ಕ್ರೀಡೆ

ಸಾಂಪ್ರದಾಯಿಕ ಛಾಯಾಚಿತ್ರಕ್ಕಾಗಿ ಪಾಕ್ ಅಥ್ಲೀಟ್‌ಗೆ ಆಹ್ವಾನಿಸಿ ಎಲ್ಲರ ಮನ ಗೆದ್ದ ನೀರಜ್ ಚೋಪ್ರಾ

ಬುಡಾಪೆಸ್ಟ್ : ಭಾರತದ ‘ಗೋಲ್ಡನ್ ಬಾಯ್’ ನೀರಜ್ ಚೋಪ್ರಾ ಅವರು ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಸ್ಪರ್ದೆಯೊಂದರಲ್ಲಿ ಅಗ್ರ ಸ್ಥಾನವನ್ನು ಪಡೆದ ತಮ್ಮ ದೇಶದ ಮೊದಲ ಅತ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನೀರಜ್ ಅವರು ರವಿವಾರ ತಡರಾತ್ರಿ ಪುರುಷರ ಜಾವೆಲಿನ್ ಥ್ರೋ ಫೈನಲ್ ನಲ್ಲಿ 88.17 ಮೀಟರ್ ಗಳ ದೂರವನ್ನು ತಲುಪಿ ಚಿನ್ನವನ್ನು ಜಯಿಸಿ ಈ ಸಾಧನೆ ಮಾಡಿದರು.

ಅವರೊಂದಿಗೆ ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ಅರ್ಷದ್ ನದೀಮ್ 87.82 ಮೀಟರ್ ದೂರ ಕ್ರಮಿಸಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಫೈನಲ್ ನಂತರ, ಇಬ್ಬರು ಕ್ರೀಡಾಪಟುಗಳು ಮೈದಾನದಲ್ಲಿ ಎಲ್ಲರ ಗಮನ ಸೆಳೆಯುವ ಕ್ಷಣಕ್ಕೆ ಸಾಕ್ಷಿಯಾದರು. ಈ ದೃಶ್ಯವು ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳ ಹೃದಯವನ್ನು ಗೆದ್ದಿತು.

ನೀರಜ್ ಮತ್ತು ನದೀಮ್ ಬಹಳ ಸಮಯದಿಂದ ಮೈದಾನದಲ್ಲಿ ಪರಸ್ಪರ ಹೋರಾಡುತ್ತಿದ್ದಾರೆ. ಅವರ ನಡುವಿನ ಬಾಂಧವ್ಯವು ಟ್ರ್ಯಾಕ್ ನ ಮೀರಿ ನಿಂತಿದೆ. ಹಾಗೂ ಇಬ್ಬರು ಪ್ರಮುಖ ಅತ್ಲೀಟ್ಗಳು ಅನೇಕ ಸಂದರ್ಭಗಳಲ್ಲಿ ಪರಸ್ಪರ ಬಹುಮಾನ ಸ್ವೀಕಾರದ ವೇದಿಕೆಯಲ್ಲಿ ಪದಕ ಹಂಚಿಕೊಳ್ಳುತ್ತಿರುವುದು ಕಂಡುಬಂದಿದೆ.

ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಪಾಕಿಸ್ತಾನದ ನದೀಮ್ ಮತ್ತೊಮ್ಮೆ 90 ಮೀಟರ್ ಮಾರ್ಕ್ ಅನ್ನು ದಾಟಲು ಬಯಸಿದ್ದರು ಆದರೆ ಅವರು ಆ ನಿಟ್ಟಿನಲ್ಲಿ ವಿಫಲರಾದರು. ಬುಡಾಪೆಸ್ಟ್ ನಲ್ಲಿ ಪುರುಷರ ಜಾವೆಲಿನ್ ಥ್ರೋ ಫೈನಲ್ ನ ಮುಕ್ತಾಯದ ನಂತರ, ನೀರಜ್ ಮೈದಾನದಲ್ಲಿ ಸಾಂಪ್ರದಾಯಿಕ ಛಾಯಾಚಿತ್ರಕ್ಕಾಗಿ ನದೀಮ್ ಅವರನ್ನು ಆಹ್ವಾನಿಸಿ ಎಲ್ಲರ ಮನ ಗೆದ್ದರು.

ನದೀಮ್ ತಕ್ಷಣವೇ ನೀರಜ್ ಕಡೆಗೆ ಧಾವಿಸಿದರು, ಅವರ ಪಕ್ಕದಲ್ಲಿಯೇ ನಿಂತರು, 86.67 ಮೀಟರ್ ಎಸೆದು ಕಂಚಿನ ಪದಕ ಪಡೆದ ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ಕೂಡ ಫೋಟೊಕ್ಕೆ ಪೋಸ್ಟ್ ನೀಡಿದರು.

ಈವೆಂಟ್ನಲ್ಲಿ ನೀರಜ್ ಮತ್ತು ನದೀಮ್ ಇಬ್ಬರೂ ತಮ್ಮ ಸಾಧನೆಗಳಿಗಾಗಿ ಪರಸ್ಪರ ಅಭಿನಂದಿಸಿದ ಕ್ಷಣದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ವ್ಯಾಪಕವಾಗಿ ಹಂಚಿಕೊಂಡಿದ್ದಾರೆ.

andolanait

Recent Posts

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

23 mins ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

31 mins ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

2 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

2 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

3 hours ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

3 hours ago