ಕ್ರೀಡೆ

ಅಲ್ಪ ಮೊತ್ತಕ್ಕೆ ಕುಸಿದ ನೆದೆರ್‌ಲ್ಯಾಂಡ್ಸ್‌: ಅಫ್ಘಾನಿಸ್ತಾನಕ್ಕೆ 179 ರನ್ ಗುರಿ

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡ ಅಫ್ಘಾನಿಸ್ತಾನ ಗೆಲುವಿಗೆ 180 ರನ್ ಗಳ ಗುರಿ ನೀಡಿದೆ.

ಇಕ್ರಮ್ ಅಲಿಖಿಲ್ ಅದ್ಭುತ ಫೀಲ್ಡಿಂಗ್ ಹಾಗೂ ಅಫ್ಘಾನ್ ಸಂಘಟಿತ ಬೌಲಿಂಗ್ ದಾಳಿಗೆ ಬೆದರಿದ ನೆದರ್ಲ್ಯಾಂಡ್ಸ್ ತಂಡ 46.3 ಓವರ್ ನಲ್ಲಿ 179 ರನ್ ಗೆ ಆಲೌಟ್ ಆಯಿತು.

ಪಂದ್ಯದಲ್ಲಿ ಅಫ್ಘಾನ್ ವಿರುದ್ಧ ಟಾಸ್ ಗೆದ್ದ ನೆದರ್ಲ್ಯಾಂಡ್ಸ್ ಬ್ಯಾಟಿಂಗ್ ಆಯ್ದುಕೊಂಡಿತು. ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪರ್ದರ್ಶಿಸಿ ಅಫ್ಘಾನ್ ಗೆ ಕಠಿಣ ಗುರಿ ನೀಡಬೇಕು ಎಂಬ ಉದ್ದೇಶದಿಂದ ಬ್ಯಾಟಿಂಗ್ ಆಯ್ದುಕೊಂಡಿದ್ದ ಡಚ್ ಪಡೆ ಅಫ್ಘಾನ್ ನ ಅದ್ಭುತ ಫೀಲ್ಡಿಂಗ್ ಗೆ ಪೆವಿಲಿಯನ್ ಪೆರೇಡ್‌ ನಡೆಸಿತು.

ನೆದರ್ಲ್ಯಾಂಡ್ಸ್ ಪರ ಓಪನರರ್ ಬ್ಯಾರೆಸಿ ಮೊದಲ ಓವರ್ ನಲ್ಲಿಯೇ ಕೇವಲ 1 ರನ್ ಗೆ ಮುಜೀಬ್ ಬೌಲಿಂಗ್ ನಲ್ಲಿ ಎಬಿಡಬ್ಲೂ ಆದರೆ ಮಾಕ್ಸ್ ಒ”ಡೌಡ್ 42 ರನ್ ಗಳಿಸಿ ಸಮರ್ಥವಾಗಿ ಬ್ಯಾಟಿಂಗ್ ಮಾಡುತ್ತಿದ್ದಾಗ ಅಝ್ಮತುಲ್ಲಾ ಒಮರ್ಝೈ ಅದ್ಬುತ ರನೌಟ್ ಗೆ ಬಲಿಯಾದರು. ಕಾಲಿನ್ ಅಕೆರ್ಮಾನ್ 29 ರನ್ ಹಾಗೂ ನಾಯಕ ಎಡ್ವಡ್ಸ್ ಶೂನ್ಯಕ್ಕೆ ಕ್ರಮವಾಗಿ ಇಕ್ರಮ್ ಅಲಿಖಿಲ್ ಭರ್ಜರಿ ಫೀಲ್ಡಿಂಗ್ ಗೆ ರನೌಟ್ ಆದರು.

ತಂಡ ನೂರೈವತ್ತು ದಾಟುವಲ್ಲಿ ಏಕಾಂಗಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸೈಬ್ರಾಂಡ್ ಎಂಗಲ್ ಬ್ರೆಕ್ಟ್ ಆಕರ್ಷಕ 6 ಬೌಂಡರಿ ಸಹಿತ 58 ರನ್ ಬಾರಿಸಿ ತಂಡದ ಪರ ಒಂಟಿ ಅರ್ಧಶತಕ ದಾಖಲಿಸಿದರು. ಬಾಸ್ ಡೆ ಲೀಡ್, ಶಾಕಿಬ್ ಝುಲ್ಫಿಕರ್,ಲೋಗನ್ ವಾನ್ ಬೀಕ್ ಕ್ರಮವಾಗಿ 3,3,2 ರನ್ ಗಳಿಸಿದರು. ಕಡೆಯಲ್ಲಿ ಬ್ಯಾಟ್ ಬೀಸಿದ್ದ ವ್ಯಾನ್ ಡೆರ್ ಮರ್ವೆ ಉಪಯುಕ್ತ 11 ರನ್ ಬಾರಿಸಿದರೆ ಆರ್ಯನ್ ದತ್ 10 ರನ್ ಗಳಿಸಿದರು.

ಅಫ್ಘಾನಿಸ್ತಾನ ಪರ ಮುಹಮ್ಮದ್ ನಬಿ 3 ವಿಕೆಟ್ ಪಡೆದರೆ, ನೂರ್ ಅಹ್ಮದ್ 2 ಹಾಗೂ ಮುಜೀಬ್ ಉರ್ ರಹ್ಮಾನ್ 1 ಒಂದು ವಿಕೆಟ್ ಪಡೆದರು.

andolanait

Recent Posts

ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಐಟಿ ದಾಳಿ

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…

18 mins ago

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಹೊಸ ರೂಲ್ಸ್

ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…

38 mins ago

ಹುಣಸೂರು| ಅಪೆ ಆಟೋ ಕೆರೆಗೆ ಉರುಳಿ ಚಾಲಕ ಸಾವು

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ…

55 mins ago

ಓದುಗರ ಪತ್ರ: ಸಾರ್ವಜನಿಕ ಶೌಚಾಲಯ ನಿರ್ಮಿಸಿ

ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ…

1 hour ago

ಓದುಗರ ಪತ್ರ:  ವಿಮಾ ವಲಯದಲ್ಲಿ ಶೇ.೧೦೦ ಎಫ್ಡಿಐ ಜನ ವಿರೋಧಿ

ವಿಮಾ ವಲಯದಲ್ಲಿ ಶೇ. ೧೦೦ ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ(ಎ-ಡಿಐ)ಯಿಂದ ವಿಮಾ ರಕ್ಷಣೆ ಪಡೆದ ಜೀವಗಳ ಮತ್ತು ಆಸ್ತಿಗಳ…

1 hour ago

ಓದುಗರ ಪತ್ರ: ಸಜ್ಜನ ರಾಜಕಾರಣಿಯಾಗಿದ್ದ ಶಾಮನೂರು ಶಿವಶಂಕರಪ್ಪ

ರಾಜ್ಯದ ಅತ್ಯಂತ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರೆನಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪನವರ ನಿಧನ ನಿಜಕ್ಕೂ ನೋವಿನ ಸಂಗತಿ. ದೇಶದ…

2 hours ago