ಬೆಂಗಳೂರು: ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಹಲವು ಮ್ಯಾಚ್ ಫಿನಿಷಿಂಗ್ ಇನಿಂಗ್ಸ್ಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಗೆಲ್ಲಿಸಿದ್ದ ದಿನೇಶ್ ಕಾರ್ತಿಕ್, ಪ್ರಸಕ್ತ ಆವೃತ್ತಿಯಲ್ಲಿ ವೈಫಲ್ಯ ಅನುಭವಿಸುವ ಮೂಲಕ ಟೀಕೆಗಳಿಗೆ ಗುರಿಯಾಗಿದ್ದಾರೆ.
ಭಾನುವಾರ ಗುಜರಾತ್ ಟೈಟನ್ಸ್ ವಿರುದ್ಧ ನಾಲ್ಕನೇ ಬಾರಿ ಡಕ್ಔಟ್ ಆದರು. ಆ ಮೂಲಕ ಐಪಿಎಲ್ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಡಕ್ಔಟ್ ಆಗುವ ಮೂಲಕ ಅನಗತ್ಯ ದಾಖಲೆಯನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ.
ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯ ಆರ್ಸಿಬಿಗೆ ಅತ್ಯಂತ ನಿರ್ಣಾಯಕವಾಗಿತ್ತು. ಐಪಿಎಲ್ ಪ್ಲೇಆಫ್ಗೆ ಅರ್ಹತೆ ಪಡೆಯಲು ಗುಜರಾತ್ ವಿರುದ್ದ ಗೆಲುವು ಅಗತ್ಯವಿತ್ತು. ಆದರೆ, ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುವಂತಾದ ಆರ್ಸಿಬಿ ಪರ ಇನ್ಫಾರ್ಮ್ ಬ್ಯಾಟರ್ಗಳಾದ ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಬೇಗ ವಿಕೆಟ್ ಒಪ್ಪಿಸಿದ್ದರು. ಆರನೇ ಕ್ರಮಾಂಕದಲ್ಲಿ ಕ್ರೀಸ್ಗೆ ಬಂದಿದ್ದ ದಿನೇಶ್ ಕಾರ್ತಿಕ್ ಎದುರಿಸಿದ ಮೊಟ್ಟ ಮೊದಲ ಎಸೆತದಲ್ಲಿಯೇ ಯಶ್ ದಯಾಳ್ ಎಸೆತದಲ್ಲಿ ವಿಕೆಟ್ ಕೀಪರ್ ವೃದ್ದಿಮಾನ್ ಸಹಾಗೆ ಕ್ಯಾಚಿತ್ತು ನಿರ್ಗಮಿಸಿದರು.
ಗುಜರಾತ್ ವಿರುದ್ದ ಡಕ್ಔಟ್ ಆಗುವ ಮೂಲಕ ದಿನೇಶ್ ಕಾರ್ತಿಕ್ ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ನಾಲ್ಕನೇ ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದಂತಾಯಿತು. ಆ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಜೋಸ್ ಬಟ್ಲರ್ (4 ಡಕ್ಔಟ್) ಅವರ ಅನಗತ್ಯ ದಾಖಲೆಯನ್ನು ಆರ್ಸಿಬಿ ವಿಕೆಟ್ ಕೀಪರ್ ಸರಿದೂಗಿಸಿದರು.
ಗುಜರಾತ್ ವಿರುದ್ದ ಶೂನ್ಯಕ್ಕೆ ವಿಕೆಟ್ ಒಪ್ಪಿಸುವ ಮೂಲಕ ದಿನೇಶ್ ಕಾರ್ತಿಕ್ ತಮ್ಮ ಐಪಿಎಲ್ ವೃತ್ತಿ ಜೀವನದಲ್ಲಿ 17ನೇ ಬಾರಿ ಡಕ್ಔಟ್ ಆದರು. ಆ ಮೂಲಕ 16 ಬಾರಿ ಡಕ್ಔಟ್ ಆಗಿದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರ ಅನಗತ್ಯ ದಾಖಲೆಯನ್ನು ಮುರಿದಿದ್ದಾರೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಡಕ್ಔಟ್ ಆದ ಕುಖ್ಯಾತಿಗೆ ದಿನೇಶ್ ಕಾರ್ತಿಕ್ ಭಾಜನರಾಗಿದ್ದಾರೆ.
1. ದಿನೇಶ್ ಕಾರ್ತಿಕ್-17
2. ರೋಹಿತ್ ಶರ್ಮಾ-16
3. ಸುನೀಲ್ ನರೈನ್-15
4. ಮಂದೀಪ್ ಸಿಂಗ್-15
5.ಮನೀಷ್ ಪಾಡೆ-14
6. ಗ್ಲೆನ್ ಮ್ಯಾಕ್ಸ್ವೆಲ್-14
7. ಅಂಬಾಟಿ ರಾಯುಡು-14
8.ರಶೀದ್ ಖಾನ್-13
9.ಪಿಯೂಷ್ ಚಾವ್ಲಾ-13
2023ರ ಐಪಿಲ್ ಟೂರ್ನಿಯಲ್ಲಿ ಕಳಪೆ ಫಾರ್ಮ್: 2022ರ ಐಪಿಎಲ್ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದ ದಿನೇಶ್ ಕಾರ್ತಿಕ್, ಸುದೀರ್ಘ ಅವಧಿಯ ಬಳಿಕ ಭಾರತ ಟಿ20 ತಂಡಕ್ಕೆ ಲಗ್ಗೆ ಇಟ್ಟಿದ್ದರು. ಆದರೆ, 2023ರ ಐಪಿಎಲ್ ಟೂರ್ನಿಯಲ್ಲಿ ತಮಿಳುನಾಡು ಮೂಲದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಸತತ ವೈಫಲ್ಯ ಅನುಭವಿಸಿದ್ದಾರೆ. ನಾಲ್ಕು ಬಾರಿ ಡಕ್ಔಟ್ ಜೊತೆಗೆ ಆಡಿದ 13 ಇನಿಂಗ್ಸ್ಗಳಿಂದ 11.67ರ ಸರಾಸರಿಯಲ್ಲಿ ಕೇವಲ 140 ರನ್ ಗಳಿಸಿದ್ದಾರೆ. ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಷಿರ್ ಆಗಿ ವೈಫಲ್ಯ ಅನುಭವಿಸಿದ ಕಾರಣ ಕೂಡ ಆರ್ಸಿಬಿ ಹಲವು ಪಂದ್ಯಗಳಲ್ಲಿ ಸೋಲಲು ಕಾರಣವಾಗಿದೆ ಎಂದರೆ ತಪ್ಪಾಗಲಾರದು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…