ಹಂಬಂತೋಟ: ಸಾಂಘಿಕ ಪ್ರದರ್ಶನ ನೀಡಿದ ಅಫ್ಘಾನಿಸ್ಥಾನ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು 6 ವಿಕೆಟ್ಗಳಿಂದ ಭರ್ಜರಿಯಾಗಿ ಮಣಿಸಿ 1-0 ಮುನ್ನಡೆ ಸಾಧಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಸರಿಯಾಗಿ 50 ಓವರ್ಗಳಲ್ಲಿ 268ಕ್ಕೆ ಆಲೌಟಾದರೆ, ಅಫ್ಘಾನ್ 46.5 ಓವರ್ಗಳಲ್ಲಿ 4 ವಿಕೆಟಿಗೆ 269 ರನ್ ಬಾರಿಸಿ ಜಯ ಸಾಧಿಸಿತು.
ಆರಂಭಕಾರ ಇಬ್ರಾಹಿಂ ಜದ್ರಾನ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಅಫ್ಘಾನ್ನ ಯಶಸ್ವಿ ಚೇಸಿಂಗ್ನಲ್ಲಿ ಮಹತ್ವದ ಪಾತ್ರ ವಹಿಸಿತು. ಭರ್ತಿ 30 ಓವರ್ಗಳ ತನಕ ಕ್ರೀಸ್ ಆಕ್ರಮಿಸಿಕೊಂಡ ಜದ್ರಾನ್ ಶತಕಕ್ಕೆ ಕೇವಲ 2 ರನ್ ಅಗತ್ಯವಿದ್ದಾಗ ಔಟಾದರು. ಅವರು ಎಸೆತಕ್ಕೊಂದರಂತೆ 98 ರನ್ ಬಾರಿಸಿದರು. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್ನಲ್ಲಿ 11 ಬೌಂಡರಿ, 2 ಸಿಕ್ಸರ್ ಸೇರಿತ್ತು.
ಮಧ್ಯಮ ಕ್ರಮಾಂಕದ ಬ್ಯಾಟರ್ಗಳೂ ಲಂಕಾ ದಾಳಿಯನ್ನು ದಿಟ್ಟ ರೀತಿಯಲ್ಲಿ ಎದುರಿಸಿದರು. ರೆಹಮತ್ ಶಾ 55, ನಾಯಕ ಹಶ್ಮತುಲ್ಲ ಶಾಹಿದಿ 38, ಮೊಹಮ್ಮದ್ ನಬಿ ಔಟಾಗದೆ 27 ರನ್ ಹೊಡೆದರು. ಜದ್ರಾನ್-ರೆಹಮತ್ ಜೋಡಿ ದ್ವಿತೀಯ ವಿಕೆಟಿಗೆ 146 ರನ್ ಸೇರಿಸಿ ಲಂಕಾ ಬೌಲರ್ಗಳಿಗೆ ಬೆವರಿಳಿಸಿದರು.
ಶ್ರಿಲಂಕಾ ಅಗ್ರ ಕ್ರಮಾಂಕದ ಕುಸಿತಕ್ಕೆ ಸಿಲುಕಿತು. 84ಕ್ಕೆ 4 ವಿಕೆಟ್ ಬಿತ್ತು. ಆದರೆ 5ನೇ ವಿಕೆಟಿಗೆ ಜತೆಗೂಡಿದ ಚರಿತ ಅಸಲಂಕ (91) ಮತ್ತು ಧನಂಜಯ ಡಿ ಸಿಲ್ವ (51) ಸೇರಿಕೊಂಡು ಹೋರಾಟವನ್ನು ಜಾರಿಯಲ್ಲಿರಿಸಿದರು.
ಅಫ್ಘಾನ್ ಪರ ಬೌಲಿಂಗ್ ದಾಳಿಗಿಳಿದ ಎಲ್ಲ 6 ಮಂದಿ ವಿಕೆಟ್ ಉರುಳಿಸಲು ಯಶಸ್ವಿಯಾದರು.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಇದು ಅವರ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್ಅನ್ನು ಮಂಡಿಸಲಿದ್ದಾರೆ. ಸಾಂಪ್ರದಾಯಿಕ…
ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 9ನೇ ಬಜೆಟ್ ಮಂಡನೆ…
ಸೂರ್ಯ ಪುತ್ರ ಆತನ ಹೆಸರು ದೀಪಕ್. ಮಲ್ಟಿ ನ್ಯಾಷನಲ್ ಕಂಪೆನಿ ಉದ್ಯೋಗಿ. ಕೇರಳದ ಕಣ್ಣೂರಿನ ರೈಲ್ವೇ ಸ್ಟೇಷನ್ ಪಕ್ಕದಿಂದ ಜನ…
ಸಿರಿ ಮೈಸೂರು ಬೆಳ್ಳಿಮೋಡ, ಗೆಜ್ಜೆಪೂಜೆ, ಎಡಕಲ್ಲು ಗುಡ್ಡದ ಮೇಲೆ, ಬಿಳಿ ಹೆಂಡ್ತಿ, ನಾಗರ ಹಾವು, ರಂಗನಾಯಕಿ, ಮಸಣದ ಹೂವು, ಶರಪಂಜರ...…
ಅಕ್ಷತಾ ನೀವು ಬೆಕ್ಕುಪ್ರಿಯರಾಗಿದ್ದರೆ ಮೈಸೂರು-ನಂಜನಗೂಡು ರಸ್ತೆಯ ಈ ಮಾರ್ಜಾಲ ಸಂಗ್ರಹಾಲಯಕ್ಕೆ ಭೇಟಿಕೊಡಿ. ಮುದ್ದಿನ ಸಾಕುಪ್ರಾಣಿಯಾಗಿ ಮನೆಯೊಳಗಿರುವ ಬೆಕ್ಕನ್ನು ಕೌತುಕದ ಕಣ್ಣಿನಿಂದ…