ಕ್ರೀಡೆ

Paris Paralympics 2024: ಹೈಜಂಪ್‌ನಲ್ಲಿ ನಿಶಾದ್‌ಗೆ ಬೆಳ್ಳಿ

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಪುರುಷರ ಹೈಜಂಪ್‌ ಟಿ-47 ವಿಭಾಗದಲ್ಲಿ ಭಾರತದ ಪಟು ನಿಶಾದ್‌ ಕುಮಾರ್‌ ಅವರು ಬೆಳ್ಳಿ ಜಯಿಸಿದ್ದಾರೆ.

ಕಳೆದ ಟೊಕಿಯೋ ಒಲಂಪಿಕ್ಸ್‌ನಲ್ಲಿ ಇದೇ ವಿಭಾಗದಲ್ಲಿ ಬೆಳ್ಳಿ ಜಯಿಸಿದ್ದ ನಿಶಾದ್‌ ಅವರು ಪ್ರಸಕ್ತ ಋತುವಿನಲ್ಲಿ 2.04 ಮೀ ಜಿಗಿಯುವ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಅಮೇರಿಕಾದ ರೊಡೆರಿಕ್‌ ಟೌನ್ಸೆಂಡ್‌ (2.12 ಮೀ.) ಚಿನ್ನ ಗೆದ್ದರೇ, ಜಾರ್ಜಿ ಮಾರ್ಗೀವ್‌ (2 ಮೀ.) ಕಂಚಿಗೆ ತೃಪ್ತಿ ಪಟ್ಟುಕೊಂಡರು.

ರಾಷ್ಟ್ರಪತಿ ಅಭಿನಂದನೆ: ಹೈಜಂಪ್‌ನಲ್ಲಿ ಬೆಳ್ಳಿ ಗೆದ್ದ ನಿಶಾದ್‌ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಅವರು “ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಹೈಜಂಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ನಿಶಾದ್ ಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಅವರ ಟೋಕಿಯೊ ಪ್ಯಾರಾಲಿಂಪಿಕ್ ಬೆಳ್ಳಿ ಪದಕದ ನಂತರ ಎತ್ತರದ ಜಿಗಿತ ಸ್ಪರ್ಧೆಯಲ್ಲಿ ಅವರ ಸತತ ಬೆಳ್ಳಿ ಪದಕವಾಗಿದೆ. ಅವರ ಸ್ಥಿರತೆ ಮತ್ತು ಶ್ರೇಷ್ಠತೆಯನ್ನು ನಮ್ಮ ದೇಶದ ಕ್ರೀಡಾಪಟುಗಳು ಅನುಕರಿಸಬಹುದು. ಅವರು ನಿರಂತರ ಯಶಸ್ಸು ಮತ್ತು ವೈಭವವನ್ನು ಹೊಂದಬೇಕೆಂದು ನಾನು ಬಯಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

https://x.com/rashtrapatibhvn/status/1830435319184867545

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸೋನ್ ಹಿಲ್ ಬಳಿಯ ಕಸದ ರಾಶಿ ತೆರವು ಕಾರ್ಯ ಶುರು

ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…

1 hour ago

ಗ್ಯಾಂಗ್ರಿನ್‌ಗೆ ಬೇಡ ಭಯ; ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಭಯ

ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…

1 hour ago

ನಂಜನಗೂಡಿಗೆ ಬಸ್ ಹತ್ತಿದರೆ ತಿ.ನರಸೀಪುರದ ಟಿಕೆಟ್!

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…

1 hour ago

ಕೋರ್ಟ್ ಮೆಟ್ಟಿಲೇರಿದ್ದ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ತೆರೆ

ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…

2 hours ago

ಸಿಎಂ ತವರಲ್ಲಿ ಮಾರ್ಚ್‌ನಲ್ಲಿ ಅಕ್ಕ ಕೆಫೆ ಶುರು

ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…

2 hours ago