ಕ್ರೀಡೆ

ಏಕದಿನ ಪಂದ್ಯ: ಲಂಕೆಯನ್ನು ಮಣಿಸಿದ ಅಫ್ಘಾನ್‌

ಹಂಬಂತೋಟ: ಸಾಂಘಿಕ ಪ್ರದರ್ಶನ ನೀಡಿದ ಅಫ್ಘಾನಿಸ್ಥಾನ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸಿ 1-0 ಮುನ್ನಡೆ ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾ ಸರಿಯಾಗಿ 50 ಓವರ್‌ಗಳಲ್ಲಿ 268ಕ್ಕೆ ಆಲೌಟಾದರೆ, ಅಫ್ಘಾನ್‌ 46.5 ಓವರ್‌ಗಳಲ್ಲಿ 4 ವಿಕೆಟಿಗೆ 269 ರನ್‌ ಬಾರಿಸಿ ಜಯ ಸಾಧಿಸಿತು.
ಆರಂಭಕಾರ ಇಬ್ರಾಹಿಂ ಜದ್ರಾನ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ಅಫ್ಘಾನ್‌ನ ಯಶಸ್ವಿ ಚೇಸಿಂಗ್‌ನಲ್ಲಿ ಮಹತ್ವದ ಪಾತ್ರ ವಹಿಸಿತು. ಭರ್ತಿ 30 ಓವರ್‌ಗಳ ತನಕ ಕ್ರೀಸ್‌ ಆಕ್ರಮಿಸಿಕೊಂಡ ಜದ್ರಾನ್‌ ಶತಕಕ್ಕೆ ಕೇವಲ 2 ರನ್‌ ಅಗತ್ಯವಿದ್ದಾಗ ಔಟಾದರು. ಅವರು ಎಸೆತಕ್ಕೊಂದರಂತೆ 98 ರನ್‌ ಬಾರಿಸಿದರು. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ, 2 ಸಿಕ್ಸರ್‌ ಸೇರಿತ್ತು.

ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳೂ ಲಂಕಾ ದಾಳಿಯನ್ನು ದಿಟ್ಟ ರೀತಿಯಲ್ಲಿ ಎದುರಿಸಿದರು. ರೆಹಮತ್‌ ಶಾ 55, ನಾಯಕ ಹಶ್ಮತುಲ್ಲ ಶಾಹಿದಿ 38, ಮೊಹಮ್ಮದ್‌ ನಬಿ ಔಟಾಗದೆ 27 ರನ್‌ ಹೊಡೆದರು. ಜದ್ರಾನ್‌-ರೆಹಮತ್‌ ಜೋಡಿ ದ್ವಿತೀಯ ವಿಕೆಟಿಗೆ 146 ರನ್‌ ಸೇರಿಸಿ ಲಂಕಾ ಬೌಲರ್‌ಗಳಿಗೆ ಬೆವರಿಳಿಸಿದರು.

ಶ್ರಿಲಂಕಾ ಅಗ್ರ ಕ್ರಮಾಂಕದ ಕುಸಿತಕ್ಕೆ ಸಿಲುಕಿತು. 84ಕ್ಕೆ 4 ವಿಕೆಟ್‌ ಬಿತ್ತು. ಆದರೆ 5ನೇ ವಿಕೆಟಿಗೆ ಜತೆಗೂಡಿದ ಚರಿತ ಅಸಲಂಕ (91) ಮತ್ತು ಧನಂಜಯ ಡಿ ಸಿಲ್ವ (51) ಸೇರಿಕೊಂಡು ಹೋರಾಟವನ್ನು ಜಾರಿಯಲ್ಲಿರಿಸಿದರು.

ಅಫ್ಘಾನ್‌ ಪರ ಬೌಲಿಂಗ್‌ ದಾಳಿಗಿಳಿದ ಎಲ್ಲ 6 ಮಂದಿ ವಿಕೆಟ್‌ ಉರುಳಿಸಲು ಯಶಸ್ವಿಯಾದರು.

andolanait

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

11 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

11 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

12 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

12 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

13 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

13 hours ago