Categories: ಕ್ರೀಡೆ

ಟಿ-20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ಬರೆದ ನೈಜೀರಿಯಾ

ಹೊಸದಿಲ್ಲಿ: ಟಿ20 ವಿಶ್ವಕಪ್‌ಗೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು, ಐವರಿ ಕೋಸ್ಟ್ ವಿರುದ್ಧ ನಡೆದ ಪಂದ್ಯದಲ್ಲಿ ನೈಜೀರಿಯಾ ತಂಡವು ಐವರಿ ಕೋಸ್ಟ್‌ ತಂಡವನ್ನು ಕೇವಲ 7ರನ್‌ಗಳಿಗೆ ಆಲೌಟ್‌ ಮಾಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದೆ.

ಟಾಸ್‌ ಗೆದ್ದ ನೈಜೀರಿಯಾ ತಂಡವು ಬ್ಯಾಟಿಂಗ್‌ ಆಯ್ದುಕೊಂಡಿತು. ನಾಯಕನ ಆಯ್ಕೆಗೆ ತಕ್ಕಂತೆ ಬ್ಯಾಟ್‌ ಬೀಸಿದ ನೈಜೀರಿಯಾ ತಂಡದ ಬ್ಯಾಟರ್‌ಗಳೂ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 271 ರನ್‌ ಕಲೆಹಾಕಿತು. ನೈಜೀರಿಯಾ ಪರ ಬ್ಯಾಟರ್‌ ಸುಲೈಮಾನ್‌ 50 ರನ್(29ಎಸೆತ), ಸಲೀಂ ಸಾಲೌ 112‌ ರನ್(53ಎಸೆತ), ಹಾಗೂ ಕೊನೆಯಲ್ಲಿ ಐಸಾಕ್‌ ಒಕ್ಪೆ 65 ರನ್(23ಎಸೆತ) ಸಿಡಿಸಿದರು.

ಬೃಹತ್‌ ಮೊತ್ತವನ್ನು ಬೆನ್ನಟ್ಟಿದ ಐವರಿ ಕೋಸ್ಟ್‌ ತಂಡವು 7.3 ಓವರ್‌ಗಳಲ್ಲಿ 7 ರನ್‌ಗೆ ಆಲೌಟ್‌ ಆಗುವ ಮೂಲಕ ನೈಜೀರಿಯಾ ತಂಡದ ಮುಂದೆ ಭಾರಿ ಮುಖಭಂಗ ಅನುಭವಿಸಿತು. ಆರಂಭಿಕ ಬ್ಯಾಟರ್‌ ಮೊಹಮ್ಮದ್‌ 4 ರನ್‌ ಗಳಿಸಿದರೆ, ಇಬ್ರಾಹಿಂ, ಅಲೆಕ್ಸಿ ತಲಾ 1 ರನ್‌ಗಳಿಸಿದರು. ಇನ್ನುಳಿದ 7 ಬ್ಯಾಟರ್‌ಗಳು ಸೊನ್ನೆ ಸುತ್ತಿದರು.

ಈ ಮೂಲಕ ನೈಜೀರಿಯಾ ತಂಡವು 264 ರನ್‌ಗಳ ಜಯ ಸಾಧಿಸುವ ಮೂಲಕ ಟಿ20 ಕ್ರಿಕೆಟ್‌ ಇತಿಹಾಸದಲ್ಲಿ ಬೃಹತ್‌ ರನ್‌ಗಳ ಅಂತರದಿಂದ ಗೆದ್ದ ದಾಖಲೆ ಪಟ್ಟಿಯಲ್ಲಿ ನೈಜೀರಿಯಾ ತಂಡ ಮೂದನೇ ಸ್ಥಾನಕ್ಕೇರಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

7 mins ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

14 mins ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

35 mins ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

1 hour ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

2 hours ago

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…

2 hours ago