ಕ್ರೀಡೆ

ಸಾಂಪ್ರದಾಯಿಕ ಛಾಯಾಚಿತ್ರಕ್ಕಾಗಿ ಪಾಕ್ ಅಥ್ಲೀಟ್‌ಗೆ ಆಹ್ವಾನಿಸಿ ಎಲ್ಲರ ಮನ ಗೆದ್ದ ನೀರಜ್ ಚೋಪ್ರಾ

ಬುಡಾಪೆಸ್ಟ್ : ಭಾರತದ ‘ಗೋಲ್ಡನ್ ಬಾಯ್’ ನೀರಜ್ ಚೋಪ್ರಾ ಅವರು ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಸ್ಪರ್ದೆಯೊಂದರಲ್ಲಿ ಅಗ್ರ ಸ್ಥಾನವನ್ನು ಪಡೆದ ತಮ್ಮ ದೇಶದ ಮೊದಲ ಅತ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನೀರಜ್ ಅವರು ರವಿವಾರ ತಡರಾತ್ರಿ ಪುರುಷರ ಜಾವೆಲಿನ್ ಥ್ರೋ ಫೈನಲ್ ನಲ್ಲಿ 88.17 ಮೀಟರ್ ಗಳ ದೂರವನ್ನು ತಲುಪಿ ಚಿನ್ನವನ್ನು ಜಯಿಸಿ ಈ ಸಾಧನೆ ಮಾಡಿದರು.

ಅವರೊಂದಿಗೆ ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ಅರ್ಷದ್ ನದೀಮ್ 87.82 ಮೀಟರ್ ದೂರ ಕ್ರಮಿಸಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಫೈನಲ್ ನಂತರ, ಇಬ್ಬರು ಕ್ರೀಡಾಪಟುಗಳು ಮೈದಾನದಲ್ಲಿ ಎಲ್ಲರ ಗಮನ ಸೆಳೆಯುವ ಕ್ಷಣಕ್ಕೆ ಸಾಕ್ಷಿಯಾದರು. ಈ ದೃಶ್ಯವು ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳ ಹೃದಯವನ್ನು ಗೆದ್ದಿತು.

ನೀರಜ್ ಮತ್ತು ನದೀಮ್ ಬಹಳ ಸಮಯದಿಂದ ಮೈದಾನದಲ್ಲಿ ಪರಸ್ಪರ ಹೋರಾಡುತ್ತಿದ್ದಾರೆ. ಅವರ ನಡುವಿನ ಬಾಂಧವ್ಯವು ಟ್ರ್ಯಾಕ್ ನ ಮೀರಿ ನಿಂತಿದೆ. ಹಾಗೂ ಇಬ್ಬರು ಪ್ರಮುಖ ಅತ್ಲೀಟ್ಗಳು ಅನೇಕ ಸಂದರ್ಭಗಳಲ್ಲಿ ಪರಸ್ಪರ ಬಹುಮಾನ ಸ್ವೀಕಾರದ ವೇದಿಕೆಯಲ್ಲಿ ಪದಕ ಹಂಚಿಕೊಳ್ಳುತ್ತಿರುವುದು ಕಂಡುಬಂದಿದೆ.

ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಪಾಕಿಸ್ತಾನದ ನದೀಮ್ ಮತ್ತೊಮ್ಮೆ 90 ಮೀಟರ್ ಮಾರ್ಕ್ ಅನ್ನು ದಾಟಲು ಬಯಸಿದ್ದರು ಆದರೆ ಅವರು ಆ ನಿಟ್ಟಿನಲ್ಲಿ ವಿಫಲರಾದರು. ಬುಡಾಪೆಸ್ಟ್ ನಲ್ಲಿ ಪುರುಷರ ಜಾವೆಲಿನ್ ಥ್ರೋ ಫೈನಲ್ ನ ಮುಕ್ತಾಯದ ನಂತರ, ನೀರಜ್ ಮೈದಾನದಲ್ಲಿ ಸಾಂಪ್ರದಾಯಿಕ ಛಾಯಾಚಿತ್ರಕ್ಕಾಗಿ ನದೀಮ್ ಅವರನ್ನು ಆಹ್ವಾನಿಸಿ ಎಲ್ಲರ ಮನ ಗೆದ್ದರು.

ನದೀಮ್ ತಕ್ಷಣವೇ ನೀರಜ್ ಕಡೆಗೆ ಧಾವಿಸಿದರು, ಅವರ ಪಕ್ಕದಲ್ಲಿಯೇ ನಿಂತರು, 86.67 ಮೀಟರ್ ಎಸೆದು ಕಂಚಿನ ಪದಕ ಪಡೆದ ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ಕೂಡ ಫೋಟೊಕ್ಕೆ ಪೋಸ್ಟ್ ನೀಡಿದರು.

ಈವೆಂಟ್ನಲ್ಲಿ ನೀರಜ್ ಮತ್ತು ನದೀಮ್ ಇಬ್ಬರೂ ತಮ್ಮ ಸಾಧನೆಗಳಿಗಾಗಿ ಪರಸ್ಪರ ಅಭಿನಂದಿಸಿದ ಕ್ಷಣದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ವ್ಯಾಪಕವಾಗಿ ಹಂಚಿಕೊಂಡಿದ್ದಾರೆ.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

3 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago