ಕ್ರೀಡೆ

ನ್ಯೂಜಿಲೆಂಡ್‌ಗೆ 7 ವಿಕೆಟ್ ಭರ್ಜರಿ ಜಯ

ಆಕ್ಲೆಂಡ್ : ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿಲಿಯಂಮ್ಸ್ ಅಜೇಯ ೯೪, ಲಾಥಮ್ ಅಜೇಯ ೧೪೫ ರನ್ ನೆರವಿನಿಂದ ೭ ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.

ಆಕ್ಲೆಂಡ್‌ನ ಈಡನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಾಯಕ ಶಿಖರ್ ಧವನ್, ಶುಭಮನ್ ಗಿಲ್ ಮತ್ತು ಶ್ರೇಯಸ್ ಅವರ ಅರ್ಧಶತಕಗಳ ನೆರವಿನಿಂದ ನಿಗಧಿತ ೫೦ ಓವರ್ ಗಳಲ್ಲಿ ೭ ವಿಕೆಟ್ ನಷ್ಟಕ್ಕೆ ೩೦೬ರನ್ ಗಳಿಸಿ ಕಿವೀಸ್ ಗೆ ಗೆಲ್ಲಲು ೩೦೭ ರನ್ ಗುರಿ ನೀಡಿತ್ತು.
ಈ ಬೃಹತ್ ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್‌ಗೆ ನಾುಂಕ ಕೇನ್ ವಿಲಿಯಂಮ್ಸನ್ ಹಾಗೂ ಟಾಮ್ ಲಾಥಮ್ ಅದ್ಭುತ ಜೊತೆಯಾಟ ಗೆಲುವಿನ ದಡ ಸೇರಿಸಿತು. ನ್ಯೂಜಿಲೆಂಡ್ ೩ ವಿಕೆಟ್ ನಷ್ಟಕ್ಕೆ ೩೦೯ ರನ್ ಹೊಡೆಯಿತು. ವಿಲಿುಂಮ್ಸನ್ ಅಜೇಯ ೯೪ ಹಾಗೂ ಲಾಥಮ್ ಅಜೇಯ ೧೪೫ ರನ್ ಬಾರಿಸಿದರು. ಇನ್ನುಳಿದಂತೆ ಫಿನ್ ಅಲೆನ್ ೨೨, ಕಾನ್ವೇ ೨೪ ಹಾಗೂ ಮಿಚೆಲ್ ೧೧ ರನ್ ಪೇರಿಸಿದ್ದಾರೆ.

ಈ ಹಂತದಲ್ಲಿ ಭಾರತದ ಬೃಹತ್ ಮೊತ್ತದ ಕನಸು ಕಮರುವತ್ತ ಸಾಗಿತು. ಆದರೆ ಮತ್ತೊಂದು ತುದಿಯಲ್ಲಿದ್ದ ಶ್ರೇಯಸ್ ಅಯ್ಯರ್ ನಿಧಾನವಾಗಿ ಲಯ ಕಂಡುಕೊಂಡರು. ಅವರಿಗೆ ಸಂಜು ಸ್ಯಾಮ್ಸನ್ (೩೬ ರನ್) ಮತ್ತು ವಾಷಿಂಗ್ಟನ್ ಸುಂದರ್ (ಅಜೇಯ ೩೭) ಉತ್ತಮ ಸಾಥ್ ನೀಡಿದರು. ಅಯ್ಯರ್  ಕೇವಲ ೭೬ ಎಸೆತಗಲ್ಲಿ ೮೦ ರನ್ ಸಿಡಿಸಿ ಇನ್ನಿಂಗ್ಸ್ ಅಂತಿಮ ಹಂತದಲ್ಲಿ ಸೌಥಿ ಬೌಲಿಂಗ್‌ನಲ್ಲಿ ನಿರ್ಗಮಿಸಿದರು. ಅದೇ ಕೊನೆಯ ಓವರ್‌ನಲ್ಲಿ ಕೊನೆಯ ಎಸೆತದಲ್ಲಿ ಠಾಕೂರ್ ಔಟಾಗುವುದರೊಂದಿಗೆ ಭಾರತದ ಇನ್ನಿಂಗ್ಸ್‌ಗೆ ತೆರೆ ಬಿತ್ತು. ಕಿವೀಸ್ ಪರ ಸೌಥಿ ಮತ್ತು ಫರ್ಗುಸನ್ ತಲಾ ೩ ವಿಕೆಟ್ ಪಡೆದರೆ, ಮಿಲ್ನೆ ೧ ವಿಕೆಟ್ ಪಡೆದರು

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago