ಕ್ರೀಡೆ

ನ್ಯೂಜಿಲೆಂಡ್‌ಗೆ 7 ವಿಕೆಟ್ ಭರ್ಜರಿ ಜಯ

ಆಕ್ಲೆಂಡ್ : ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿಲಿಯಂಮ್ಸ್ ಅಜೇಯ ೯೪, ಲಾಥಮ್ ಅಜೇಯ ೧೪೫ ರನ್ ನೆರವಿನಿಂದ ೭ ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.

ಆಕ್ಲೆಂಡ್‌ನ ಈಡನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಾಯಕ ಶಿಖರ್ ಧವನ್, ಶುಭಮನ್ ಗಿಲ್ ಮತ್ತು ಶ್ರೇಯಸ್ ಅವರ ಅರ್ಧಶತಕಗಳ ನೆರವಿನಿಂದ ನಿಗಧಿತ ೫೦ ಓವರ್ ಗಳಲ್ಲಿ ೭ ವಿಕೆಟ್ ನಷ್ಟಕ್ಕೆ ೩೦೬ರನ್ ಗಳಿಸಿ ಕಿವೀಸ್ ಗೆ ಗೆಲ್ಲಲು ೩೦೭ ರನ್ ಗುರಿ ನೀಡಿತ್ತು.
ಈ ಬೃಹತ್ ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್‌ಗೆ ನಾುಂಕ ಕೇನ್ ವಿಲಿಯಂಮ್ಸನ್ ಹಾಗೂ ಟಾಮ್ ಲಾಥಮ್ ಅದ್ಭುತ ಜೊತೆಯಾಟ ಗೆಲುವಿನ ದಡ ಸೇರಿಸಿತು. ನ್ಯೂಜಿಲೆಂಡ್ ೩ ವಿಕೆಟ್ ನಷ್ಟಕ್ಕೆ ೩೦೯ ರನ್ ಹೊಡೆಯಿತು. ವಿಲಿುಂಮ್ಸನ್ ಅಜೇಯ ೯೪ ಹಾಗೂ ಲಾಥಮ್ ಅಜೇಯ ೧೪೫ ರನ್ ಬಾರಿಸಿದರು. ಇನ್ನುಳಿದಂತೆ ಫಿನ್ ಅಲೆನ್ ೨೨, ಕಾನ್ವೇ ೨೪ ಹಾಗೂ ಮಿಚೆಲ್ ೧೧ ರನ್ ಪೇರಿಸಿದ್ದಾರೆ.

ಈ ಹಂತದಲ್ಲಿ ಭಾರತದ ಬೃಹತ್ ಮೊತ್ತದ ಕನಸು ಕಮರುವತ್ತ ಸಾಗಿತು. ಆದರೆ ಮತ್ತೊಂದು ತುದಿಯಲ್ಲಿದ್ದ ಶ್ರೇಯಸ್ ಅಯ್ಯರ್ ನಿಧಾನವಾಗಿ ಲಯ ಕಂಡುಕೊಂಡರು. ಅವರಿಗೆ ಸಂಜು ಸ್ಯಾಮ್ಸನ್ (೩೬ ರನ್) ಮತ್ತು ವಾಷಿಂಗ್ಟನ್ ಸುಂದರ್ (ಅಜೇಯ ೩೭) ಉತ್ತಮ ಸಾಥ್ ನೀಡಿದರು. ಅಯ್ಯರ್  ಕೇವಲ ೭೬ ಎಸೆತಗಲ್ಲಿ ೮೦ ರನ್ ಸಿಡಿಸಿ ಇನ್ನಿಂಗ್ಸ್ ಅಂತಿಮ ಹಂತದಲ್ಲಿ ಸೌಥಿ ಬೌಲಿಂಗ್‌ನಲ್ಲಿ ನಿರ್ಗಮಿಸಿದರು. ಅದೇ ಕೊನೆಯ ಓವರ್‌ನಲ್ಲಿ ಕೊನೆಯ ಎಸೆತದಲ್ಲಿ ಠಾಕೂರ್ ಔಟಾಗುವುದರೊಂದಿಗೆ ಭಾರತದ ಇನ್ನಿಂಗ್ಸ್‌ಗೆ ತೆರೆ ಬಿತ್ತು. ಕಿವೀಸ್ ಪರ ಸೌಥಿ ಮತ್ತು ಫರ್ಗುಸನ್ ತಲಾ ೩ ವಿಕೆಟ್ ಪಡೆದರೆ, ಮಿಲ್ನೆ ೧ ವಿಕೆಟ್ ಪಡೆದರು

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago