ಹಂಬಂತೋಟ: ಸಾಂಘಿಕ ಪ್ರದರ್ಶನ ನೀಡಿದ ಅಫ್ಘಾನಿಸ್ಥಾನ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು 6 ವಿಕೆಟ್ಗಳಿಂದ ಭರ್ಜರಿಯಾಗಿ ಮಣಿಸಿ 1-0 ಮುನ್ನಡೆ ಸಾಧಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಸರಿಯಾಗಿ 50 ಓವರ್ಗಳಲ್ಲಿ 268ಕ್ಕೆ ಆಲೌಟಾದರೆ, ಅಫ್ಘಾನ್ 46.5 ಓವರ್ಗಳಲ್ಲಿ 4 ವಿಕೆಟಿಗೆ 269 ರನ್ ಬಾರಿಸಿ ಜಯ ಸಾಧಿಸಿತು.
ಆರಂಭಕಾರ ಇಬ್ರಾಹಿಂ ಜದ್ರಾನ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಅಫ್ಘಾನ್ನ ಯಶಸ್ವಿ ಚೇಸಿಂಗ್ನಲ್ಲಿ ಮಹತ್ವದ ಪಾತ್ರ ವಹಿಸಿತು. ಭರ್ತಿ 30 ಓವರ್ಗಳ ತನಕ ಕ್ರೀಸ್ ಆಕ್ರಮಿಸಿಕೊಂಡ ಜದ್ರಾನ್ ಶತಕಕ್ಕೆ ಕೇವಲ 2 ರನ್ ಅಗತ್ಯವಿದ್ದಾಗ ಔಟಾದರು. ಅವರು ಎಸೆತಕ್ಕೊಂದರಂತೆ 98 ರನ್ ಬಾರಿಸಿದರು. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್ನಲ್ಲಿ 11 ಬೌಂಡರಿ, 2 ಸಿಕ್ಸರ್ ಸೇರಿತ್ತು.
ಮಧ್ಯಮ ಕ್ರಮಾಂಕದ ಬ್ಯಾಟರ್ಗಳೂ ಲಂಕಾ ದಾಳಿಯನ್ನು ದಿಟ್ಟ ರೀತಿಯಲ್ಲಿ ಎದುರಿಸಿದರು. ರೆಹಮತ್ ಶಾ 55, ನಾಯಕ ಹಶ್ಮತುಲ್ಲ ಶಾಹಿದಿ 38, ಮೊಹಮ್ಮದ್ ನಬಿ ಔಟಾಗದೆ 27 ರನ್ ಹೊಡೆದರು. ಜದ್ರಾನ್-ರೆಹಮತ್ ಜೋಡಿ ದ್ವಿತೀಯ ವಿಕೆಟಿಗೆ 146 ರನ್ ಸೇರಿಸಿ ಲಂಕಾ ಬೌಲರ್ಗಳಿಗೆ ಬೆವರಿಳಿಸಿದರು.
ಶ್ರಿಲಂಕಾ ಅಗ್ರ ಕ್ರಮಾಂಕದ ಕುಸಿತಕ್ಕೆ ಸಿಲುಕಿತು. 84ಕ್ಕೆ 4 ವಿಕೆಟ್ ಬಿತ್ತು. ಆದರೆ 5ನೇ ವಿಕೆಟಿಗೆ ಜತೆಗೂಡಿದ ಚರಿತ ಅಸಲಂಕ (91) ಮತ್ತು ಧನಂಜಯ ಡಿ ಸಿಲ್ವ (51) ಸೇರಿಕೊಂಡು ಹೋರಾಟವನ್ನು ಜಾರಿಯಲ್ಲಿರಿಸಿದರು.
ಅಫ್ಘಾನ್ ಪರ ಬೌಲಿಂಗ್ ದಾಳಿಗಿಳಿದ ಎಲ್ಲ 6 ಮಂದಿ ವಿಕೆಟ್ ಉರುಳಿಸಲು ಯಶಸ್ವಿಯಾದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…