ಕ್ರೀಡೆ

NZ vs BAN ಟೆಸ್ಟ್‌: 29ನೇ ಟೆಸ್ಟ್‌ ಶತಕ ದಾಖಲಿಸಿದ ಕೇನ್‌ ವಿಲಿಯಮ್ಸ್‌

ಸಿಲ್ಹೆಟ್‌ : ನ್ಯೂಜಿಲೆಂಡ್ ತಂಡ ಎರಡು ಟೆಸ್ಟ್‌ ಪಂದ್ಯಗಳು ಆಡಲು ಬಾಂಗ್ಲಾದೇಶ ಪ್ರವಾಸ ಕೈಗೊಂಡಿದೆ. ಇಲ್ಲಿನ ಸೈಲ್ಹಟ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊಲದ ಟೆಸ್ಟ್‌ ಪಂದ್ಯದಲ್ಲಿ ಕಿವೀಸ್‌ಗೆ ಆಸರೆಯಾಗಿ ನಿಂತ ಮಾಜಿ ನಾಯಕ ಕೇನ್‌ ವಿಲಿಯಮ್ಸನ್‌ ತಮ್ಮ ಟೆಸ್ಟ್‌ ವೃತ್ತಿಬದುಕಿನ 29ನೇ ಶತಕ ಬಾರಿಸಿದ್ದಾರೆ. ಜೊತೆಗೆ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

ಒಂದೆಡೆ ವಿಕೆಟ್‌ಗಳು ಉರುಳುತ್ತಿದ್ದರು, ಮತ್ತೊಂದೆಡೆ ಕ್ರೀಸ್‌ನಲ್ಲಿ ಸುಭದ್ರವಾಗಿ ನೆಲೆನಿಂತ ಕೇನ್‌ ವಿಲಿಯಮ್ಸನ್‌ ಮನಮೋಹಕ ಶತಕ ಬಾರಿಸಿದರು. 205 ಎಸೆತಗಳಲ್ಲಿ 104 ರನ್‌ ಬಾರಿಸಿದ ಬಲಗೈ ಬ್ಯಾಟರ್ ತಮ್ಮ 42ನೇ ಅಂತಾರಾಷ್ಟ್ರೀಯ ಶತಕ ದಾಖಲಿಸಿದರು. ಹಾಲಿ ಕ್ರಿಕೆಟಿಗರ ಪೈಕಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.

ಹಾಲಿ ಕ್ರಿಕೆಟಿಗರ ಪೈಕಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಶತಕ ಬಾರಿಸಿರುವ ಬ್ಯಾಟರ್ಸ್‌
01) ವಿರಾಟ್‌ ಕೊಹ್ಲಿ (ಭಾರತ) – 80
02) ಡೇವಿಡ್‌ ವಾರ್ನರ್‌ (ಆಸ್ಟ್ರೇಲಿಯಾ) – 48
03) ಜೋ ರೂಟ್‌ (ಇಂಗ್ಲೆಂಡ್‌) – 46
04) ರೋಹಿತ್‌ ಶರ್ಮಾ (ಭಾರತ) – 45
05) ಸ್ಟೀವ್ ಸ್ಮಿತ್‌ (ಆಸ್ಟ್ರೇಲಿಯಾ) – 44
06) ಕೇನ್‌ ವಿಲಿಯಮ್ಸನ್‌ (ನ್ಯೂಜಿಲೆಂಡ್) – 42

ಬಾಂಗ್ಲಾದೇಶ / ನ್ಯೂಜಿಲ್ಯಾಂಡ್‌ ತಂಡದ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದ ಬಾಂಗ್ಲಾ, ಮೊಲದ ಇನಿಂಗ್ಸ್‌ನಲ್ಲಿ 85.1 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 310 ರನ್‌ ಕಲೆಹಾಕಿದರು. ಬಾಂಗ್ಲಾ ಪರವಾಗಿ ಹಸನ್‌ ಜಾಯ್‌ 86 ರನ್‌ ಗಳಿಸಿದರು. ನ್ಯೂಜಿಲೆಂಡ್‌ ಪರವಾಗಿ ಗ್ಲೆನ್‌ ಫಿಲಿಪ್ಸ್‌ 53/4, ಕೈಲ್‌ ಜೇಮಿಸನ್‌ಮ ಎಜಾಯ್‌ ಪಟೇಲ್‌ ತಲಾ 2 ವಿಕೆಟ್‌ ಪಡೆದರು.

ಎರಡನೇ ದಿನ ನ್ಯೂಜಿಲ್ಯಾಂಡ್‌ ತನ್ನ ಮೊದಲ ಇನ್ನಿಂಗ್ಸ್‌ ಆರಂಭಿಸಿದರು. ತಂಡದ ವಿಕೆಟ್‌ಗಳು ಒಂದೆಡೆ ಬೀಳುತ್ತಿದ್ದರೂ ಮತ್ತೊಂದೆಡೆ ಶತಕದಾಟ ಆಡಿ ತಂಡವನ್ನು ಸುಧಾರಿಸಿದ ಕೇನ್‌, 205 ಎಸೆತಗಳಲ್ಲಿ 11 ಫೋರ್‌ಗಳೊಂದಿಗೆ 104 ರನ್‌ ಬಾರಿಸಿ ಔಟಾದರು.

ಡ್ಯಾರಿಲ್ ಮಿಚೆಲ್‌ 41 ಮತ್ತು ಗ್ಲೆನ್‌ ಫಿಲಿಪ್ಸ್‌ 42 ದೊಡ್ಡ ಇನ್ನಿಂಗ್ಸ್‌ ನೀಡಿದರು, ಆದರೆ ವಿಫಲರಾದರು. ಆಲ್‌ರೌಂಡರ್‌ ಕೈಲ್‌ ಜೇಮಿಸನ್‌ 7 ಮತ್ತು ಟಿಮ್‌ ಸೌಥೀ 1 ಕ್ರೀಸ್‌ನಲ್ಲಿದ್ದು, ಮೊದಲ ಇನಿಂಗ್ಸ್‌ನಲ್ಲಿ ನ್ಯೂಜಿಲೆಂಡ್‌ 44 ರನ್‌ಗಳ ಹಿನ್ನೆಡೆ ಅನುಭವಿಸಿದೆ.

ನಾಳೆ ಮೊದಲ ಟೆಸ್ಟ್‌ನ ಮೂರನೇ ದಿನಕ್ಕೆ ಆಟ ಕಾಯ್ದಿರಿಸಲಾಗಿದೆ.

andolanait

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

30 mins ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

33 mins ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

39 mins ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

43 mins ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

47 mins ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

52 mins ago