ಕ್ರೀಡೆ

ಅಪ್ರಾಪ್ತೆ ಆರೋಪಕ್ಕೆ ಪುರಾವೆ ಇಲ್ಲ: ಬ್ರಿಜ್ ಭೂಷಣ್ ವಿರುದ್ಧದ ಪ್ರಕರಣ ರದ್ದತಿಗೆ ದೆಹಲಿ ಪೊಲೀಸ್ ಕೋರಿಕೆ

ನವದೆಹಲಿ: ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ನಿರ್ಗಮಿತ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ಬಾಲಕಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಂದೆ ನೀಡಿದ ಹೇಳಿಕೆಗಳ ಆಧಾರದ ಮೇಲೆ ಪ್ರಕರಣ ರದ್ದು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ದೆಹಲಿ ಪೊಲೀಸರು ಹೇಳಿದ್ದಾರೆ. ಲೈಂಗಿಕ ಕಿರುಕುಳ ಮತ್ತು ಬೆಂಬಿಡದೆ ಹಿಂಬಾಲಿಸಿಕೊಂಡು ಕಿರುಕುಳ ನೀಡುವ ಆರೋಪಗಳಿಗೆ ಸಂಬಂಧಪಟ್ಟಂತೆ ಬ್ರಿಜ್ ಭೂಷಣ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.

ಅಪ್ರಾಪ್ತ ಬಾಲಕಿ ಆರೋಪದಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸ್ ವರದಿ ಹೇಳಿದೆ. ನ್ಯಾಯಾಲಯವು ಈ ಬಗ್ಗೆ ಜುಲೈ 4ರಂದು ಮುಂದಿನ ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.

ಕಳೆದ ಏಪ್ರಿಲ್ 28 ರಂದು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ. ಎಲ್ಲಾ ಆರೋಪಗಳನ್ನು ನಿರಾಕರಿಸಿರುವ ಸಿಂಗ್, ತನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೂ ನೇಣು ಹಾಕಿಕೊಳ್ಳುವುದಾಗಿ ಈ ಹಿಂದೆ ಹೇಳಿಕೊಂಡಿದ್ದರು.

ಏಳು ಮಹಿಳಾ ಕುಸ್ತಿಪಟುಗಳು ಏಪ್ರಿಲ್ 21 ರಂದು WFI ಮುಖ್ಯಸ್ಥರ ವಿರುದ್ಧ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಪೊಲೀಸರು ಏಪ್ರಿಲ್ 28 ರಂದು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಅವರನ್ನು ಬಂಧಿಸದಿದ್ದರೆ ಅವರು ತಮ್ಮ ಪ್ರತಿಭಟನೆಯನ್ನು ಮತ್ತೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಐಪಿಸಿಯ ಸಂಬಂಧಿತ ಸೆಕ್ಷನ್‌ಗಳೊಂದಿಗೆ ಪೋಕ್ಸೊ ಕಾಯ್ದೆಯಡಿ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ಅಪ್ರಾಪ್ತ ವಯಸ್ಕ ಬಾಲಕಿಯ ಆರೋಪದ ಆಧಾರದ ಮೇಲೆ ಅದನ್ನು ದಾಖಲಿಸಲಾಗಿದೆ. ನಮ್ರತೆಯ ಉಲ್ಲಂಘನೆಗೆ ಸಂಬಂಧಿಸಿದ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕುಸ್ತಿಪಟುಗಳು ದಾಖಲಿಸಿದ ದೂರುಗಳ ಆಧಾರದ ಮೇಲೆ ಭೂಷಣ್ ಸಿಂಗ್ ವಿರುದ್ಧ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ತಮ್ಮ ಮಾತುಕತೆಯ ಸಂದರ್ಭದಲ್ಲಿ ಜೂನ್ 15 ರೊಳಗೆ ಪ್ರಕರಣದ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದರು.

andolanait

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

12 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

12 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

16 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago