ಅಹಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ 2023ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ನ್ಯೂಜಿಲೆಂಡ್ ಮಣಿಸಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.
ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದೆ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಸ್ಪರ್ಧಾತ್ಮಕ ರನ್ ಪೇರಿಸಿತು. ಇಂಗ್ಲೆಂಡ್ ನಿಗಿದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 282 ಪೇರಿಸಿದೆ.
ಇಂಗ್ಲೆಂಡ್ ಪರ ಜಾನಿ ಬೈರ್ಸ್ಟೋವ್ 33, ಜೋ ರೂಟ್ 77, ಹಾರಿ ಬ್ರೋಕ್ 25, ಜೋಸ್ ಬಟ್ಲರ್ 43 ರನ್ ಪೇರಿಸಿದ್ದಾರೆ. ನ್ಯೂಜಿಲ್ಯಾಂಡ್ ಪರ ಬೌಲಿಂಗ್ ನಲ್ಲಿ ಮಾಟ್ ಹೆನ್ರಿ 3, ಮಿಚೆಲ್ ಸ್ಯಾಂಟ್ನರ್ ಮತ್ತು ಗ್ಲೇನ್ ಫಿಲಿಪ್ಸ್ ತಲಾ 2 ವಿಕೆಟ್ ಪಡೆದಿದ್ದಾರೆ.
ಇಂಗ್ಲೆಂಡ್ ನೀಡಿದ 283 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 36.2 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 283 ರನ್ ಪೇರಿಸಿ ಭರ್ಜರಿ ಗೆಲುವು ಸಾಧಿಸಿತು. ನ್ಯೂಜಿಲ್ಯಾಂಡ್ ಪರ ಆರಂಭಿಕ ಆಟಗಾರ ಡೆವೊನ್ ಕಾನ್ವೇ ಹಾಗೂ ರಚಿನ್ ರವೀಂದ್ರ ಸ್ಫೋಟಕ ಶತಕ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಡೆವೋನ್ ಕಾನ್ವೇ 121 ಎಸೆತಗಳಲ್ಲಿ 3 ಸಿಕ್ಸರ್ 19 ಬೌಂಡರಿ ಸೇರಿದಂತೆ ಅಜೇಯ 152 ರನ್ ಪೇರಿಸಿದ್ದರೆ ರಚಿನ್ ರವೀಂದ್ರ 96 ಎಸೆತಗಳಲ್ಲಿ 5 ಸಿಕ್ಸರ್ 11 ಬೌಂಡರಿ ಸೇರಿದಂತೆ ಅಜೇಯ 123 ರನ್ ಪೇರಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…