ಕ್ರೀಡೆ

ಏಕದಿನ ವಿಶ್ವಕಪ್​: ವೇಳಾಪಟ್ಟಿ ಪ್ರಕಟಿಸಲು ಮುಹೂರ್ತ ಫಿಕ್ಸ್​ ಮಾಡಿದ ಬಿಸಿಸಿಐ ಮತ್ತು ಐಸಿಸಿ

ನವದೆಹಲಿ: ಹಿಂದೆಲ್ಲ ಏಕದಿನ ವಿಶ್ವಕಪ್​ ಟೂರ್ನಿಗಳ ವೇಳಾಪಟ್ಟಿ ವರ್ಷಕ್ಕೆ ಮೊದಲೇ ಪ್ರಕಟಗೊಳ್ಳುತ್ತಿತ್ತು. ಈ ಬಾರಿ ಈಗಾಗಲೆ ಸಾಕಷ್ಟು ತಡವಾಗುತ್ತ ಬಂದಿರುವ ವಿಶ್ವಕಪ್​ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮತ್ತು ಐಸಿಸಿ ಕೊನೆಗೂ ಜಂಟಿಯಾಗಿ ಮುಹೂರ್ತ ನಿಗದಿಪಡಿಸಿದೆ. ಟೂರ್ನಿಗೆ ಭರ್ತಿ 100 ದಿನಗಳು ಬಾಕಿ ಇರುವಾಗ ಅಂದರೆ ಜೂನ್​ 27ರಂದು ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಮತ್ತು ಐಸಿಸಿ ಶನಿವಾರ ಪ್ರಕಟಿಸಿದೆ.

ಹಲವಾರು ಕಾರಣಗಳಿಂದಾಗಿ ಮುಂದೂಡಲ್ಪಡುತ್ತ ಬಂದ ಏಕದಿನ ವಿಶ್ವಕಪ್​ ವೇಳಾಪಟ್ಟಿಗೆ ಇತ್ತೀಚೆಗೆ ಪಾಕಿಸ್ತಾನದ ತಗಾದೆಯಿಂದಾಗಿ ತೊಂದರೆಯಾಗಿತ್ತು. ಇದೀಗ ಎಲ್ಲ ವಿಘ್ನಗಳು ನಿವಾರಣೆಯಾಗಿದ್ದು, ಜೂನ್​ 27ರಂದು ಮುಂಬೈನಲ್ಲಿ ನಡೆಯಲಿರುವ ವಿಶೇಷ ಸಮಾರಂಭವೊಂದರಲ್ಲಿ 13ನೇ ಆವೃತ್ತಿಯ ಏಕದಿನ ವಿಶ್ವಕಪ್​ ವೇಳಾಪಟ್ಟಿಯನ್ನು ಬೆಳಗ್ಗೆ 11.30ಕ್ಕೆ ಬಿಡುಗಡೆ ಮಾಡಲು ಬಿಸಿಸಿಐ ಮತ್ತು ಐಸಿಸಿ ಸಿದ್ಧತೆ ನಡೆಸಿದೆ.

ಸಂಭಾವ್ಯ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್​ 5ರಂದು ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಮತ್ತು ಹಾಲಿ ರನ್ನರ್​ಅಪ್​ ನ್ಯೂಜಿಲೆಂಡ್​ ತಂಡಗಳ ನಡುವಿನ ಮುಖಾಮುಖಿಯೊಂದಿಗೆ ಅಹಮದಾಬಾದ್​ನಲ್ಲಿ ಟೂರ್ನಿಗೆ ಚಾಲನೆ ಸಿಗಲಿದೆ. ನವೆಂಬರ್​ 19ರಂದು ಫೈನಲ್​ ಪಂದ್ಯ ಕೂಡ ಇಲ್ಲೇ ನಡೆಯಲಿದೆ. ಭಾರತ ತಂಡ ಅಕ್ಟೋಬರ್​ 8ರಂದು ಚೆನ್ನೈನಲ್ಲಿ ಆಸ್ಟ್ರೆಲಿಯಾ ವಿರುದ್ಧ ಅಭಿಯಾನ ಆರಂಭಿಸಲಿದ್ದರೆ, ಅಕ್ಟೋಬರ್​ 15ರಂದು ಪಾಕಿಸ್ತಾನ ವಿರುದ್ಧ ಅಹಮದಾಬಾದ್​ನಲ್ಲಿ ಹೈ-ವೋಲ್ಟೇಜ್​ ಪಂದ್ಯವನ್ನು ಆಡಲಿದೆ.

andolanait

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

2 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

2 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

3 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

3 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

3 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

3 hours ago