ಕ್ರೀಡೆ

ಅಪ್ರಾಪ್ತೆ ಆರೋಪಕ್ಕೆ ಪುರಾವೆ ಇಲ್ಲ: ಬ್ರಿಜ್ ಭೂಷಣ್ ವಿರುದ್ಧದ ಪ್ರಕರಣ ರದ್ದತಿಗೆ ದೆಹಲಿ ಪೊಲೀಸ್ ಕೋರಿಕೆ

ನವದೆಹಲಿ: ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ನಿರ್ಗಮಿತ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ಬಾಲಕಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಂದೆ ನೀಡಿದ ಹೇಳಿಕೆಗಳ ಆಧಾರದ ಮೇಲೆ ಪ್ರಕರಣ ರದ್ದು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ದೆಹಲಿ ಪೊಲೀಸರು ಹೇಳಿದ್ದಾರೆ. ಲೈಂಗಿಕ ಕಿರುಕುಳ ಮತ್ತು ಬೆಂಬಿಡದೆ ಹಿಂಬಾಲಿಸಿಕೊಂಡು ಕಿರುಕುಳ ನೀಡುವ ಆರೋಪಗಳಿಗೆ ಸಂಬಂಧಪಟ್ಟಂತೆ ಬ್ರಿಜ್ ಭೂಷಣ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.

ಅಪ್ರಾಪ್ತ ಬಾಲಕಿ ಆರೋಪದಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸ್ ವರದಿ ಹೇಳಿದೆ. ನ್ಯಾಯಾಲಯವು ಈ ಬಗ್ಗೆ ಜುಲೈ 4ರಂದು ಮುಂದಿನ ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.

ಕಳೆದ ಏಪ್ರಿಲ್ 28 ರಂದು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ. ಎಲ್ಲಾ ಆರೋಪಗಳನ್ನು ನಿರಾಕರಿಸಿರುವ ಸಿಂಗ್, ತನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೂ ನೇಣು ಹಾಕಿಕೊಳ್ಳುವುದಾಗಿ ಈ ಹಿಂದೆ ಹೇಳಿಕೊಂಡಿದ್ದರು.

ಏಳು ಮಹಿಳಾ ಕುಸ್ತಿಪಟುಗಳು ಏಪ್ರಿಲ್ 21 ರಂದು WFI ಮುಖ್ಯಸ್ಥರ ವಿರುದ್ಧ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಪೊಲೀಸರು ಏಪ್ರಿಲ್ 28 ರಂದು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಅವರನ್ನು ಬಂಧಿಸದಿದ್ದರೆ ಅವರು ತಮ್ಮ ಪ್ರತಿಭಟನೆಯನ್ನು ಮತ್ತೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಐಪಿಸಿಯ ಸಂಬಂಧಿತ ಸೆಕ್ಷನ್‌ಗಳೊಂದಿಗೆ ಪೋಕ್ಸೊ ಕಾಯ್ದೆಯಡಿ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ಅಪ್ರಾಪ್ತ ವಯಸ್ಕ ಬಾಲಕಿಯ ಆರೋಪದ ಆಧಾರದ ಮೇಲೆ ಅದನ್ನು ದಾಖಲಿಸಲಾಗಿದೆ. ನಮ್ರತೆಯ ಉಲ್ಲಂಘನೆಗೆ ಸಂಬಂಧಿಸಿದ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕುಸ್ತಿಪಟುಗಳು ದಾಖಲಿಸಿದ ದೂರುಗಳ ಆಧಾರದ ಮೇಲೆ ಭೂಷಣ್ ಸಿಂಗ್ ವಿರುದ್ಧ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ತಮ್ಮ ಮಾತುಕತೆಯ ಸಂದರ್ಭದಲ್ಲಿ ಜೂನ್ 15 ರೊಳಗೆ ಪ್ರಕರಣದ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದರು.

andolanait

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

2 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

2 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

2 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

2 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

2 hours ago