ಕ್ರೀಡೆ

ಏಕದಿನ ವಿಶ್ವಕಪ್ 2023: ಇಂಗ್ಲೆಂಡ್ ಮಣಿಸಿ ಶುಭಾರಂಭ ಮಾಡಿದ ನ್ಯೂಜಿಲ್ಯಾಂಡ್!

ಅಹಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ 2023ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ನ್ಯೂಜಿಲೆಂಡ್ ಮಣಿಸಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.

ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದೆ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಸ್ಪರ್ಧಾತ್ಮಕ ರನ್ ಪೇರಿಸಿತು. ಇಂಗ್ಲೆಂಡ್ ನಿಗಿದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 282 ಪೇರಿಸಿದೆ.

ಇಂಗ್ಲೆಂಡ್ ಪರ ಜಾನಿ ಬೈರ್ಸ್ಟೋವ್ 33, ಜೋ ರೂಟ್ 77, ಹಾರಿ ಬ್ರೋಕ್ 25, ಜೋಸ್ ಬಟ್ಲರ್ 43 ರನ್ ಪೇರಿಸಿದ್ದಾರೆ. ನ್ಯೂಜಿಲ್ಯಾಂಡ್ ಪರ ಬೌಲಿಂಗ್ ನಲ್ಲಿ ಮಾಟ್ ಹೆನ್ರಿ 3, ಮಿಚೆಲ್ ಸ್ಯಾಂಟ್ನರ್ ಮತ್ತು ಗ್ಲೇನ್ ಫಿಲಿಪ್ಸ್ ತಲಾ 2 ವಿಕೆಟ್ ಪಡೆದಿದ್ದಾರೆ.

ಇಂಗ್ಲೆಂಡ್ ನೀಡಿದ 283 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 36.2 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 283 ರನ್ ಪೇರಿಸಿ ಭರ್ಜರಿ ಗೆಲುವು ಸಾಧಿಸಿತು. ನ್ಯೂಜಿಲ್ಯಾಂಡ್ ಪರ ಆರಂಭಿಕ ಆಟಗಾರ ಡೆವೊನ್ ಕಾನ್ವೇ ಹಾಗೂ ರಚಿನ್ ರವೀಂದ್ರ ಸ್ಫೋಟಕ ಶತಕ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಡೆವೋನ್ ಕಾನ್ವೇ 121 ಎಸೆತಗಳಲ್ಲಿ 3 ಸಿಕ್ಸರ್ 19 ಬೌಂಡರಿ ಸೇರಿದಂತೆ ಅಜೇಯ 152 ರನ್ ಪೇರಿಸಿದ್ದರೆ ರಚಿನ್ ರವೀಂದ್ರ 96 ಎಸೆತಗಳಲ್ಲಿ 5 ಸಿಕ್ಸರ್ 11 ಬೌಂಡರಿ ಸೇರಿದಂತೆ ಅಜೇಯ 123 ರನ್ ಪೇರಿಸಿದ್ದಾರೆ.

andolanait

Recent Posts

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

32 mins ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

1 hour ago

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

2 hours ago

ತಮಿಳುನಾಡು ನೂತನ ಸಿಎಂ ವಿಜಯ್‌ ಮುಂದಿವೆ ಬೆಟ್ಟದಂತಹ ಸವಾಲುಗಳು! ಮೆಟ್ಟಿ ನಿಲ್ಲುತ್ತಾರಾ ದಳಪತಿ?

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…

2 hours ago

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago