ಅಹಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ 2023ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ನ್ಯೂಜಿಲೆಂಡ್ ಮಣಿಸಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.
ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದೆ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಸ್ಪರ್ಧಾತ್ಮಕ ರನ್ ಪೇರಿಸಿತು. ಇಂಗ್ಲೆಂಡ್ ನಿಗಿದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 282 ಪೇರಿಸಿದೆ.
ಇಂಗ್ಲೆಂಡ್ ಪರ ಜಾನಿ ಬೈರ್ಸ್ಟೋವ್ 33, ಜೋ ರೂಟ್ 77, ಹಾರಿ ಬ್ರೋಕ್ 25, ಜೋಸ್ ಬಟ್ಲರ್ 43 ರನ್ ಪೇರಿಸಿದ್ದಾರೆ. ನ್ಯೂಜಿಲ್ಯಾಂಡ್ ಪರ ಬೌಲಿಂಗ್ ನಲ್ಲಿ ಮಾಟ್ ಹೆನ್ರಿ 3, ಮಿಚೆಲ್ ಸ್ಯಾಂಟ್ನರ್ ಮತ್ತು ಗ್ಲೇನ್ ಫಿಲಿಪ್ಸ್ ತಲಾ 2 ವಿಕೆಟ್ ಪಡೆದಿದ್ದಾರೆ.
ಇಂಗ್ಲೆಂಡ್ ನೀಡಿದ 283 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 36.2 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 283 ರನ್ ಪೇರಿಸಿ ಭರ್ಜರಿ ಗೆಲುವು ಸಾಧಿಸಿತು. ನ್ಯೂಜಿಲ್ಯಾಂಡ್ ಪರ ಆರಂಭಿಕ ಆಟಗಾರ ಡೆವೊನ್ ಕಾನ್ವೇ ಹಾಗೂ ರಚಿನ್ ರವೀಂದ್ರ ಸ್ಫೋಟಕ ಶತಕ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಡೆವೋನ್ ಕಾನ್ವೇ 121 ಎಸೆತಗಳಲ್ಲಿ 3 ಸಿಕ್ಸರ್ 19 ಬೌಂಡರಿ ಸೇರಿದಂತೆ ಅಜೇಯ 152 ರನ್ ಪೇರಿಸಿದ್ದರೆ ರಚಿನ್ ರವೀಂದ್ರ 96 ಎಸೆತಗಳಲ್ಲಿ 5 ಸಿಕ್ಸರ್ 11 ಬೌಂಡರಿ ಸೇರಿದಂತೆ ಅಜೇಯ 123 ರನ್ ಪೇರಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…