ಹಂಬಂತೋಟ: ಸಾಂಘಿಕ ಪ್ರದರ್ಶನ ನೀಡಿದ ಅಫ್ಘಾನಿಸ್ಥಾನ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು 6 ವಿಕೆಟ್ಗಳಿಂದ ಭರ್ಜರಿಯಾಗಿ ಮಣಿಸಿ 1-0 ಮುನ್ನಡೆ ಸಾಧಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಸರಿಯಾಗಿ 50 ಓವರ್ಗಳಲ್ಲಿ 268ಕ್ಕೆ ಆಲೌಟಾದರೆ, ಅಫ್ಘಾನ್ 46.5 ಓವರ್ಗಳಲ್ಲಿ 4 ವಿಕೆಟಿಗೆ 269 ರನ್ ಬಾರಿಸಿ ಜಯ ಸಾಧಿಸಿತು.
ಆರಂಭಕಾರ ಇಬ್ರಾಹಿಂ ಜದ್ರಾನ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಅಫ್ಘಾನ್ನ ಯಶಸ್ವಿ ಚೇಸಿಂಗ್ನಲ್ಲಿ ಮಹತ್ವದ ಪಾತ್ರ ವಹಿಸಿತು. ಭರ್ತಿ 30 ಓವರ್ಗಳ ತನಕ ಕ್ರೀಸ್ ಆಕ್ರಮಿಸಿಕೊಂಡ ಜದ್ರಾನ್ ಶತಕಕ್ಕೆ ಕೇವಲ 2 ರನ್ ಅಗತ್ಯವಿದ್ದಾಗ ಔಟಾದರು. ಅವರು ಎಸೆತಕ್ಕೊಂದರಂತೆ 98 ರನ್ ಬಾರಿಸಿದರು. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್ನಲ್ಲಿ 11 ಬೌಂಡರಿ, 2 ಸಿಕ್ಸರ್ ಸೇರಿತ್ತು.
ಮಧ್ಯಮ ಕ್ರಮಾಂಕದ ಬ್ಯಾಟರ್ಗಳೂ ಲಂಕಾ ದಾಳಿಯನ್ನು ದಿಟ್ಟ ರೀತಿಯಲ್ಲಿ ಎದುರಿಸಿದರು. ರೆಹಮತ್ ಶಾ 55, ನಾಯಕ ಹಶ್ಮತುಲ್ಲ ಶಾಹಿದಿ 38, ಮೊಹಮ್ಮದ್ ನಬಿ ಔಟಾಗದೆ 27 ರನ್ ಹೊಡೆದರು. ಜದ್ರಾನ್-ರೆಹಮತ್ ಜೋಡಿ ದ್ವಿತೀಯ ವಿಕೆಟಿಗೆ 146 ರನ್ ಸೇರಿಸಿ ಲಂಕಾ ಬೌಲರ್ಗಳಿಗೆ ಬೆವರಿಳಿಸಿದರು.
ಶ್ರಿಲಂಕಾ ಅಗ್ರ ಕ್ರಮಾಂಕದ ಕುಸಿತಕ್ಕೆ ಸಿಲುಕಿತು. 84ಕ್ಕೆ 4 ವಿಕೆಟ್ ಬಿತ್ತು. ಆದರೆ 5ನೇ ವಿಕೆಟಿಗೆ ಜತೆಗೂಡಿದ ಚರಿತ ಅಸಲಂಕ (91) ಮತ್ತು ಧನಂಜಯ ಡಿ ಸಿಲ್ವ (51) ಸೇರಿಕೊಂಡು ಹೋರಾಟವನ್ನು ಜಾರಿಯಲ್ಲಿರಿಸಿದರು.
ಅಫ್ಘಾನ್ ಪರ ಬೌಲಿಂಗ್ ದಾಳಿಗಿಳಿದ ಎಲ್ಲ 6 ಮಂದಿ ವಿಕೆಟ್ ಉರುಳಿಸಲು ಯಶಸ್ವಿಯಾದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…