಿದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ , ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ವಿಜೇತರಿಗೆ ಪ್ರಶಸ್ತಿ ಮತ್ತು ಪದಕಗಳನ್ನು ನೀಡಿ ಗೌರವಿಸಿದರು.

ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಶಾಸಕ ರಿಜ್ವಾನ್ ಅರ್ಷದ್ ಅವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

10 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

13 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

13 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

13 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

13 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

13 hours ago