ಕ್ರೀಡೆ

ಏಕದಿನ ವಿಶ್ವಕಪ್‌: ಬಾಂಗ್ಲಾ ವಿರುದ್ಧ ಭರ್ಜರಿ ಜಯ ದಾಖಲಿಸಿದ ಆಸೀಸ್‌

ಪುಣೆ : ಮಿಚೆಲ್‌ ಮಾರ್ಷ್‌ ಅಮೋಘ ಬ್ಯಾಟಿಂಗ್‌ ಪ್ರದರ್ಶನದಿಂದಾಗಿ ಆಸ್ಟ್ರೇಲಿಯಾ ತಂಡವು ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ ದಾಖಲಿಸಿತು.

ಇಲ್ಲಿನ ಎಂಸಿಎ (ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌) ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್‌ನ 43ನೇ ಪಂದ್ಯದಲ್ಲಿ ಬಾಂಗ್ಲಾ ನೀಡಿದ 307ರನ್‌ಗಳ ಬೃಹತ್‌ ಮೊತ್ತ ಬೆನ್ನಟ್ಟಿದ ಆಸೀಸ್‌ 44.2 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ಕಳೆದುಕೊಂಡು ಈ ಸಾಧನೆ ಮಾಡಿತು.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶಕ್ಕೆ ಮಂದಗತಿಯ ಆರಂಭ ದೊರೆಯಿತು. ಮದ್ಯಮ ಕ್ರಮಾಂಕ ಬ್ಯಾಟರ್‌ ತೌಹಿದ್ ಹೃದಾಯ್ (74) ಸಿಡಿಸಿದ ಅರ್ಧ ಶತಕ ತಂಡಕ್ಕೆ ಚೇತರಿಕೆ ನೀಡಿತು. ಉಳಿದಂತೆ ತಂಝೀದ್ ಹಸನ್ (36) ಹಾಗೂ ಲಿಟನ್ ದಾಸ್ (36), ನಜ್ಮುಲ್ ಹುಸೈನ್ ಶಾಂಟೊ (45) ಹಾಗೂ ಮಹ್ಮದುಲ್ಲಾ (32) ಅವರ ಸಮಯೋಚಿತ ಆಟದ ನೆರವಿನಿಂದ ಆಸ್ಟ್ರೇಲಿಯಾ ತಂಡದೆದುರು 8 ವಿಕೆಟ್‌ ಕಳೆದುಕೊಂಡು 306 ರನ್‌ಗಳ ಸವಾಲಿನ ಮೊತ್ತವನ್ನು ಪೇರಿಸಿತು.

ಆರಂಭದಿಂದಲೂ ನಿರೀಕ್ಷಿತ ಆಟ ಮೂಡಿ ಬರದಿದ್ದರು ಸಂಘಟಿತ ಬ್ಯಾಟಿಂಗ್‌ ಮೂಲಕ ಬಲಿಷ್ಠ ಆಸ್ಟ್ರೇಲಿಯಾಕ್ಕೆ 307 ರನ್‌ಗಳ ಗುರಿ ನೀಡಿತು. ಆಸ್ಟ್ರೇಲಿಯಾ ಪರ ಸೀನ್‌ ಆಬಾಟ್‌ ಮತ್ತು ಆಡಂ ಜಂಪಾ ತಲಾ 2 ವಿಕೆಟ್‌ ಪಡೆದರು.

ಬಾಂಗ್ಲಾ ನೀಡಿದ ಗುರಿ ಬೆನ್ನಟ್ಟಿದ ಆಸೀಸ್‌ಗೆ ಆರಂಭಿಕ ಆಘಾತ ಎದುರಾಯಿತು. ಟ್ರಾವಿಸ್‌ ಹೆಡ್‌ ಕೇವಲ 10 ರನ್‌ಗಳಿಸಿ ಔಟಾದರು. ತಮ್ಮ ಫಾರ್ಮ್‌ ಮುಂದುವರೆಸಿರುವ ವಾರ್ನರ್‌ (53) ಅರ್ಧ ಶತಕ ಸಿಡಿಸಿ ನಿರ್ಗಮಿಸಿದರು. ನಂತರ ಜೋಡಿಯಾದ ಮಿಚೆಲ್‌ ಮಾರ್ಷ್‌ ಹಾಗೂ ಸ್ಟೀವನ್‌ ಸ್ಮಿತ್‌ ತಂಡವನ್ನು ಗೆಲುವಿನ ದಡ ಸೇರಿಸಿದರು.

ಮಾರ್ಷ್‌ 132 ಎಸೆತಗಳಲ್ಲಿ 19 ಬೌಂಡಿರಿ ಹಾಗೂ 9 ಸಿಕ್ಸರ್‌ ನೆರವಿನಿಂದ ಬರೋಬ್ಬರಿ 177ರನ್‌ ಚಚ್ಚಿದರೇ, ಇವರಿಗೆ ಸಾಥ್‌ ನೀಡಿದ ಸ್ಮಿತ್‌ 64 ಎಸೆತಗಳಲ್ಲಿ 4 ಬೌಂಡರಿ ಮತ್ತು ಒಂದು ಸಿಕ್ಸರ್‌ ಸಹಿತ 63 ರನ್‌ಗಳಿಸಿ ಔಟಾಗದೇ ಉಳಿದರು.

ಪಂದ್ಯ ಶ್ರೇಷ್ಠ : ಮಿಚೆಲ್‌ ಮಾರ್ಷ್‌

andolanait

Recent Posts

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

40 mins ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

50 mins ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

2 hours ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

2 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

2 hours ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

2 hours ago