ಪುಣೆ : ಮಿಚೆಲ್ ಮಾರ್ಷ್ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಆಸ್ಟ್ರೇಲಿಯಾ ತಂಡವು ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ ದಾಖಲಿಸಿತು.
ಇಲ್ಲಿನ ಎಂಸಿಎ (ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್) ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ನ 43ನೇ ಪಂದ್ಯದಲ್ಲಿ ಬಾಂಗ್ಲಾ ನೀಡಿದ 307ರನ್ಗಳ ಬೃಹತ್ ಮೊತ್ತ ಬೆನ್ನಟ್ಟಿದ ಆಸೀಸ್ 44.2 ಓವರ್ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಈ ಸಾಧನೆ ಮಾಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶಕ್ಕೆ ಮಂದಗತಿಯ ಆರಂಭ ದೊರೆಯಿತು. ಮದ್ಯಮ ಕ್ರಮಾಂಕ ಬ್ಯಾಟರ್ ತೌಹಿದ್ ಹೃದಾಯ್ (74) ಸಿಡಿಸಿದ ಅರ್ಧ ಶತಕ ತಂಡಕ್ಕೆ ಚೇತರಿಕೆ ನೀಡಿತು. ಉಳಿದಂತೆ ತಂಝೀದ್ ಹಸನ್ (36) ಹಾಗೂ ಲಿಟನ್ ದಾಸ್ (36), ನಜ್ಮುಲ್ ಹುಸೈನ್ ಶಾಂಟೊ (45) ಹಾಗೂ ಮಹ್ಮದುಲ್ಲಾ (32) ಅವರ ಸಮಯೋಚಿತ ಆಟದ ನೆರವಿನಿಂದ ಆಸ್ಟ್ರೇಲಿಯಾ ತಂಡದೆದುರು 8 ವಿಕೆಟ್ ಕಳೆದುಕೊಂಡು 306 ರನ್ಗಳ ಸವಾಲಿನ ಮೊತ್ತವನ್ನು ಪೇರಿಸಿತು.
ಆರಂಭದಿಂದಲೂ ನಿರೀಕ್ಷಿತ ಆಟ ಮೂಡಿ ಬರದಿದ್ದರು ಸಂಘಟಿತ ಬ್ಯಾಟಿಂಗ್ ಮೂಲಕ ಬಲಿಷ್ಠ ಆಸ್ಟ್ರೇಲಿಯಾಕ್ಕೆ 307 ರನ್ಗಳ ಗುರಿ ನೀಡಿತು. ಆಸ್ಟ್ರೇಲಿಯಾ ಪರ ಸೀನ್ ಆಬಾಟ್ ಮತ್ತು ಆಡಂ ಜಂಪಾ ತಲಾ 2 ವಿಕೆಟ್ ಪಡೆದರು.
ಬಾಂಗ್ಲಾ ನೀಡಿದ ಗುರಿ ಬೆನ್ನಟ್ಟಿದ ಆಸೀಸ್ಗೆ ಆರಂಭಿಕ ಆಘಾತ ಎದುರಾಯಿತು. ಟ್ರಾವಿಸ್ ಹೆಡ್ ಕೇವಲ 10 ರನ್ಗಳಿಸಿ ಔಟಾದರು. ತಮ್ಮ ಫಾರ್ಮ್ ಮುಂದುವರೆಸಿರುವ ವಾರ್ನರ್ (53) ಅರ್ಧ ಶತಕ ಸಿಡಿಸಿ ನಿರ್ಗಮಿಸಿದರು. ನಂತರ ಜೋಡಿಯಾದ ಮಿಚೆಲ್ ಮಾರ್ಷ್ ಹಾಗೂ ಸ್ಟೀವನ್ ಸ್ಮಿತ್ ತಂಡವನ್ನು ಗೆಲುವಿನ ದಡ ಸೇರಿಸಿದರು.
ಮಾರ್ಷ್ 132 ಎಸೆತಗಳಲ್ಲಿ 19 ಬೌಂಡಿರಿ ಹಾಗೂ 9 ಸಿಕ್ಸರ್ ನೆರವಿನಿಂದ ಬರೋಬ್ಬರಿ 177ರನ್ ಚಚ್ಚಿದರೇ, ಇವರಿಗೆ ಸಾಥ್ ನೀಡಿದ ಸ್ಮಿತ್ 64 ಎಸೆತಗಳಲ್ಲಿ 4 ಬೌಂಡರಿ ಮತ್ತು ಒಂದು ಸಿಕ್ಸರ್ ಸಹಿತ 63 ರನ್ಗಳಿಸಿ ಔಟಾಗದೇ ಉಳಿದರು.
ಪಂದ್ಯ ಶ್ರೇಷ್ಠ : ಮಿಚೆಲ್ ಮಾರ್ಷ್
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…