ಕ್ರೀಡೆ

ಏಕದಿನ ಪಂದ್ಯ: ಲಂಕೆಯನ್ನು ಮಣಿಸಿದ ಅಫ್ಘಾನ್‌

ಹಂಬಂತೋಟ: ಸಾಂಘಿಕ ಪ್ರದರ್ಶನ ನೀಡಿದ ಅಫ್ಘಾನಿಸ್ಥಾನ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸಿ 1-0 ಮುನ್ನಡೆ ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾ ಸರಿಯಾಗಿ 50 ಓವರ್‌ಗಳಲ್ಲಿ 268ಕ್ಕೆ ಆಲೌಟಾದರೆ, ಅಫ್ಘಾನ್‌ 46.5 ಓವರ್‌ಗಳಲ್ಲಿ 4 ವಿಕೆಟಿಗೆ 269 ರನ್‌ ಬಾರಿಸಿ ಜಯ ಸಾಧಿಸಿತು.
ಆರಂಭಕಾರ ಇಬ್ರಾಹಿಂ ಜದ್ರಾನ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ಅಫ್ಘಾನ್‌ನ ಯಶಸ್ವಿ ಚೇಸಿಂಗ್‌ನಲ್ಲಿ ಮಹತ್ವದ ಪಾತ್ರ ವಹಿಸಿತು. ಭರ್ತಿ 30 ಓವರ್‌ಗಳ ತನಕ ಕ್ರೀಸ್‌ ಆಕ್ರಮಿಸಿಕೊಂಡ ಜದ್ರಾನ್‌ ಶತಕಕ್ಕೆ ಕೇವಲ 2 ರನ್‌ ಅಗತ್ಯವಿದ್ದಾಗ ಔಟಾದರು. ಅವರು ಎಸೆತಕ್ಕೊಂದರಂತೆ 98 ರನ್‌ ಬಾರಿಸಿದರು. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ, 2 ಸಿಕ್ಸರ್‌ ಸೇರಿತ್ತು.

ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳೂ ಲಂಕಾ ದಾಳಿಯನ್ನು ದಿಟ್ಟ ರೀತಿಯಲ್ಲಿ ಎದುರಿಸಿದರು. ರೆಹಮತ್‌ ಶಾ 55, ನಾಯಕ ಹಶ್ಮತುಲ್ಲ ಶಾಹಿದಿ 38, ಮೊಹಮ್ಮದ್‌ ನಬಿ ಔಟಾಗದೆ 27 ರನ್‌ ಹೊಡೆದರು. ಜದ್ರಾನ್‌-ರೆಹಮತ್‌ ಜೋಡಿ ದ್ವಿತೀಯ ವಿಕೆಟಿಗೆ 146 ರನ್‌ ಸೇರಿಸಿ ಲಂಕಾ ಬೌಲರ್‌ಗಳಿಗೆ ಬೆವರಿಳಿಸಿದರು.

ಶ್ರಿಲಂಕಾ ಅಗ್ರ ಕ್ರಮಾಂಕದ ಕುಸಿತಕ್ಕೆ ಸಿಲುಕಿತು. 84ಕ್ಕೆ 4 ವಿಕೆಟ್‌ ಬಿತ್ತು. ಆದರೆ 5ನೇ ವಿಕೆಟಿಗೆ ಜತೆಗೂಡಿದ ಚರಿತ ಅಸಲಂಕ (91) ಮತ್ತು ಧನಂಜಯ ಡಿ ಸಿಲ್ವ (51) ಸೇರಿಕೊಂಡು ಹೋರಾಟವನ್ನು ಜಾರಿಯಲ್ಲಿರಿಸಿದರು.

ಅಫ್ಘಾನ್‌ ಪರ ಬೌಲಿಂಗ್‌ ದಾಳಿಗಿಳಿದ ಎಲ್ಲ 6 ಮಂದಿ ವಿಕೆಟ್‌ ಉರುಳಿಸಲು ಯಶಸ್ವಿಯಾದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago