ಕ್ರೀಡೆ

ನ್ಯೂಜಿಲೆಂಡ್‌ಗೆ 7 ವಿಕೆಟ್ ಭರ್ಜರಿ ಜಯ

ಆಕ್ಲೆಂಡ್ : ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿಲಿಯಂಮ್ಸ್ ಅಜೇಯ ೯೪, ಲಾಥಮ್ ಅಜೇಯ ೧೪೫ ರನ್ ನೆರವಿನಿಂದ ೭ ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.

ಆಕ್ಲೆಂಡ್‌ನ ಈಡನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಾಯಕ ಶಿಖರ್ ಧವನ್, ಶುಭಮನ್ ಗಿಲ್ ಮತ್ತು ಶ್ರೇಯಸ್ ಅವರ ಅರ್ಧಶತಕಗಳ ನೆರವಿನಿಂದ ನಿಗಧಿತ ೫೦ ಓವರ್ ಗಳಲ್ಲಿ ೭ ವಿಕೆಟ್ ನಷ್ಟಕ್ಕೆ ೩೦೬ರನ್ ಗಳಿಸಿ ಕಿವೀಸ್ ಗೆ ಗೆಲ್ಲಲು ೩೦೭ ರನ್ ಗುರಿ ನೀಡಿತ್ತು.
ಈ ಬೃಹತ್ ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್‌ಗೆ ನಾುಂಕ ಕೇನ್ ವಿಲಿಯಂಮ್ಸನ್ ಹಾಗೂ ಟಾಮ್ ಲಾಥಮ್ ಅದ್ಭುತ ಜೊತೆಯಾಟ ಗೆಲುವಿನ ದಡ ಸೇರಿಸಿತು. ನ್ಯೂಜಿಲೆಂಡ್ ೩ ವಿಕೆಟ್ ನಷ್ಟಕ್ಕೆ ೩೦೯ ರನ್ ಹೊಡೆಯಿತು. ವಿಲಿುಂಮ್ಸನ್ ಅಜೇಯ ೯೪ ಹಾಗೂ ಲಾಥಮ್ ಅಜೇಯ ೧೪೫ ರನ್ ಬಾರಿಸಿದರು. ಇನ್ನುಳಿದಂತೆ ಫಿನ್ ಅಲೆನ್ ೨೨, ಕಾನ್ವೇ ೨೪ ಹಾಗೂ ಮಿಚೆಲ್ ೧೧ ರನ್ ಪೇರಿಸಿದ್ದಾರೆ.

ಈ ಹಂತದಲ್ಲಿ ಭಾರತದ ಬೃಹತ್ ಮೊತ್ತದ ಕನಸು ಕಮರುವತ್ತ ಸಾಗಿತು. ಆದರೆ ಮತ್ತೊಂದು ತುದಿಯಲ್ಲಿದ್ದ ಶ್ರೇಯಸ್ ಅಯ್ಯರ್ ನಿಧಾನವಾಗಿ ಲಯ ಕಂಡುಕೊಂಡರು. ಅವರಿಗೆ ಸಂಜು ಸ್ಯಾಮ್ಸನ್ (೩೬ ರನ್) ಮತ್ತು ವಾಷಿಂಗ್ಟನ್ ಸುಂದರ್ (ಅಜೇಯ ೩೭) ಉತ್ತಮ ಸಾಥ್ ನೀಡಿದರು. ಅಯ್ಯರ್  ಕೇವಲ ೭೬ ಎಸೆತಗಲ್ಲಿ ೮೦ ರನ್ ಸಿಡಿಸಿ ಇನ್ನಿಂಗ್ಸ್ ಅಂತಿಮ ಹಂತದಲ್ಲಿ ಸೌಥಿ ಬೌಲಿಂಗ್‌ನಲ್ಲಿ ನಿರ್ಗಮಿಸಿದರು. ಅದೇ ಕೊನೆಯ ಓವರ್‌ನಲ್ಲಿ ಕೊನೆಯ ಎಸೆತದಲ್ಲಿ ಠಾಕೂರ್ ಔಟಾಗುವುದರೊಂದಿಗೆ ಭಾರತದ ಇನ್ನಿಂಗ್ಸ್‌ಗೆ ತೆರೆ ಬಿತ್ತು. ಕಿವೀಸ್ ಪರ ಸೌಥಿ ಮತ್ತು ಫರ್ಗುಸನ್ ತಲಾ ೩ ವಿಕೆಟ್ ಪಡೆದರೆ, ಮಿಲ್ನೆ ೧ ವಿಕೆಟ್ ಪಡೆದರು

andolana

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

8 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

11 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

12 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

13 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

13 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

13 hours ago