ಕ್ರೀಡೆ

ಅಲ್ಪ ಮೊತ್ತಕ್ಕೆ ಕುಸಿದ ನೆದೆರ್‌ಲ್ಯಾಂಡ್ಸ್‌: ಅಫ್ಘಾನಿಸ್ತಾನಕ್ಕೆ 179 ರನ್ ಗುರಿ

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡ ಅಫ್ಘಾನಿಸ್ತಾನ ಗೆಲುವಿಗೆ 180 ರನ್ ಗಳ ಗುರಿ ನೀಡಿದೆ.

ಇಕ್ರಮ್ ಅಲಿಖಿಲ್ ಅದ್ಭುತ ಫೀಲ್ಡಿಂಗ್ ಹಾಗೂ ಅಫ್ಘಾನ್ ಸಂಘಟಿತ ಬೌಲಿಂಗ್ ದಾಳಿಗೆ ಬೆದರಿದ ನೆದರ್ಲ್ಯಾಂಡ್ಸ್ ತಂಡ 46.3 ಓವರ್ ನಲ್ಲಿ 179 ರನ್ ಗೆ ಆಲೌಟ್ ಆಯಿತು.

ಪಂದ್ಯದಲ್ಲಿ ಅಫ್ಘಾನ್ ವಿರುದ್ಧ ಟಾಸ್ ಗೆದ್ದ ನೆದರ್ಲ್ಯಾಂಡ್ಸ್ ಬ್ಯಾಟಿಂಗ್ ಆಯ್ದುಕೊಂಡಿತು. ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪರ್ದರ್ಶಿಸಿ ಅಫ್ಘಾನ್ ಗೆ ಕಠಿಣ ಗುರಿ ನೀಡಬೇಕು ಎಂಬ ಉದ್ದೇಶದಿಂದ ಬ್ಯಾಟಿಂಗ್ ಆಯ್ದುಕೊಂಡಿದ್ದ ಡಚ್ ಪಡೆ ಅಫ್ಘಾನ್ ನ ಅದ್ಭುತ ಫೀಲ್ಡಿಂಗ್ ಗೆ ಪೆವಿಲಿಯನ್ ಪೆರೇಡ್‌ ನಡೆಸಿತು.

ನೆದರ್ಲ್ಯಾಂಡ್ಸ್ ಪರ ಓಪನರರ್ ಬ್ಯಾರೆಸಿ ಮೊದಲ ಓವರ್ ನಲ್ಲಿಯೇ ಕೇವಲ 1 ರನ್ ಗೆ ಮುಜೀಬ್ ಬೌಲಿಂಗ್ ನಲ್ಲಿ ಎಬಿಡಬ್ಲೂ ಆದರೆ ಮಾಕ್ಸ್ ಒ”ಡೌಡ್ 42 ರನ್ ಗಳಿಸಿ ಸಮರ್ಥವಾಗಿ ಬ್ಯಾಟಿಂಗ್ ಮಾಡುತ್ತಿದ್ದಾಗ ಅಝ್ಮತುಲ್ಲಾ ಒಮರ್ಝೈ ಅದ್ಬುತ ರನೌಟ್ ಗೆ ಬಲಿಯಾದರು. ಕಾಲಿನ್ ಅಕೆರ್ಮಾನ್ 29 ರನ್ ಹಾಗೂ ನಾಯಕ ಎಡ್ವಡ್ಸ್ ಶೂನ್ಯಕ್ಕೆ ಕ್ರಮವಾಗಿ ಇಕ್ರಮ್ ಅಲಿಖಿಲ್ ಭರ್ಜರಿ ಫೀಲ್ಡಿಂಗ್ ಗೆ ರನೌಟ್ ಆದರು.

ತಂಡ ನೂರೈವತ್ತು ದಾಟುವಲ್ಲಿ ಏಕಾಂಗಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸೈಬ್ರಾಂಡ್ ಎಂಗಲ್ ಬ್ರೆಕ್ಟ್ ಆಕರ್ಷಕ 6 ಬೌಂಡರಿ ಸಹಿತ 58 ರನ್ ಬಾರಿಸಿ ತಂಡದ ಪರ ಒಂಟಿ ಅರ್ಧಶತಕ ದಾಖಲಿಸಿದರು. ಬಾಸ್ ಡೆ ಲೀಡ್, ಶಾಕಿಬ್ ಝುಲ್ಫಿಕರ್,ಲೋಗನ್ ವಾನ್ ಬೀಕ್ ಕ್ರಮವಾಗಿ 3,3,2 ರನ್ ಗಳಿಸಿದರು. ಕಡೆಯಲ್ಲಿ ಬ್ಯಾಟ್ ಬೀಸಿದ್ದ ವ್ಯಾನ್ ಡೆರ್ ಮರ್ವೆ ಉಪಯುಕ್ತ 11 ರನ್ ಬಾರಿಸಿದರೆ ಆರ್ಯನ್ ದತ್ 10 ರನ್ ಗಳಿಸಿದರು.

ಅಫ್ಘಾನಿಸ್ತಾನ ಪರ ಮುಹಮ್ಮದ್ ನಬಿ 3 ವಿಕೆಟ್ ಪಡೆದರೆ, ನೂರ್ ಅಹ್ಮದ್ 2 ಹಾಗೂ ಮುಜೀಬ್ ಉರ್ ರಹ್ಮಾನ್ 1 ಒಂದು ವಿಕೆಟ್ ಪಡೆದರು.

andolanait

Recent Posts

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ವಿಧಿವಶ

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…

4 hours ago

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

13 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

1 day ago