ಕ್ರೀಡೆ

ಏಕದಿನ ಪಂದ್ಯ : 99 ರನ್‌ಗೆ ಸೌತ್ ಆಫ್ರಿಕಾವನ್ನು ಕ್ಲೀನ್‌ ಬೋಲ್ಡ್‌ ಮಾಡಿದ ಭಾರತ

ಹೊಸದಿಲ್ಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಏಕದಿನ ಸರಣಿ ಅಂತಿಮ ಘಟ್ಟ ತಲುಪಿದೆ. ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದ ಫಲಿತಾಂಶ ಸರಣಿ ಯಾರಿಗೆ ಅನ್ನೋದು ನಿರ್ಧರಿಸಲಿದೆ. ಈ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿದೆ. ಇದರ ಪರಿಣಾಮ ಸೌತ್ ಆಫ್ರಿಕಾ ಕೇವಲ 99 ರನ್‌ಗೆ ಆಲೌಟ್ ಆಗಿದೆ. ಅಂತಿಮ ಪಂದ್ಯದಲ್ಲಿ ಬೃಹತ್ ಮೊತ್ತ ಪೇರಿಸಿ ಟೀಂ ಇಂಡಿಯಾವನ್ನು ಕಟ್ಟಿಹಾಕುವ ಲೆಕ್ಕಾಚಾರದಲ್ಲಿದ್ದ ಸೌತ್ ಆಫ್ರಿಕಾಗೆ ಟೀಂ ಇಂಡಿಯಾ ಬೌಲರ್‌ಗಳು ಶಾಕ್ ನೀಡಿದ್ದಾರೆ. ಆರಂಭದಲ್ಲಿ ವಾಶಿಂಗ್ಟನ ಸುಂದರ್ ಹಾಗೂ ಮೊಹಮ್ಮದ್ ಸಿರಾಜ್ ದಾಳಿ ಆರಂಭಿಸಿದರೆ, ಬಳಿಕ ಕುಲ್ದೀಪ್ ಯಾದವ್ ಹಾಗೂ ಶಹಬಾಜ್ ಅಹಮ್ಮದ್ ದಾಳಿಗೆ ಸೌತ್ ಆಫ್ರಿಕಾ ಪರದಾಡಿತು. ಸೌತ್ ಆಫ್ರಿಕಾ ಏಕದಿನದಲ್ಲಿ ಸಿಡಿಸಿದ ನಾಲ್ಕನೇ ಅತೀ ಕಡಿಮೆ ಮೊತ್ತ ಅನ್ನೋ ಅಪಖ್ಯಾತಿಗೆ ಸೌತ್ ಆಫ್ರಿಕಾ ಗುರಿಯಾಗಿದೆ.

ಏಕದಿನದಲ್ಲಿ ಸೌತ್ ಆಫ್ರಿಕಾದ ಕಡಿಮೆ ಮೊತ್ತ
69 ರನ್ vs ಆಸ್ಟ್ರೇಲಿಯಾ,1993
83 ರನ್ vs ಇಂಗ್ಲೆಡ್, 2008
117 ರನ್ vs ಭಾರತ, 1999
83 ರನ್ vs ಇಂಗ್ಲೆಂಡ್, 2022
99 ರನ್ vs ಭಾರತ, 2022

ಟಾಸ್ ಸೋತು ಬ್ಯಾಟಿಂಗ್ ಇಳಿದ ಸೌತ್ ಆಫ್ರಿಕಾ 7ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ಕ್ವಿಂಟನ್ ಡಿಕಾಕ್ 6 ರನ್ ಸಿಡಿಸಿ ಔಟಾದರು. ಜ್ಯಾನ್‌ಮನ್ ಮಲನ್ 15 ರನ್ ಸಿಡಿಸಿ ನಿರ್ಗಮಿಸಿದರು. ರೀಜಾ ಹೆಂಡ್ರಿಕ್ಸ್ 3 ರನ್ ಸಿಡಿಸಿ ಔಟಾದರೆ, ಆ್ಯಡಿನ್ ಮರ್ಕ್ರಮ್ 9 ರನ್ ಗಳಿಸಿ ನಿರ್ಗಮಿಸಿದರು. ಆದರೆ ಹೆನ್ರಿಚ್ ಕಾಲ್ಸೆನ್ ಹೋರಾಟ ನೀಡಿದರು.

ಹೆನ್ರಿಚ್‌ಗೆ ಯಾರಿಂದಲೂ ಉತ್ತಮ ಸಾಥ್ ಸಿಗಲಿಲ್ಲ. ನಾಯಕ ಡೇವಿಡ್ ಮಿಲ್ಲರ್ ಕೇವಲ 7ರನ್ ಸಿಡಿಸಿ ಔಟಾದರು. ಆ್ಯಂಡಿಲ್ ಫೆಲುಕ್‌ವಾಯೋ 5 ರನ್ ಸಿಡಿಸಿ ಔಟಾದರು. ಏಕಾಂಗಿ ಹೋರಾಟ ನೀಡಿದ ಹೆನ್ರಿಚ್ 34 ರನ್ ಕಾಣಿಕೆ ನೀಡಿದರು. ಮಾರ್ಕೋ ಜಾನ್ಸೆನ್ 14 ರನ್ ಸಿಡಿಸಿದರು. ಅಂತಿಮವಾಗಿ ಸೌತ್ ಆಫ್ರಿಕಾ 27.1 ಓವರ್‌ಗಳಲ್ಲಿ 99ರನ್ ಸಿಡಿಸಿ ಆಲೌಟ್ ಆಯಿತು.

ಟೀಂ ಇಂಡಿಯಾ ಪರ ಕುಲ್ದೀಪ್ ಯಾದವ್ 4 ವಿಕೆಟ್ ಕಬಳಿಸಿದರು. ಇನ್ನು ವಾಶಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್ ಹಾಗೂ ಶಹಬಾಜ್ ಅಹಮ್ಮದ್ ತಲಾ 2 ವಿಕೆಟ್ ಕಬಳಿಸಿದರು.

andolana

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

1 hour ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

2 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

3 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

9 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

16 hours ago