ಕ್ರೀಡೆ

ನ್ಯೂಜಿಲೆಂಡ್‌ಗೆ 7 ವಿಕೆಟ್ ಭರ್ಜರಿ ಜಯ

ಆಕ್ಲೆಂಡ್ : ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿಲಿಯಂಮ್ಸ್ ಅಜೇಯ ೯೪, ಲಾಥಮ್ ಅಜೇಯ ೧೪೫ ರನ್ ನೆರವಿನಿಂದ ೭ ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.

ಆಕ್ಲೆಂಡ್‌ನ ಈಡನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಾಯಕ ಶಿಖರ್ ಧವನ್, ಶುಭಮನ್ ಗಿಲ್ ಮತ್ತು ಶ್ರೇಯಸ್ ಅವರ ಅರ್ಧಶತಕಗಳ ನೆರವಿನಿಂದ ನಿಗಧಿತ ೫೦ ಓವರ್ ಗಳಲ್ಲಿ ೭ ವಿಕೆಟ್ ನಷ್ಟಕ್ಕೆ ೩೦೬ರನ್ ಗಳಿಸಿ ಕಿವೀಸ್ ಗೆ ಗೆಲ್ಲಲು ೩೦೭ ರನ್ ಗುರಿ ನೀಡಿತ್ತು.
ಈ ಬೃಹತ್ ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್‌ಗೆ ನಾುಂಕ ಕೇನ್ ವಿಲಿಯಂಮ್ಸನ್ ಹಾಗೂ ಟಾಮ್ ಲಾಥಮ್ ಅದ್ಭುತ ಜೊತೆಯಾಟ ಗೆಲುವಿನ ದಡ ಸೇರಿಸಿತು. ನ್ಯೂಜಿಲೆಂಡ್ ೩ ವಿಕೆಟ್ ನಷ್ಟಕ್ಕೆ ೩೦೯ ರನ್ ಹೊಡೆಯಿತು. ವಿಲಿುಂಮ್ಸನ್ ಅಜೇಯ ೯೪ ಹಾಗೂ ಲಾಥಮ್ ಅಜೇಯ ೧೪೫ ರನ್ ಬಾರಿಸಿದರು. ಇನ್ನುಳಿದಂತೆ ಫಿನ್ ಅಲೆನ್ ೨೨, ಕಾನ್ವೇ ೨೪ ಹಾಗೂ ಮಿಚೆಲ್ ೧೧ ರನ್ ಪೇರಿಸಿದ್ದಾರೆ.

ಈ ಹಂತದಲ್ಲಿ ಭಾರತದ ಬೃಹತ್ ಮೊತ್ತದ ಕನಸು ಕಮರುವತ್ತ ಸಾಗಿತು. ಆದರೆ ಮತ್ತೊಂದು ತುದಿಯಲ್ಲಿದ್ದ ಶ್ರೇಯಸ್ ಅಯ್ಯರ್ ನಿಧಾನವಾಗಿ ಲಯ ಕಂಡುಕೊಂಡರು. ಅವರಿಗೆ ಸಂಜು ಸ್ಯಾಮ್ಸನ್ (೩೬ ರನ್) ಮತ್ತು ವಾಷಿಂಗ್ಟನ್ ಸುಂದರ್ (ಅಜೇಯ ೩೭) ಉತ್ತಮ ಸಾಥ್ ನೀಡಿದರು. ಅಯ್ಯರ್  ಕೇವಲ ೭೬ ಎಸೆತಗಲ್ಲಿ ೮೦ ರನ್ ಸಿಡಿಸಿ ಇನ್ನಿಂಗ್ಸ್ ಅಂತಿಮ ಹಂತದಲ್ಲಿ ಸೌಥಿ ಬೌಲಿಂಗ್‌ನಲ್ಲಿ ನಿರ್ಗಮಿಸಿದರು. ಅದೇ ಕೊನೆಯ ಓವರ್‌ನಲ್ಲಿ ಕೊನೆಯ ಎಸೆತದಲ್ಲಿ ಠಾಕೂರ್ ಔಟಾಗುವುದರೊಂದಿಗೆ ಭಾರತದ ಇನ್ನಿಂಗ್ಸ್‌ಗೆ ತೆರೆ ಬಿತ್ತು. ಕಿವೀಸ್ ಪರ ಸೌಥಿ ಮತ್ತು ಫರ್ಗುಸನ್ ತಲಾ ೩ ವಿಕೆಟ್ ಪಡೆದರೆ, ಮಿಲ್ನೆ ೧ ವಿಕೆಟ್ ಪಡೆದರು

andolana

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago