ಕ್ರೀಡೆ

ಏಕದಿನ ಪಂದ್ಯ : 99 ರನ್‌ಗೆ ಸೌತ್ ಆಫ್ರಿಕಾವನ್ನು ಕ್ಲೀನ್‌ ಬೋಲ್ಡ್‌ ಮಾಡಿದ ಭಾರತ

ಹೊಸದಿಲ್ಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಏಕದಿನ ಸರಣಿ ಅಂತಿಮ ಘಟ್ಟ ತಲುಪಿದೆ. ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದ ಫಲಿತಾಂಶ ಸರಣಿ ಯಾರಿಗೆ ಅನ್ನೋದು ನಿರ್ಧರಿಸಲಿದೆ. ಈ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿದೆ. ಇದರ ಪರಿಣಾಮ ಸೌತ್ ಆಫ್ರಿಕಾ ಕೇವಲ 99 ರನ್‌ಗೆ ಆಲೌಟ್ ಆಗಿದೆ. ಅಂತಿಮ ಪಂದ್ಯದಲ್ಲಿ ಬೃಹತ್ ಮೊತ್ತ ಪೇರಿಸಿ ಟೀಂ ಇಂಡಿಯಾವನ್ನು ಕಟ್ಟಿಹಾಕುವ ಲೆಕ್ಕಾಚಾರದಲ್ಲಿದ್ದ ಸೌತ್ ಆಫ್ರಿಕಾಗೆ ಟೀಂ ಇಂಡಿಯಾ ಬೌಲರ್‌ಗಳು ಶಾಕ್ ನೀಡಿದ್ದಾರೆ. ಆರಂಭದಲ್ಲಿ ವಾಶಿಂಗ್ಟನ ಸುಂದರ್ ಹಾಗೂ ಮೊಹಮ್ಮದ್ ಸಿರಾಜ್ ದಾಳಿ ಆರಂಭಿಸಿದರೆ, ಬಳಿಕ ಕುಲ್ದೀಪ್ ಯಾದವ್ ಹಾಗೂ ಶಹಬಾಜ್ ಅಹಮ್ಮದ್ ದಾಳಿಗೆ ಸೌತ್ ಆಫ್ರಿಕಾ ಪರದಾಡಿತು. ಸೌತ್ ಆಫ್ರಿಕಾ ಏಕದಿನದಲ್ಲಿ ಸಿಡಿಸಿದ ನಾಲ್ಕನೇ ಅತೀ ಕಡಿಮೆ ಮೊತ್ತ ಅನ್ನೋ ಅಪಖ್ಯಾತಿಗೆ ಸೌತ್ ಆಫ್ರಿಕಾ ಗುರಿಯಾಗಿದೆ.

ಏಕದಿನದಲ್ಲಿ ಸೌತ್ ಆಫ್ರಿಕಾದ ಕಡಿಮೆ ಮೊತ್ತ
69 ರನ್ vs ಆಸ್ಟ್ರೇಲಿಯಾ,1993
83 ರನ್ vs ಇಂಗ್ಲೆಡ್, 2008
117 ರನ್ vs ಭಾರತ, 1999
83 ರನ್ vs ಇಂಗ್ಲೆಂಡ್, 2022
99 ರನ್ vs ಭಾರತ, 2022

ಟಾಸ್ ಸೋತು ಬ್ಯಾಟಿಂಗ್ ಇಳಿದ ಸೌತ್ ಆಫ್ರಿಕಾ 7ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ಕ್ವಿಂಟನ್ ಡಿಕಾಕ್ 6 ರನ್ ಸಿಡಿಸಿ ಔಟಾದರು. ಜ್ಯಾನ್‌ಮನ್ ಮಲನ್ 15 ರನ್ ಸಿಡಿಸಿ ನಿರ್ಗಮಿಸಿದರು. ರೀಜಾ ಹೆಂಡ್ರಿಕ್ಸ್ 3 ರನ್ ಸಿಡಿಸಿ ಔಟಾದರೆ, ಆ್ಯಡಿನ್ ಮರ್ಕ್ರಮ್ 9 ರನ್ ಗಳಿಸಿ ನಿರ್ಗಮಿಸಿದರು. ಆದರೆ ಹೆನ್ರಿಚ್ ಕಾಲ್ಸೆನ್ ಹೋರಾಟ ನೀಡಿದರು.

ಹೆನ್ರಿಚ್‌ಗೆ ಯಾರಿಂದಲೂ ಉತ್ತಮ ಸಾಥ್ ಸಿಗಲಿಲ್ಲ. ನಾಯಕ ಡೇವಿಡ್ ಮಿಲ್ಲರ್ ಕೇವಲ 7ರನ್ ಸಿಡಿಸಿ ಔಟಾದರು. ಆ್ಯಂಡಿಲ್ ಫೆಲುಕ್‌ವಾಯೋ 5 ರನ್ ಸಿಡಿಸಿ ಔಟಾದರು. ಏಕಾಂಗಿ ಹೋರಾಟ ನೀಡಿದ ಹೆನ್ರಿಚ್ 34 ರನ್ ಕಾಣಿಕೆ ನೀಡಿದರು. ಮಾರ್ಕೋ ಜಾನ್ಸೆನ್ 14 ರನ್ ಸಿಡಿಸಿದರು. ಅಂತಿಮವಾಗಿ ಸೌತ್ ಆಫ್ರಿಕಾ 27.1 ಓವರ್‌ಗಳಲ್ಲಿ 99ರನ್ ಸಿಡಿಸಿ ಆಲೌಟ್ ಆಯಿತು.

ಟೀಂ ಇಂಡಿಯಾ ಪರ ಕುಲ್ದೀಪ್ ಯಾದವ್ 4 ವಿಕೆಟ್ ಕಬಳಿಸಿದರು. ಇನ್ನು ವಾಶಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್ ಹಾಗೂ ಶಹಬಾಜ್ ಅಹಮ್ಮದ್ ತಲಾ 2 ವಿಕೆಟ್ ಕಬಳಿಸಿದರು.

andolana

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

2 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

3 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

4 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

5 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

5 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

5 hours ago