ಕ್ರೀಡೆ

ಏಕದಿನ ಪಂದ್ಯ : 99 ರನ್‌ಗೆ ಸೌತ್ ಆಫ್ರಿಕಾವನ್ನು ಕ್ಲೀನ್‌ ಬೋಲ್ಡ್‌ ಮಾಡಿದ ಭಾರತ

ಹೊಸದಿಲ್ಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಏಕದಿನ ಸರಣಿ ಅಂತಿಮ ಘಟ್ಟ ತಲುಪಿದೆ. ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದ ಫಲಿತಾಂಶ ಸರಣಿ ಯಾರಿಗೆ ಅನ್ನೋದು ನಿರ್ಧರಿಸಲಿದೆ. ಈ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿದೆ. ಇದರ ಪರಿಣಾಮ ಸೌತ್ ಆಫ್ರಿಕಾ ಕೇವಲ 99 ರನ್‌ಗೆ ಆಲೌಟ್ ಆಗಿದೆ. ಅಂತಿಮ ಪಂದ್ಯದಲ್ಲಿ ಬೃಹತ್ ಮೊತ್ತ ಪೇರಿಸಿ ಟೀಂ ಇಂಡಿಯಾವನ್ನು ಕಟ್ಟಿಹಾಕುವ ಲೆಕ್ಕಾಚಾರದಲ್ಲಿದ್ದ ಸೌತ್ ಆಫ್ರಿಕಾಗೆ ಟೀಂ ಇಂಡಿಯಾ ಬೌಲರ್‌ಗಳು ಶಾಕ್ ನೀಡಿದ್ದಾರೆ. ಆರಂಭದಲ್ಲಿ ವಾಶಿಂಗ್ಟನ ಸುಂದರ್ ಹಾಗೂ ಮೊಹಮ್ಮದ್ ಸಿರಾಜ್ ದಾಳಿ ಆರಂಭಿಸಿದರೆ, ಬಳಿಕ ಕುಲ್ದೀಪ್ ಯಾದವ್ ಹಾಗೂ ಶಹಬಾಜ್ ಅಹಮ್ಮದ್ ದಾಳಿಗೆ ಸೌತ್ ಆಫ್ರಿಕಾ ಪರದಾಡಿತು. ಸೌತ್ ಆಫ್ರಿಕಾ ಏಕದಿನದಲ್ಲಿ ಸಿಡಿಸಿದ ನಾಲ್ಕನೇ ಅತೀ ಕಡಿಮೆ ಮೊತ್ತ ಅನ್ನೋ ಅಪಖ್ಯಾತಿಗೆ ಸೌತ್ ಆಫ್ರಿಕಾ ಗುರಿಯಾಗಿದೆ.

ಏಕದಿನದಲ್ಲಿ ಸೌತ್ ಆಫ್ರಿಕಾದ ಕಡಿಮೆ ಮೊತ್ತ
69 ರನ್ vs ಆಸ್ಟ್ರೇಲಿಯಾ,1993
83 ರನ್ vs ಇಂಗ್ಲೆಡ್, 2008
117 ರನ್ vs ಭಾರತ, 1999
83 ರನ್ vs ಇಂಗ್ಲೆಂಡ್, 2022
99 ರನ್ vs ಭಾರತ, 2022

ಟಾಸ್ ಸೋತು ಬ್ಯಾಟಿಂಗ್ ಇಳಿದ ಸೌತ್ ಆಫ್ರಿಕಾ 7ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ಕ್ವಿಂಟನ್ ಡಿಕಾಕ್ 6 ರನ್ ಸಿಡಿಸಿ ಔಟಾದರು. ಜ್ಯಾನ್‌ಮನ್ ಮಲನ್ 15 ರನ್ ಸಿಡಿಸಿ ನಿರ್ಗಮಿಸಿದರು. ರೀಜಾ ಹೆಂಡ್ರಿಕ್ಸ್ 3 ರನ್ ಸಿಡಿಸಿ ಔಟಾದರೆ, ಆ್ಯಡಿನ್ ಮರ್ಕ್ರಮ್ 9 ರನ್ ಗಳಿಸಿ ನಿರ್ಗಮಿಸಿದರು. ಆದರೆ ಹೆನ್ರಿಚ್ ಕಾಲ್ಸೆನ್ ಹೋರಾಟ ನೀಡಿದರು.

ಹೆನ್ರಿಚ್‌ಗೆ ಯಾರಿಂದಲೂ ಉತ್ತಮ ಸಾಥ್ ಸಿಗಲಿಲ್ಲ. ನಾಯಕ ಡೇವಿಡ್ ಮಿಲ್ಲರ್ ಕೇವಲ 7ರನ್ ಸಿಡಿಸಿ ಔಟಾದರು. ಆ್ಯಂಡಿಲ್ ಫೆಲುಕ್‌ವಾಯೋ 5 ರನ್ ಸಿಡಿಸಿ ಔಟಾದರು. ಏಕಾಂಗಿ ಹೋರಾಟ ನೀಡಿದ ಹೆನ್ರಿಚ್ 34 ರನ್ ಕಾಣಿಕೆ ನೀಡಿದರು. ಮಾರ್ಕೋ ಜಾನ್ಸೆನ್ 14 ರನ್ ಸಿಡಿಸಿದರು. ಅಂತಿಮವಾಗಿ ಸೌತ್ ಆಫ್ರಿಕಾ 27.1 ಓವರ್‌ಗಳಲ್ಲಿ 99ರನ್ ಸಿಡಿಸಿ ಆಲೌಟ್ ಆಯಿತು.

ಟೀಂ ಇಂಡಿಯಾ ಪರ ಕುಲ್ದೀಪ್ ಯಾದವ್ 4 ವಿಕೆಟ್ ಕಬಳಿಸಿದರು. ಇನ್ನು ವಾಶಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್ ಹಾಗೂ ಶಹಬಾಜ್ ಅಹಮ್ಮದ್ ತಲಾ 2 ವಿಕೆಟ್ ಕಬಳಿಸಿದರು.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago