ಕ್ರೀಡೆ

ಚೊಚ್ಚಲ ಆವೃತ್ತಿಯಲ್ಲಿ ಚಿನ್ನಕ್ಕೆ ಮುತ್ತಿಟ್ಟ ನೀರಜ್‌ ಚೋಪ್ರಾ

ಬೆಂಗಳೂರು : ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ನಿರೀಕ್ಷೆಯಂತೆಯೇ ಪ್ರದರ್ಶನ ನೀಡಿದ ನೀರಜ್‌ ಚೋಪ್ರಾ ಚೊಚ್ಚಲ ಆವೃತ್ತಿಯಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ನೀರಜ್‌ ಅವರು ಈ ಸ್ಪರ್ಧೆಯಲ್ಲಿ 86.18 ಮೀಟರ್‌ ದೂರ ಜಾವೆಲಿನ್‌ ಎಸೆಯುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಇನ್ನೂ ಕೀನ್ಯಾದ ಜೂಲಿಯಸ್‌ ಯೆಗೊ 84.51 ಮೀಟರ್‌ ದೂರ ಎಸೆಯುವ ಮೂಲಕ ಬೆಳ್ಳಿ ಗೆದ್ದರೆ, ಶ್ರೀಲಂಕಾದ ರುಮೇಶ್‌ ಪತಿರಾಜ್‌ 84.34 ಮೀಟರ್‌ ದೂರ ಎಸೆಯುವ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಹಾಗೆಯೇ ನಾಲ್ಕನೇ ಸ್ಥಾನ ಪಡೆದ ಭಾರತದ ಸಚಿನ್‌ ಯಾದವ್‌ 83.23 ಮೀಟರ್‌ ಎಸೆದರು.

ಗಣ್ಯರಿಂದ ನೀರಾಜ್‌ಗೆ ಸನ್ಮಾನ 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರ ಜೊತೆಯಾಗಿ ಪಾಲ್ಗೊಂಡು, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರ ಕ್ರೀಡಾ ಪ್ರದರ್ಶನವನ್ನು ವೀಕ್ಷಿಸಿ, ವಿಜೇತರಿಗೆ ಪದಕ ಪ್ರದಾನ ಮಾಡಿ ಗೌರವಿಸಿದರು.

2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ. 1 ಜಾವಲಿನ್ ಪಟು ನೀರಜ್ ಚೋಪ್ರ ತಮ್ಮ ಹೆಸರಿನಲ್ಲಿ ಆರಂಭಿಸಿರುವ ಅಂತಾರಾಷ್ಟ್ರೀಯ ಜಾವಲಿನ್ ಕೂಟವು ಜಾವಲಿನ್ ಎಸೆತದಲ್ಲಿನ ದಿಗ್ಗಜರ ಕ್ರೀಡಾ ಸಾಮರ್ಥ್ಯ ಪ್ರದರ್ಶನದ ವೇದಿಕೆಯಾಗಿದ್ದು, ಮುಂದೆಯೂ ಇಂತಹ ಕ್ರೀಡಾಕೂಟದಲ್ಲಿ ರಾಜ್ಯದಲ್ಲಿ ಆಯೋಜನೆಗೊಂಡು ಯುವ ಜನರನ್ನು ಕ್ರೀಡೆಯತ್ತ ಆಕರ್ಷಿಸಲಿ ಎಂದು ಶುಭ ಕೋರಿದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ , ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ವಿಜೇತರಿಗೆ ಪ್ರಶಸ್ತಿ ಮತ್ತು ಪದಕಗಳನ್ನು ನೀಡಿ ಗೌರವಿಸಿದರು.

ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಶಾಸಕ ರಿಜ್ವಾನ್ ಅರ್ಷದ್ ಅವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago