Categories: ಕ್ರೀಡೆ

ಟಿ-20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ಬರೆದ ನೈಜೀರಿಯಾ

ಹೊಸದಿಲ್ಲಿ: ಟಿ20 ವಿಶ್ವಕಪ್‌ಗೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು, ಐವರಿ ಕೋಸ್ಟ್ ವಿರುದ್ಧ ನಡೆದ ಪಂದ್ಯದಲ್ಲಿ ನೈಜೀರಿಯಾ ತಂಡವು ಐವರಿ ಕೋಸ್ಟ್‌ ತಂಡವನ್ನು ಕೇವಲ 7ರನ್‌ಗಳಿಗೆ ಆಲೌಟ್‌ ಮಾಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದೆ.

ಟಾಸ್‌ ಗೆದ್ದ ನೈಜೀರಿಯಾ ತಂಡವು ಬ್ಯಾಟಿಂಗ್‌ ಆಯ್ದುಕೊಂಡಿತು. ನಾಯಕನ ಆಯ್ಕೆಗೆ ತಕ್ಕಂತೆ ಬ್ಯಾಟ್‌ ಬೀಸಿದ ನೈಜೀರಿಯಾ ತಂಡದ ಬ್ಯಾಟರ್‌ಗಳೂ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 271 ರನ್‌ ಕಲೆಹಾಕಿತು. ನೈಜೀರಿಯಾ ಪರ ಬ್ಯಾಟರ್‌ ಸುಲೈಮಾನ್‌ 50 ರನ್(29ಎಸೆತ), ಸಲೀಂ ಸಾಲೌ 112‌ ರನ್(53ಎಸೆತ), ಹಾಗೂ ಕೊನೆಯಲ್ಲಿ ಐಸಾಕ್‌ ಒಕ್ಪೆ 65 ರನ್(23ಎಸೆತ) ಸಿಡಿಸಿದರು.

ಬೃಹತ್‌ ಮೊತ್ತವನ್ನು ಬೆನ್ನಟ್ಟಿದ ಐವರಿ ಕೋಸ್ಟ್‌ ತಂಡವು 7.3 ಓವರ್‌ಗಳಲ್ಲಿ 7 ರನ್‌ಗೆ ಆಲೌಟ್‌ ಆಗುವ ಮೂಲಕ ನೈಜೀರಿಯಾ ತಂಡದ ಮುಂದೆ ಭಾರಿ ಮುಖಭಂಗ ಅನುಭವಿಸಿತು. ಆರಂಭಿಕ ಬ್ಯಾಟರ್‌ ಮೊಹಮ್ಮದ್‌ 4 ರನ್‌ ಗಳಿಸಿದರೆ, ಇಬ್ರಾಹಿಂ, ಅಲೆಕ್ಸಿ ತಲಾ 1 ರನ್‌ಗಳಿಸಿದರು. ಇನ್ನುಳಿದ 7 ಬ್ಯಾಟರ್‌ಗಳು ಸೊನ್ನೆ ಸುತ್ತಿದರು.

ಈ ಮೂಲಕ ನೈಜೀರಿಯಾ ತಂಡವು 264 ರನ್‌ಗಳ ಜಯ ಸಾಧಿಸುವ ಮೂಲಕ ಟಿ20 ಕ್ರಿಕೆಟ್‌ ಇತಿಹಾಸದಲ್ಲಿ ಬೃಹತ್‌ ರನ್‌ಗಳ ಅಂತರದಿಂದ ಗೆದ್ದ ದಾಖಲೆ ಪಟ್ಟಿಯಲ್ಲಿ ನೈಜೀರಿಯಾ ತಂಡ ಮೂದನೇ ಸ್ಥಾನಕ್ಕೇರಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

3 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

7 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

7 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

7 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

7 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

8 hours ago