ಕ್ರೀಡೆ

ಏಕದಿನ ಪಂದ್ಯ : 99 ರನ್‌ಗೆ ಸೌತ್ ಆಫ್ರಿಕಾವನ್ನು ಕ್ಲೀನ್‌ ಬೋಲ್ಡ್‌ ಮಾಡಿದ ಭಾರತ

ಹೊಸದಿಲ್ಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಏಕದಿನ ಸರಣಿ ಅಂತಿಮ ಘಟ್ಟ ತಲುಪಿದೆ. ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದ ಫಲಿತಾಂಶ ಸರಣಿ ಯಾರಿಗೆ ಅನ್ನೋದು ನಿರ್ಧರಿಸಲಿದೆ. ಈ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿದೆ. ಇದರ ಪರಿಣಾಮ ಸೌತ್ ಆಫ್ರಿಕಾ ಕೇವಲ 99 ರನ್‌ಗೆ ಆಲೌಟ್ ಆಗಿದೆ. ಅಂತಿಮ ಪಂದ್ಯದಲ್ಲಿ ಬೃಹತ್ ಮೊತ್ತ ಪೇರಿಸಿ ಟೀಂ ಇಂಡಿಯಾವನ್ನು ಕಟ್ಟಿಹಾಕುವ ಲೆಕ್ಕಾಚಾರದಲ್ಲಿದ್ದ ಸೌತ್ ಆಫ್ರಿಕಾಗೆ ಟೀಂ ಇಂಡಿಯಾ ಬೌಲರ್‌ಗಳು ಶಾಕ್ ನೀಡಿದ್ದಾರೆ. ಆರಂಭದಲ್ಲಿ ವಾಶಿಂಗ್ಟನ ಸುಂದರ್ ಹಾಗೂ ಮೊಹಮ್ಮದ್ ಸಿರಾಜ್ ದಾಳಿ ಆರಂಭಿಸಿದರೆ, ಬಳಿಕ ಕುಲ್ದೀಪ್ ಯಾದವ್ ಹಾಗೂ ಶಹಬಾಜ್ ಅಹಮ್ಮದ್ ದಾಳಿಗೆ ಸೌತ್ ಆಫ್ರಿಕಾ ಪರದಾಡಿತು. ಸೌತ್ ಆಫ್ರಿಕಾ ಏಕದಿನದಲ್ಲಿ ಸಿಡಿಸಿದ ನಾಲ್ಕನೇ ಅತೀ ಕಡಿಮೆ ಮೊತ್ತ ಅನ್ನೋ ಅಪಖ್ಯಾತಿಗೆ ಸೌತ್ ಆಫ್ರಿಕಾ ಗುರಿಯಾಗಿದೆ.

ಏಕದಿನದಲ್ಲಿ ಸೌತ್ ಆಫ್ರಿಕಾದ ಕಡಿಮೆ ಮೊತ್ತ
69 ರನ್ vs ಆಸ್ಟ್ರೇಲಿಯಾ,1993
83 ರನ್ vs ಇಂಗ್ಲೆಡ್, 2008
117 ರನ್ vs ಭಾರತ, 1999
83 ರನ್ vs ಇಂಗ್ಲೆಂಡ್, 2022
99 ರನ್ vs ಭಾರತ, 2022

ಟಾಸ್ ಸೋತು ಬ್ಯಾಟಿಂಗ್ ಇಳಿದ ಸೌತ್ ಆಫ್ರಿಕಾ 7ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ಕ್ವಿಂಟನ್ ಡಿಕಾಕ್ 6 ರನ್ ಸಿಡಿಸಿ ಔಟಾದರು. ಜ್ಯಾನ್‌ಮನ್ ಮಲನ್ 15 ರನ್ ಸಿಡಿಸಿ ನಿರ್ಗಮಿಸಿದರು. ರೀಜಾ ಹೆಂಡ್ರಿಕ್ಸ್ 3 ರನ್ ಸಿಡಿಸಿ ಔಟಾದರೆ, ಆ್ಯಡಿನ್ ಮರ್ಕ್ರಮ್ 9 ರನ್ ಗಳಿಸಿ ನಿರ್ಗಮಿಸಿದರು. ಆದರೆ ಹೆನ್ರಿಚ್ ಕಾಲ್ಸೆನ್ ಹೋರಾಟ ನೀಡಿದರು.

ಹೆನ್ರಿಚ್‌ಗೆ ಯಾರಿಂದಲೂ ಉತ್ತಮ ಸಾಥ್ ಸಿಗಲಿಲ್ಲ. ನಾಯಕ ಡೇವಿಡ್ ಮಿಲ್ಲರ್ ಕೇವಲ 7ರನ್ ಸಿಡಿಸಿ ಔಟಾದರು. ಆ್ಯಂಡಿಲ್ ಫೆಲುಕ್‌ವಾಯೋ 5 ರನ್ ಸಿಡಿಸಿ ಔಟಾದರು. ಏಕಾಂಗಿ ಹೋರಾಟ ನೀಡಿದ ಹೆನ್ರಿಚ್ 34 ರನ್ ಕಾಣಿಕೆ ನೀಡಿದರು. ಮಾರ್ಕೋ ಜಾನ್ಸೆನ್ 14 ರನ್ ಸಿಡಿಸಿದರು. ಅಂತಿಮವಾಗಿ ಸೌತ್ ಆಫ್ರಿಕಾ 27.1 ಓವರ್‌ಗಳಲ್ಲಿ 99ರನ್ ಸಿಡಿಸಿ ಆಲೌಟ್ ಆಯಿತು.

ಟೀಂ ಇಂಡಿಯಾ ಪರ ಕುಲ್ದೀಪ್ ಯಾದವ್ 4 ವಿಕೆಟ್ ಕಬಳಿಸಿದರು. ಇನ್ನು ವಾಶಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್ ಹಾಗೂ ಶಹಬಾಜ್ ಅಹಮ್ಮದ್ ತಲಾ 2 ವಿಕೆಟ್ ಕಬಳಿಸಿದರು.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

4 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

4 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

4 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

4 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

4 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago