ಕ್ರೀಡೆ

ಐಪಿಎಲ್‌ ಮಾತ್ರವಲ್ಲ ಒಡಿಐ ವಿಶ್ವಕಪ್‌ ಟೂರ್ನಿಯಿಂದಲೂ ಹೊರಬಿದ್ದ ಕೇನ್‌ ವಿಲಿಯಮ್ಸನ್‌!

ಬೆಂಗಳೂರು : ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ನಡೆದ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ತಂಡದ ಸ್ಟಾರ್‌ ಆಟಗಾರ ಕೇನ್ ವಿಲಿಯಮ್ಸನ್ ಮೊಣಕಾಲಿನ ಮೂಳೆ ಮುರಿದ ಗಾಯದ ಸಮಸ್ಯೆ ಎದುರಿಸಿದರು. ಇದೀಗ ಇದೇ ಕಾರಣಕ್ಕೆ ಅಕ್ಟೋಬರ್‌-ನವೆಂಬರ್‌ನಲ್ಲಿ ನಡೆಯಲಿರುವ 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಿಂದಲೂ ನ್ಯೂಜಿಲೆಂಡ್‌ ತಂಡದ ನಾಯಕ ಹೊರಗುಳಿಯುವ ಸಾಧ್ಯತೆಯಿದೆ.

ಗುಜರಾತ್ ಟೈಟಾನ್ಸ್‌ನ ಆರಂಭಿಕ ಪಂದ್ಯದ ನಂತರ ಐಪಿಎಲ್‌ನಿಂದ ಹೊರಗುಳಿದಿರುವ ವಿಲಿಯಮ್ಸನ್ ಗಾಯಗೊಂಡಿರುವ ಬಲ ಮೊಣಕಾಲಿನ ಸಮಸ್ಯೆ ನಿವಾರಣೆಗೆ ಶೀಘ್ರವೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಸಂಸ್ಥೆ ಗುರುವಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

“ಶಸ್ತ್ರಚಿಕಿತ್ಸೆಗೆ ಒಳಪಟ್ಟ ಬಳಿಕ ಕೇನ್‌ ವಿಲಿಯಮ್ಸನ್‌ ನಿಗದಿತ ಪುನಶ್ಚೇತನ ಶಿಬಿರಕ್ಕೆ ಒಳಪಡಬೇಕಾಗುತ್ತದೆ. ಇದರರ್ಥ ಅವರು ಮುಂಬರುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ,” ಎಂದು ಕ್ರಿಕೆಟ್‌ ನ್ಯೂಜಿಲೆಂಡ್‌ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮಾರ್ಚ್ 31 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್‌ ಪರ ಫೀಲ್ಡಿಂಗ್ ಮಾಡುವಾಗ ವಿಲಿಯಮ್ಸನ್ ಅವರ ಮುಂಭಾಗದ ಕ್ರೂಸಿಯೇಟ್ ಲಿಗಮೆಂಟ್ (ಮಂಡಿ ಮೂಳೆ) ಛಿದ್ರವಾಯಿತು. ಹೀಗಾಗಿ ಮುಂದಿನ ಮೂರು ವಾರಗಳಲ್ಲಿ ಅವರು ತಮ್ಮ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ. 2019ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಫೈನಲ್‌ಗೆ ಮುನ್ನಡೆಸಿ ರನ್ನರ್ಸ್‌ಅಪ್ ಸ್ಥಾನ ತಂದುಕೊಟ್ಟಿದ್ದ ಕ್ಯಾಪ್ಟನ್‌ ವಿಲಿಯಮ್ಸನ್, ಇದೀಗ ಶಸ್ತ್ರಚಿಕಿತ್ಸೆಯತ್ತ ಗಮನ ಹರಿಸುವುದಾಗಿ ಮತ್ತು ಸಾಧ್ಯವಾದಷ್ಟು ಬೇಗ ಪುನರ್ವಸತಿ ಪ್ರಾರಂಭಿಸುವುದಾಗಿ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ನಾನು ಉತ್ತಮ ಬೆಂಬಲವನ್ನು ಪಡೆದಿದ್ದೇನೆ ಮತ್ತು ಅದಕ್ಕಾಗಿ ಗುಜರಾತ್ ಟೈಟನ್ಸ್ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ಸಂಸ್ಥೆ ಎರಡಕ್ಕೂ ಧನ್ಯವಾದ ಹೇಳಲು ಬಯಸುತ್ತೇನೆ,” ಎಂದು ವಿಲಿಯಮ್ಸನ್ ಹೇಳಿದರು.

