ಕ್ರೀಡೆ

NZ vs BAN ಟೆಸ್ಟ್‌: 29ನೇ ಟೆಸ್ಟ್‌ ಶತಕ ದಾಖಲಿಸಿದ ಕೇನ್‌ ವಿಲಿಯಮ್ಸ್‌

ಸಿಲ್ಹೆಟ್‌ : ನ್ಯೂಜಿಲೆಂಡ್ ತಂಡ ಎರಡು ಟೆಸ್ಟ್‌ ಪಂದ್ಯಗಳು ಆಡಲು ಬಾಂಗ್ಲಾದೇಶ ಪ್ರವಾಸ ಕೈಗೊಂಡಿದೆ. ಇಲ್ಲಿನ ಸೈಲ್ಹಟ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊಲದ ಟೆಸ್ಟ್‌ ಪಂದ್ಯದಲ್ಲಿ ಕಿವೀಸ್‌ಗೆ ಆಸರೆಯಾಗಿ ನಿಂತ ಮಾಜಿ ನಾಯಕ ಕೇನ್‌ ವಿಲಿಯಮ್ಸನ್‌ ತಮ್ಮ ಟೆಸ್ಟ್‌ ವೃತ್ತಿಬದುಕಿನ 29ನೇ ಶತಕ ಬಾರಿಸಿದ್ದಾರೆ. ಜೊತೆಗೆ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

ಒಂದೆಡೆ ವಿಕೆಟ್‌ಗಳು ಉರುಳುತ್ತಿದ್ದರು, ಮತ್ತೊಂದೆಡೆ ಕ್ರೀಸ್‌ನಲ್ಲಿ ಸುಭದ್ರವಾಗಿ ನೆಲೆನಿಂತ ಕೇನ್‌ ವಿಲಿಯಮ್ಸನ್‌ ಮನಮೋಹಕ ಶತಕ ಬಾರಿಸಿದರು. 205 ಎಸೆತಗಳಲ್ಲಿ 104 ರನ್‌ ಬಾರಿಸಿದ ಬಲಗೈ ಬ್ಯಾಟರ್ ತಮ್ಮ 42ನೇ ಅಂತಾರಾಷ್ಟ್ರೀಯ ಶತಕ ದಾಖಲಿಸಿದರು. ಹಾಲಿ ಕ್ರಿಕೆಟಿಗರ ಪೈಕಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.

ಹಾಲಿ ಕ್ರಿಕೆಟಿಗರ ಪೈಕಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಶತಕ ಬಾರಿಸಿರುವ ಬ್ಯಾಟರ್ಸ್‌
01) ವಿರಾಟ್‌ ಕೊಹ್ಲಿ (ಭಾರತ) – 80
02) ಡೇವಿಡ್‌ ವಾರ್ನರ್‌ (ಆಸ್ಟ್ರೇಲಿಯಾ) – 48
03) ಜೋ ರೂಟ್‌ (ಇಂಗ್ಲೆಂಡ್‌) – 46
04) ರೋಹಿತ್‌ ಶರ್ಮಾ (ಭಾರತ) – 45
05) ಸ್ಟೀವ್ ಸ್ಮಿತ್‌ (ಆಸ್ಟ್ರೇಲಿಯಾ) – 44
06) ಕೇನ್‌ ವಿಲಿಯಮ್ಸನ್‌ (ನ್ಯೂಜಿಲೆಂಡ್) – 42

ಬಾಂಗ್ಲಾದೇಶ / ನ್ಯೂಜಿಲ್ಯಾಂಡ್‌ ತಂಡದ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದ ಬಾಂಗ್ಲಾ, ಮೊಲದ ಇನಿಂಗ್ಸ್‌ನಲ್ಲಿ 85.1 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 310 ರನ್‌ ಕಲೆಹಾಕಿದರು. ಬಾಂಗ್ಲಾ ಪರವಾಗಿ ಹಸನ್‌ ಜಾಯ್‌ 86 ರನ್‌ ಗಳಿಸಿದರು. ನ್ಯೂಜಿಲೆಂಡ್‌ ಪರವಾಗಿ ಗ್ಲೆನ್‌ ಫಿಲಿಪ್ಸ್‌ 53/4, ಕೈಲ್‌ ಜೇಮಿಸನ್‌ಮ ಎಜಾಯ್‌ ಪಟೇಲ್‌ ತಲಾ 2 ವಿಕೆಟ್‌ ಪಡೆದರು.

ಎರಡನೇ ದಿನ ನ್ಯೂಜಿಲ್ಯಾಂಡ್‌ ತನ್ನ ಮೊದಲ ಇನ್ನಿಂಗ್ಸ್‌ ಆರಂಭಿಸಿದರು. ತಂಡದ ವಿಕೆಟ್‌ಗಳು ಒಂದೆಡೆ ಬೀಳುತ್ತಿದ್ದರೂ ಮತ್ತೊಂದೆಡೆ ಶತಕದಾಟ ಆಡಿ ತಂಡವನ್ನು ಸುಧಾರಿಸಿದ ಕೇನ್‌, 205 ಎಸೆತಗಳಲ್ಲಿ 11 ಫೋರ್‌ಗಳೊಂದಿಗೆ 104 ರನ್‌ ಬಾರಿಸಿ ಔಟಾದರು.

ಡ್ಯಾರಿಲ್ ಮಿಚೆಲ್‌ 41 ಮತ್ತು ಗ್ಲೆನ್‌ ಫಿಲಿಪ್ಸ್‌ 42 ದೊಡ್ಡ ಇನ್ನಿಂಗ್ಸ್‌ ನೀಡಿದರು, ಆದರೆ ವಿಫಲರಾದರು. ಆಲ್‌ರೌಂಡರ್‌ ಕೈಲ್‌ ಜೇಮಿಸನ್‌ 7 ಮತ್ತು ಟಿಮ್‌ ಸೌಥೀ 1 ಕ್ರೀಸ್‌ನಲ್ಲಿದ್ದು, ಮೊದಲ ಇನಿಂಗ್ಸ್‌ನಲ್ಲಿ ನ್ಯೂಜಿಲೆಂಡ್‌ 44 ರನ್‌ಗಳ ಹಿನ್ನೆಡೆ ಅನುಭವಿಸಿದೆ.

ನಾಳೆ ಮೊದಲ ಟೆಸ್ಟ್‌ನ ಮೂರನೇ ದಿನಕ್ಕೆ ಆಟ ಕಾಯ್ದಿರಿಸಲಾಗಿದೆ.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

8 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

19 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

19 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

19 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

19 hours ago