ಕ್ರೀಡೆ

ಏಕದಿನ ವಿಶ್ವಕಪ್​: ವೇಳಾಪಟ್ಟಿ ಪ್ರಕಟಿಸಲು ಮುಹೂರ್ತ ಫಿಕ್ಸ್​ ಮಾಡಿದ ಬಿಸಿಸಿಐ ಮತ್ತು ಐಸಿಸಿ

ನವದೆಹಲಿ: ಹಿಂದೆಲ್ಲ ಏಕದಿನ ವಿಶ್ವಕಪ್​ ಟೂರ್ನಿಗಳ ವೇಳಾಪಟ್ಟಿ ವರ್ಷಕ್ಕೆ ಮೊದಲೇ ಪ್ರಕಟಗೊಳ್ಳುತ್ತಿತ್ತು. ಈ ಬಾರಿ ಈಗಾಗಲೆ ಸಾಕಷ್ಟು ತಡವಾಗುತ್ತ ಬಂದಿರುವ ವಿಶ್ವಕಪ್​ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮತ್ತು ಐಸಿಸಿ ಕೊನೆಗೂ ಜಂಟಿಯಾಗಿ ಮುಹೂರ್ತ ನಿಗದಿಪಡಿಸಿದೆ. ಟೂರ್ನಿಗೆ ಭರ್ತಿ 100 ದಿನಗಳು ಬಾಕಿ ಇರುವಾಗ ಅಂದರೆ ಜೂನ್​ 27ರಂದು ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಮತ್ತು ಐಸಿಸಿ ಶನಿವಾರ ಪ್ರಕಟಿಸಿದೆ.

ಹಲವಾರು ಕಾರಣಗಳಿಂದಾಗಿ ಮುಂದೂಡಲ್ಪಡುತ್ತ ಬಂದ ಏಕದಿನ ವಿಶ್ವಕಪ್​ ವೇಳಾಪಟ್ಟಿಗೆ ಇತ್ತೀಚೆಗೆ ಪಾಕಿಸ್ತಾನದ ತಗಾದೆಯಿಂದಾಗಿ ತೊಂದರೆಯಾಗಿತ್ತು. ಇದೀಗ ಎಲ್ಲ ವಿಘ್ನಗಳು ನಿವಾರಣೆಯಾಗಿದ್ದು, ಜೂನ್​ 27ರಂದು ಮುಂಬೈನಲ್ಲಿ ನಡೆಯಲಿರುವ ವಿಶೇಷ ಸಮಾರಂಭವೊಂದರಲ್ಲಿ 13ನೇ ಆವೃತ್ತಿಯ ಏಕದಿನ ವಿಶ್ವಕಪ್​ ವೇಳಾಪಟ್ಟಿಯನ್ನು ಬೆಳಗ್ಗೆ 11.30ಕ್ಕೆ ಬಿಡುಗಡೆ ಮಾಡಲು ಬಿಸಿಸಿಐ ಮತ್ತು ಐಸಿಸಿ ಸಿದ್ಧತೆ ನಡೆಸಿದೆ.

ಸಂಭಾವ್ಯ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್​ 5ರಂದು ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಮತ್ತು ಹಾಲಿ ರನ್ನರ್​ಅಪ್​ ನ್ಯೂಜಿಲೆಂಡ್​ ತಂಡಗಳ ನಡುವಿನ ಮುಖಾಮುಖಿಯೊಂದಿಗೆ ಅಹಮದಾಬಾದ್​ನಲ್ಲಿ ಟೂರ್ನಿಗೆ ಚಾಲನೆ ಸಿಗಲಿದೆ. ನವೆಂಬರ್​ 19ರಂದು ಫೈನಲ್​ ಪಂದ್ಯ ಕೂಡ ಇಲ್ಲೇ ನಡೆಯಲಿದೆ. ಭಾರತ ತಂಡ ಅಕ್ಟೋಬರ್​ 8ರಂದು ಚೆನ್ನೈನಲ್ಲಿ ಆಸ್ಟ್ರೆಲಿಯಾ ವಿರುದ್ಧ ಅಭಿಯಾನ ಆರಂಭಿಸಲಿದ್ದರೆ, ಅಕ್ಟೋಬರ್​ 15ರಂದು ಪಾಕಿಸ್ತಾನ ವಿರುದ್ಧ ಅಹಮದಾಬಾದ್​ನಲ್ಲಿ ಹೈ-ವೋಲ್ಟೇಜ್​ ಪಂದ್ಯವನ್ನು ಆಡಲಿದೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

22 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

22 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

22 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

22 hours ago