ಈ ರೀತಿಯ ಗಾಯದ ಸಮಸ್ಯೆಗಳು ಸಾಮಾನ್ಯವಾಗಿ ಎದುರಾದಾಗ ಬಹಳಾ ನಿರಾಶೆ ತಂದೊಡ್ಡುತ್ತದೆ. ಆದರೆ ನನ್ನ ಗಮನವು ಈಗ ಶಸ್ತ್ರಚಿಕಿತ್ಸೆ ಮತ್ತು ಸಾಧ್ಯವಾದಷ್ಟು ಬೇಗ ಪುನರ್ವಸತಿ ಪ್ರಾರಂಭಿಸುವುದರ ಮೇಲೆ ಕೇಂದ್ರೀಕೃತವಾಗಿದೆ, ಖಂಡಿತಾ ಇದು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ, ಆದರೆ ನಾನು ಸಾಧ್ಯವಾದಷ್ಟು ಬೇಗ ಮೈದಾನಕ್ಕೆ ಮರಳಲು ಎಲ್ಲ ಪ್ರಯ್ನ ಮಾಡುತ್ತೇನೆ,” ಎಂದಿದ್ದಾರೆ.

ಕಿವೀಸ್‌ ಮುಖ್ಯ ಕೋಚ್‌ ಗ್ಯಾರಿ ಸ್ಟೀಡ್ ಮತ್ತು ತಂಡದ ಸಹಾಯದಿಂದ ಸಾಧ್ಯವಾದಷ್ಟು ಬೇಗ ಫಿಟ್ ಆಗಲು ಏನು ಬೇಕಾದರೂ ಮಾಡುತ್ತೇನೆ ಎಂದು ವಿಲಿಯಮ್ಸನ್ ಒತ್ತಿ ಹೇಳಿದ್ದಾರೆ. “ಮುಂದಿನ ಕೆಲವು ತಿಂಗಳುಗಳಲ್ಲಿ ಗ್ಯಾರಿ ಮತ್ತು ತಂಡವನ್ನು ಬೆಂಬಲಿಸಲು ನಾನು ಏನು ಮಾಡಬಹುದೋ ಅದನ್ನು ಮಾಡಲು ಎದುರು ನೋಡುತ್ತಿದ್ದೇನೆ,” ಎಂದು ವಿಲಿಯಮ್ಸನ್ ಆತ್ಮವಿಶ್ವಾಸ ಹೊರಹಾಕಿದ್ದಾರೆ.

ಐಪಿಎಲ್ 2023 ರ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡವು ಗಾಯಾಳು ವಿಲಿಯಮ್ಸನ್ ಬದಲಿಗೆ ಶ್ರೀಲಂಕಾದ ವೈಟ್-ಬಾಲ್ ನಾಯಕ ದಸುನ್ ಶನಕ ಅವರನ್ನು ಬದಲಿ ಆಟಗಾರನನ್ನಾಗಿ ಎಗೆದುಕೊಂಡಿದೆ. ಮೂಲ ಬೆಲೆ 50 ಲಕ್ಷ ರೂ.ಗಳಿಗೆ ಶನಕ ಜೊತೆಗೆ ಟೈಟನ್ಸ್‌ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ ಇದೇ ಮೊದಲ ಬಾರಿ ಐಪಿಎಲ್‌ನಲ್ಲಿ ದಸುನ್‌ ಶನಕ ಕಾಣಿಸಿಕೊಳ್ಳಲಿದ್ದಾರೆ.

andolanait

Recent Posts

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…

47 mins ago

ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…

56 mins ago

ಪುಕ್ಕಟೆ ಪಾರ್ಕಿಂಗ್ ಮಾಡಬೇಕೆ? ಇಲ್ಲಿಗೆ ಬನ್ನಿ!

ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…

1 hour ago

ಮನ್ರೆಗಾ ಓಕೆ… ವಿಬಿ ಜೀ ರಾಮ್ ಜೀ ಯಾಕೆ?

ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…

1 hour ago

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

12 hours ago