ಕ್ರೀಡೆ

ಅಲ್ಪ ಮೊತ್ತಕ್ಕೆ ಕುಸಿದ ನೆದೆರ್‌ಲ್ಯಾಂಡ್ಸ್‌: ಅಫ್ಘಾನಿಸ್ತಾನಕ್ಕೆ 179 ರನ್ ಗುರಿ

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡ ಅಫ್ಘಾನಿಸ್ತಾನ ಗೆಲುವಿಗೆ 180 ರನ್ ಗಳ ಗುರಿ ನೀಡಿದೆ.

ಇಕ್ರಮ್ ಅಲಿಖಿಲ್ ಅದ್ಭುತ ಫೀಲ್ಡಿಂಗ್ ಹಾಗೂ ಅಫ್ಘಾನ್ ಸಂಘಟಿತ ಬೌಲಿಂಗ್ ದಾಳಿಗೆ ಬೆದರಿದ ನೆದರ್ಲ್ಯಾಂಡ್ಸ್ ತಂಡ 46.3 ಓವರ್ ನಲ್ಲಿ 179 ರನ್ ಗೆ ಆಲೌಟ್ ಆಯಿತು.

ಪಂದ್ಯದಲ್ಲಿ ಅಫ್ಘಾನ್ ವಿರುದ್ಧ ಟಾಸ್ ಗೆದ್ದ ನೆದರ್ಲ್ಯಾಂಡ್ಸ್ ಬ್ಯಾಟಿಂಗ್ ಆಯ್ದುಕೊಂಡಿತು. ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪರ್ದರ್ಶಿಸಿ ಅಫ್ಘಾನ್ ಗೆ ಕಠಿಣ ಗುರಿ ನೀಡಬೇಕು ಎಂಬ ಉದ್ದೇಶದಿಂದ ಬ್ಯಾಟಿಂಗ್ ಆಯ್ದುಕೊಂಡಿದ್ದ ಡಚ್ ಪಡೆ ಅಫ್ಘಾನ್ ನ ಅದ್ಭುತ ಫೀಲ್ಡಿಂಗ್ ಗೆ ಪೆವಿಲಿಯನ್ ಪೆರೇಡ್‌ ನಡೆಸಿತು.

ನೆದರ್ಲ್ಯಾಂಡ್ಸ್ ಪರ ಓಪನರರ್ ಬ್ಯಾರೆಸಿ ಮೊದಲ ಓವರ್ ನಲ್ಲಿಯೇ ಕೇವಲ 1 ರನ್ ಗೆ ಮುಜೀಬ್ ಬೌಲಿಂಗ್ ನಲ್ಲಿ ಎಬಿಡಬ್ಲೂ ಆದರೆ ಮಾಕ್ಸ್ ಒ”ಡೌಡ್ 42 ರನ್ ಗಳಿಸಿ ಸಮರ್ಥವಾಗಿ ಬ್ಯಾಟಿಂಗ್ ಮಾಡುತ್ತಿದ್ದಾಗ ಅಝ್ಮತುಲ್ಲಾ ಒಮರ್ಝೈ ಅದ್ಬುತ ರನೌಟ್ ಗೆ ಬಲಿಯಾದರು. ಕಾಲಿನ್ ಅಕೆರ್ಮಾನ್ 29 ರನ್ ಹಾಗೂ ನಾಯಕ ಎಡ್ವಡ್ಸ್ ಶೂನ್ಯಕ್ಕೆ ಕ್ರಮವಾಗಿ ಇಕ್ರಮ್ ಅಲಿಖಿಲ್ ಭರ್ಜರಿ ಫೀಲ್ಡಿಂಗ್ ಗೆ ರನೌಟ್ ಆದರು.

ತಂಡ ನೂರೈವತ್ತು ದಾಟುವಲ್ಲಿ ಏಕಾಂಗಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸೈಬ್ರಾಂಡ್ ಎಂಗಲ್ ಬ್ರೆಕ್ಟ್ ಆಕರ್ಷಕ 6 ಬೌಂಡರಿ ಸಹಿತ 58 ರನ್ ಬಾರಿಸಿ ತಂಡದ ಪರ ಒಂಟಿ ಅರ್ಧಶತಕ ದಾಖಲಿಸಿದರು. ಬಾಸ್ ಡೆ ಲೀಡ್, ಶಾಕಿಬ್ ಝುಲ್ಫಿಕರ್,ಲೋಗನ್ ವಾನ್ ಬೀಕ್ ಕ್ರಮವಾಗಿ 3,3,2 ರನ್ ಗಳಿಸಿದರು. ಕಡೆಯಲ್ಲಿ ಬ್ಯಾಟ್ ಬೀಸಿದ್ದ ವ್ಯಾನ್ ಡೆರ್ ಮರ್ವೆ ಉಪಯುಕ್ತ 11 ರನ್ ಬಾರಿಸಿದರೆ ಆರ್ಯನ್ ದತ್ 10 ರನ್ ಗಳಿಸಿದರು.

ಅಫ್ಘಾನಿಸ್ತಾನ ಪರ ಮುಹಮ್ಮದ್ ನಬಿ 3 ವಿಕೆಟ್ ಪಡೆದರೆ, ನೂರ್ ಅಹ್ಮದ್ 2 ಹಾಗೂ ಮುಜೀಬ್ ಉರ್ ರಹ್ಮಾನ್ 1 ಒಂದು ವಿಕೆಟ್ ಪಡೆದರು.

andolanait

Recent Posts

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

46 mins ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

2 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

2 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

3 hours ago

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…

3 hours ago

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

4 hours ago