ಕ್ರೀಡೆ

ಅಲ್ಪ ಮೊತ್ತಕ್ಕೆ ಕುಸಿದ ನೆದೆರ್‌ಲ್ಯಾಂಡ್ಸ್‌: ಅಫ್ಘಾನಿಸ್ತಾನಕ್ಕೆ 179 ರನ್ ಗುರಿ

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡ ಅಫ್ಘಾನಿಸ್ತಾನ ಗೆಲುವಿಗೆ 180 ರನ್ ಗಳ ಗುರಿ ನೀಡಿದೆ.

ಇಕ್ರಮ್ ಅಲಿಖಿಲ್ ಅದ್ಭುತ ಫೀಲ್ಡಿಂಗ್ ಹಾಗೂ ಅಫ್ಘಾನ್ ಸಂಘಟಿತ ಬೌಲಿಂಗ್ ದಾಳಿಗೆ ಬೆದರಿದ ನೆದರ್ಲ್ಯಾಂಡ್ಸ್ ತಂಡ 46.3 ಓವರ್ ನಲ್ಲಿ 179 ರನ್ ಗೆ ಆಲೌಟ್ ಆಯಿತು.

ಪಂದ್ಯದಲ್ಲಿ ಅಫ್ಘಾನ್ ವಿರುದ್ಧ ಟಾಸ್ ಗೆದ್ದ ನೆದರ್ಲ್ಯಾಂಡ್ಸ್ ಬ್ಯಾಟಿಂಗ್ ಆಯ್ದುಕೊಂಡಿತು. ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪರ್ದರ್ಶಿಸಿ ಅಫ್ಘಾನ್ ಗೆ ಕಠಿಣ ಗುರಿ ನೀಡಬೇಕು ಎಂಬ ಉದ್ದೇಶದಿಂದ ಬ್ಯಾಟಿಂಗ್ ಆಯ್ದುಕೊಂಡಿದ್ದ ಡಚ್ ಪಡೆ ಅಫ್ಘಾನ್ ನ ಅದ್ಭುತ ಫೀಲ್ಡಿಂಗ್ ಗೆ ಪೆವಿಲಿಯನ್ ಪೆರೇಡ್‌ ನಡೆಸಿತು.

ನೆದರ್ಲ್ಯಾಂಡ್ಸ್ ಪರ ಓಪನರರ್ ಬ್ಯಾರೆಸಿ ಮೊದಲ ಓವರ್ ನಲ್ಲಿಯೇ ಕೇವಲ 1 ರನ್ ಗೆ ಮುಜೀಬ್ ಬೌಲಿಂಗ್ ನಲ್ಲಿ ಎಬಿಡಬ್ಲೂ ಆದರೆ ಮಾಕ್ಸ್ ಒ”ಡೌಡ್ 42 ರನ್ ಗಳಿಸಿ ಸಮರ್ಥವಾಗಿ ಬ್ಯಾಟಿಂಗ್ ಮಾಡುತ್ತಿದ್ದಾಗ ಅಝ್ಮತುಲ್ಲಾ ಒಮರ್ಝೈ ಅದ್ಬುತ ರನೌಟ್ ಗೆ ಬಲಿಯಾದರು. ಕಾಲಿನ್ ಅಕೆರ್ಮಾನ್ 29 ರನ್ ಹಾಗೂ ನಾಯಕ ಎಡ್ವಡ್ಸ್ ಶೂನ್ಯಕ್ಕೆ ಕ್ರಮವಾಗಿ ಇಕ್ರಮ್ ಅಲಿಖಿಲ್ ಭರ್ಜರಿ ಫೀಲ್ಡಿಂಗ್ ಗೆ ರನೌಟ್ ಆದರು.

ತಂಡ ನೂರೈವತ್ತು ದಾಟುವಲ್ಲಿ ಏಕಾಂಗಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸೈಬ್ರಾಂಡ್ ಎಂಗಲ್ ಬ್ರೆಕ್ಟ್ ಆಕರ್ಷಕ 6 ಬೌಂಡರಿ ಸಹಿತ 58 ರನ್ ಬಾರಿಸಿ ತಂಡದ ಪರ ಒಂಟಿ ಅರ್ಧಶತಕ ದಾಖಲಿಸಿದರು. ಬಾಸ್ ಡೆ ಲೀಡ್, ಶಾಕಿಬ್ ಝುಲ್ಫಿಕರ್,ಲೋಗನ್ ವಾನ್ ಬೀಕ್ ಕ್ರಮವಾಗಿ 3,3,2 ರನ್ ಗಳಿಸಿದರು. ಕಡೆಯಲ್ಲಿ ಬ್ಯಾಟ್ ಬೀಸಿದ್ದ ವ್ಯಾನ್ ಡೆರ್ ಮರ್ವೆ ಉಪಯುಕ್ತ 11 ರನ್ ಬಾರಿಸಿದರೆ ಆರ್ಯನ್ ದತ್ 10 ರನ್ ಗಳಿಸಿದರು.

ಅಫ್ಘಾನಿಸ್ತಾನ ಪರ ಮುಹಮ್ಮದ್ ನಬಿ 3 ವಿಕೆಟ್ ಪಡೆದರೆ, ನೂರ್ ಅಹ್ಮದ್ 2 ಹಾಗೂ ಮುಜೀಬ್ ಉರ್ ರಹ್ಮಾನ್ 1 ಒಂದು ವಿಕೆಟ್ ಪಡೆದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago