ಕ್ರೀಡೆ

ಸಾಂಪ್ರದಾಯಿಕ ಛಾಯಾಚಿತ್ರಕ್ಕಾಗಿ ಪಾಕ್ ಅಥ್ಲೀಟ್‌ಗೆ ಆಹ್ವಾನಿಸಿ ಎಲ್ಲರ ಮನ ಗೆದ್ದ ನೀರಜ್ ಚೋಪ್ರಾ

ಬುಡಾಪೆಸ್ಟ್ : ಭಾರತದ ‘ಗೋಲ್ಡನ್ ಬಾಯ್’ ನೀರಜ್ ಚೋಪ್ರಾ ಅವರು ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಸ್ಪರ್ದೆಯೊಂದರಲ್ಲಿ ಅಗ್ರ ಸ್ಥಾನವನ್ನು ಪಡೆದ ತಮ್ಮ ದೇಶದ ಮೊದಲ ಅತ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನೀರಜ್ ಅವರು ರವಿವಾರ ತಡರಾತ್ರಿ ಪುರುಷರ ಜಾವೆಲಿನ್ ಥ್ರೋ ಫೈನಲ್ ನಲ್ಲಿ 88.17 ಮೀಟರ್ ಗಳ ದೂರವನ್ನು ತಲುಪಿ ಚಿನ್ನವನ್ನು ಜಯಿಸಿ ಈ ಸಾಧನೆ ಮಾಡಿದರು.

ಅವರೊಂದಿಗೆ ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ಅರ್ಷದ್ ನದೀಮ್ 87.82 ಮೀಟರ್ ದೂರ ಕ್ರಮಿಸಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಫೈನಲ್ ನಂತರ, ಇಬ್ಬರು ಕ್ರೀಡಾಪಟುಗಳು ಮೈದಾನದಲ್ಲಿ ಎಲ್ಲರ ಗಮನ ಸೆಳೆಯುವ ಕ್ಷಣಕ್ಕೆ ಸಾಕ್ಷಿಯಾದರು. ಈ ದೃಶ್ಯವು ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳ ಹೃದಯವನ್ನು ಗೆದ್ದಿತು.

ನೀರಜ್ ಮತ್ತು ನದೀಮ್ ಬಹಳ ಸಮಯದಿಂದ ಮೈದಾನದಲ್ಲಿ ಪರಸ್ಪರ ಹೋರಾಡುತ್ತಿದ್ದಾರೆ. ಅವರ ನಡುವಿನ ಬಾಂಧವ್ಯವು ಟ್ರ್ಯಾಕ್ ನ ಮೀರಿ ನಿಂತಿದೆ. ಹಾಗೂ ಇಬ್ಬರು ಪ್ರಮುಖ ಅತ್ಲೀಟ್ಗಳು ಅನೇಕ ಸಂದರ್ಭಗಳಲ್ಲಿ ಪರಸ್ಪರ ಬಹುಮಾನ ಸ್ವೀಕಾರದ ವೇದಿಕೆಯಲ್ಲಿ ಪದಕ ಹಂಚಿಕೊಳ್ಳುತ್ತಿರುವುದು ಕಂಡುಬಂದಿದೆ.

ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಪಾಕಿಸ್ತಾನದ ನದೀಮ್ ಮತ್ತೊಮ್ಮೆ 90 ಮೀಟರ್ ಮಾರ್ಕ್ ಅನ್ನು ದಾಟಲು ಬಯಸಿದ್ದರು ಆದರೆ ಅವರು ಆ ನಿಟ್ಟಿನಲ್ಲಿ ವಿಫಲರಾದರು. ಬುಡಾಪೆಸ್ಟ್ ನಲ್ಲಿ ಪುರುಷರ ಜಾವೆಲಿನ್ ಥ್ರೋ ಫೈನಲ್ ನ ಮುಕ್ತಾಯದ ನಂತರ, ನೀರಜ್ ಮೈದಾನದಲ್ಲಿ ಸಾಂಪ್ರದಾಯಿಕ ಛಾಯಾಚಿತ್ರಕ್ಕಾಗಿ ನದೀಮ್ ಅವರನ್ನು ಆಹ್ವಾನಿಸಿ ಎಲ್ಲರ ಮನ ಗೆದ್ದರು.

ನದೀಮ್ ತಕ್ಷಣವೇ ನೀರಜ್ ಕಡೆಗೆ ಧಾವಿಸಿದರು, ಅವರ ಪಕ್ಕದಲ್ಲಿಯೇ ನಿಂತರು, 86.67 ಮೀಟರ್ ಎಸೆದು ಕಂಚಿನ ಪದಕ ಪಡೆದ ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ಕೂಡ ಫೋಟೊಕ್ಕೆ ಪೋಸ್ಟ್ ನೀಡಿದರು.

ಈವೆಂಟ್ನಲ್ಲಿ ನೀರಜ್ ಮತ್ತು ನದೀಮ್ ಇಬ್ಬರೂ ತಮ್ಮ ಸಾಧನೆಗಳಿಗಾಗಿ ಪರಸ್ಪರ ಅಭಿನಂದಿಸಿದ ಕ್ಷಣದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ವ್ಯಾಪಕವಾಗಿ ಹಂಚಿಕೊಂಡಿದ್ದಾರೆ.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

6 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago