ಕ್ರೀಡೆ

ಏಕದಿನ ಪಂದ್ಯ : 99 ರನ್‌ಗೆ ಸೌತ್ ಆಫ್ರಿಕಾವನ್ನು ಕ್ಲೀನ್‌ ಬೋಲ್ಡ್‌ ಮಾಡಿದ ಭಾರತ

ಹೊಸದಿಲ್ಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಏಕದಿನ ಸರಣಿ ಅಂತಿಮ ಘಟ್ಟ ತಲುಪಿದೆ. ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದ ಫಲಿತಾಂಶ ಸರಣಿ ಯಾರಿಗೆ ಅನ್ನೋದು ನಿರ್ಧರಿಸಲಿದೆ. ಈ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿದೆ. ಇದರ ಪರಿಣಾಮ ಸೌತ್ ಆಫ್ರಿಕಾ ಕೇವಲ 99 ರನ್‌ಗೆ ಆಲೌಟ್ ಆಗಿದೆ. ಅಂತಿಮ ಪಂದ್ಯದಲ್ಲಿ ಬೃಹತ್ ಮೊತ್ತ ಪೇರಿಸಿ ಟೀಂ ಇಂಡಿಯಾವನ್ನು ಕಟ್ಟಿಹಾಕುವ ಲೆಕ್ಕಾಚಾರದಲ್ಲಿದ್ದ ಸೌತ್ ಆಫ್ರಿಕಾಗೆ ಟೀಂ ಇಂಡಿಯಾ ಬೌಲರ್‌ಗಳು ಶಾಕ್ ನೀಡಿದ್ದಾರೆ. ಆರಂಭದಲ್ಲಿ ವಾಶಿಂಗ್ಟನ ಸುಂದರ್ ಹಾಗೂ ಮೊಹಮ್ಮದ್ ಸಿರಾಜ್ ದಾಳಿ ಆರಂಭಿಸಿದರೆ, ಬಳಿಕ ಕುಲ್ದೀಪ್ ಯಾದವ್ ಹಾಗೂ ಶಹಬಾಜ್ ಅಹಮ್ಮದ್ ದಾಳಿಗೆ ಸೌತ್ ಆಫ್ರಿಕಾ ಪರದಾಡಿತು. ಸೌತ್ ಆಫ್ರಿಕಾ ಏಕದಿನದಲ್ಲಿ ಸಿಡಿಸಿದ ನಾಲ್ಕನೇ ಅತೀ ಕಡಿಮೆ ಮೊತ್ತ ಅನ್ನೋ ಅಪಖ್ಯಾತಿಗೆ ಸೌತ್ ಆಫ್ರಿಕಾ ಗುರಿಯಾಗಿದೆ.

ಏಕದಿನದಲ್ಲಿ ಸೌತ್ ಆಫ್ರಿಕಾದ ಕಡಿಮೆ ಮೊತ್ತ
69 ರನ್ vs ಆಸ್ಟ್ರೇಲಿಯಾ,1993
83 ರನ್ vs ಇಂಗ್ಲೆಡ್, 2008
117 ರನ್ vs ಭಾರತ, 1999
83 ರನ್ vs ಇಂಗ್ಲೆಂಡ್, 2022
99 ರನ್ vs ಭಾರತ, 2022

ಟಾಸ್ ಸೋತು ಬ್ಯಾಟಿಂಗ್ ಇಳಿದ ಸೌತ್ ಆಫ್ರಿಕಾ 7ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ಕ್ವಿಂಟನ್ ಡಿಕಾಕ್ 6 ರನ್ ಸಿಡಿಸಿ ಔಟಾದರು. ಜ್ಯಾನ್‌ಮನ್ ಮಲನ್ 15 ರನ್ ಸಿಡಿಸಿ ನಿರ್ಗಮಿಸಿದರು. ರೀಜಾ ಹೆಂಡ್ರಿಕ್ಸ್ 3 ರನ್ ಸಿಡಿಸಿ ಔಟಾದರೆ, ಆ್ಯಡಿನ್ ಮರ್ಕ್ರಮ್ 9 ರನ್ ಗಳಿಸಿ ನಿರ್ಗಮಿಸಿದರು. ಆದರೆ ಹೆನ್ರಿಚ್ ಕಾಲ್ಸೆನ್ ಹೋರಾಟ ನೀಡಿದರು.

ಹೆನ್ರಿಚ್‌ಗೆ ಯಾರಿಂದಲೂ ಉತ್ತಮ ಸಾಥ್ ಸಿಗಲಿಲ್ಲ. ನಾಯಕ ಡೇವಿಡ್ ಮಿಲ್ಲರ್ ಕೇವಲ 7ರನ್ ಸಿಡಿಸಿ ಔಟಾದರು. ಆ್ಯಂಡಿಲ್ ಫೆಲುಕ್‌ವಾಯೋ 5 ರನ್ ಸಿಡಿಸಿ ಔಟಾದರು. ಏಕಾಂಗಿ ಹೋರಾಟ ನೀಡಿದ ಹೆನ್ರಿಚ್ 34 ರನ್ ಕಾಣಿಕೆ ನೀಡಿದರು. ಮಾರ್ಕೋ ಜಾನ್ಸೆನ್ 14 ರನ್ ಸಿಡಿಸಿದರು. ಅಂತಿಮವಾಗಿ ಸೌತ್ ಆಫ್ರಿಕಾ 27.1 ಓವರ್‌ಗಳಲ್ಲಿ 99ರನ್ ಸಿಡಿಸಿ ಆಲೌಟ್ ಆಯಿತು.

ಟೀಂ ಇಂಡಿಯಾ ಪರ ಕುಲ್ದೀಪ್ ಯಾದವ್ 4 ವಿಕೆಟ್ ಕಬಳಿಸಿದರು. ಇನ್ನು ವಾಶಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್ ಹಾಗೂ ಶಹಬಾಜ್ ಅಹಮ್ಮದ್ ತಲಾ 2 ವಿಕೆಟ್ ಕಬಳಿಸಿದರು.

andolana

Recent Posts

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

4 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

25 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

2 hours ago